Homeಮುಖಪುಟಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; 'ಕಮಲ' ಬಿಟ್ಟು 'ಕೈ' ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

ಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; ‘ಕಮಲ’ ಬಿಟ್ಟು ‘ಕೈ’ ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

- Advertisement -
- Advertisement -

ಹರಿಯಾಣದಲ್ಲಿ ಮೂವರು ಸ್ವತಂತ್ರ ಶಾಸಕರು ಆಡಳಿತಾರೂಢ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದು ಕಾಂಗ್ರೆಸ್‌ಗೆ ಸೇರಿದ ಕೆಲವೇ ದಿನಗಳಲ್ಲಿ, ಕುರುಕ್ಷೇತ್ರದಿಂದ ಎರಡು ಅವಧಿಗೆ ಸಂಸದೆಯಾಗಿದ್ದ ಕೈಲಾಶೋ ಸೈನಿ ಅವರು ಕೇಸರಿ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಕೈ ಹಿಡಿದಿದ್ದಾರೆ.

ಕೈಲಾಶೋ ಅವರನ್ನು ಕುರುಕ್ಷೇತ್ರ ಜಿಲ್ಲೆಯ ಪ್ರಮುಖ ಒಬಿಸಿ ನಾಯಕಿ ಎಂದು ಪರಿಗಣಿಸಲಾಗಿದೆ. ಮೇ 25 ರ ಲೋಕಸಭೆ ಚುನಾವಣೆಯಲ್ಲಿ ಕುರುಕ್ಷೇತ್ರದಲ್ಲಿ ಇಂಡಿಯಾ ಬ್ಲಾಕ್ ಬೆಂಬಲಿತ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಶೀಲ್ ಗುಪ್ತಾ ಪರವಾಗಿ ಪ್ರಚಾರ ಮಾಡುವುದಾಗಿ ಅವರು ಘೋಷಿಸಿದರು.

ಅವರು 1998 ಮತ್ತು 1999 ರಲ್ಲಿ ಕುರುಕ್ಷೇತ್ರ ಲೋಕಸಭಾ ಸ್ಥಾನದಿಂದ ಕ್ರಮವಾಗಿ ಹರಿಯಾಣ ಲೋಕದಳ (ರಾಷ್ಟ್ರೀಯ) ಮತ್ತು ಭಾರತೀಯ ರಾಷ್ಟ್ರೀಯ ಲೋಕದಳದ ಟಿಕೆಟ್‌ಗಳಲ್ಲಿ ಆಯ್ಕೆಯಾದರು. ಐಎನ್‌ಡಿಎಲ್ ಅನ್ನು ಮೊದಲು ಹರಿಯಾಣ ಲೋಕದಳ (ರಾಷ್ಟ್ರೀಯ) ಎಂದು ಕರೆಯಲಾಗುತ್ತಿತ್ತು.

ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಕೈಲಾಶೋ ಮಾತನಾಡಿ, “ರಾಜ್ಯದಲ್ಲಿ 10 ವರ್ಷಗಳ ಆಡಳಿತದಲ್ಲಿ ಸಮಾಜದ ಪ್ರತಿಯೊಂದು ವರ್ಗವನ್ನು ಗೌರವಿಸಿದ ಭೂಪಿಂದರ್ ಸಿಂಗ್ ಹೂಡಾ ಅವರ ನೇತೃತ್ವದಲ್ಲಿ ನಾನು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ. ನಾನು ಬಹಳ ಸಮಯದಿಂದ ಯೋಚಿಸಿದ್ದೆ, ಕಾಂಗ್ರೆಸ್‌ನಂತಹ ಪ್ರಜಾಸತ್ತಾತ್ಮಕ ಪಕ್ಷ ಜಗತ್ತಿನಲ್ಲಿ ಬೇರೆಲ್ಲೂ ಇಲ್ಲ” ಎಂದರು.

ಪಕ್ಷ ತೊರೆಯಲು ಕಾರಣ ಹೇಳಿದ ಮಾಜಿ ಸಂಸದೆ, “ಬಿಜೆಪಿಯಲ್ಲಿ ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲ; ಸಂವಿಧಾನ ಬದಲಿಸುವ ಷಡ್ಯಂತ್ರ ನಡೆಯುತ್ತಿದೆ. ರೈತರನ್ನು ದೊಣ್ಣೆಗಳಿಂದ ಥಳಿಸಲಾಗಿದೆ” ಎಂದರು.

ಕೈಲಾಶೋ ಅವರನ್ನು ಸ್ವಾಗತಿಸಿದ ಹೂಡಾ, “ಹರ್ಯಾಣದಲ್ಲಿ ಸುಮಾರು 40 ಮಾಜಿ ಶಾಸಕರು ಮತ್ತು ಸಂಸದರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ, ಇತ್ತೀಚೆಗೆ ಪಕ್ಷಕ್ಕೆ ನೀಡಿದ ಮೂವರು ಸ್ವತಂತ್ರ ಶಾಸಕರ ಬೆಂಬಲವನ್ನು ಹೊರತುಪಡಿಸಿ. ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಬಹು,ತ ಕಳೆದುಕೊಂಡಿದೆ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದ್ದೇವೆ” ಎಂದರು.

ಕೈಲಾಶೋ ಅವರು ಸುಮಾರು ಮೂರು ದಶಕಗಳಿಂದ ಕುರುಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು 1996 ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಆಕ್ಷನ್ ಪಾರ್ಟಿಯ ಟಿಕೆಟ್‌ನಲ್ಲಿ ಕುರುಕ್ಷೇತ್ರದಲ್ಲಿ ಸ್ಪರ್ಧಿಸಿದರು. ಆದರೆ, ಹರಿಯಾಣ ವಿಕಾಸ್ ಪಕ್ಷದ ಅಭ್ಯರ್ಥಿ ಓ ಪಿ ಜಿಂದಾಲ್ ಅವರು ಚುನಾವಣಾ ಯುದ್ಧದಲ್ಲಿ ಗೆದ್ದರು. 1998 ರಲ್ಲಿ, ಅವರು ಹರಿಯಾಣ ಲೋಕದಳ (ರಾಷ್ಟ್ರೀಯ) ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಕಾಂಗ್ರೆಸ್‌ನ ಕುಲದೀಪ್ ಶರ್ಮಾ ಅವರನ್ನು ಸೋಲಿಸಿದರು. ಐಎನ್‌ಎಲ್‌ಡಿ ಅಭ್ಯರ್ಥಿಯಾಗಿ ಕೈಲಾಶೋ ಕ್ಷೇತ್ರದಿಂದ 1999 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಓ ಪಿ ಜಿಂದಾಲ್ ಅವರನ್ನು ಸೋಲಿಸಿದರು. ಜಿಂದಾಲ್ ಪುತ್ರ ನವೀನ್ ಜಿಂದಾಲ್ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

2009ರಲ್ಲಿ ಹೂಡಾ ಮುಖ್ಯಮಂತ್ರಿಯಾಗಿದ್ದಾಗ ಕೈಲಾಶೋ ಕಾಂಗ್ರೆಸ್ ಸೇರಿದ್ದರು. ಆದಾಗ್ಯೂ, ಅವರು ಎರಡು ವಿಧಾನಸಭಾ ಚುನಾವಣೆಗಳಲ್ಲಿ (2009 ಮತ್ತು 2014) ಲಾಡ್ವಾ ಕ್ಷೇತ್ರದಿಂದ ಸೋತರು. 2019 ರ ವಿಧಾನಸಭಾ ಚುನಾವಣೆಗೆ ಮುನ್ನ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

ಇದನ್ನೂ ಓದಿ; ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...