Homeಮುಖಪುಟಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; 'ಕಮಲ' ಬಿಟ್ಟು 'ಕೈ' ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

ಹರಿಯಾಣ ಬಿಜೆಪಿಗೆ ಮತ್ತೊಂದು ಹಿನ್ನಡೆ; ‘ಕಮಲ’ ಬಿಟ್ಟು ‘ಕೈ’ ಹಿಡಿದ ಕುರುಕ್ಷೇತ್ರ ಮಾಜಿ ಸಂಸದೆ

- Advertisement -
- Advertisement -

ಹರಿಯಾಣದಲ್ಲಿ ಮೂವರು ಸ್ವತಂತ್ರ ಶಾಸಕರು ಆಡಳಿತಾರೂಢ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದು ಕಾಂಗ್ರೆಸ್‌ಗೆ ಸೇರಿದ ಕೆಲವೇ ದಿನಗಳಲ್ಲಿ, ಕುರುಕ್ಷೇತ್ರದಿಂದ ಎರಡು ಅವಧಿಗೆ ಸಂಸದೆಯಾಗಿದ್ದ ಕೈಲಾಶೋ ಸೈನಿ ಅವರು ಕೇಸರಿ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರ ಸಮ್ಮುಖದಲ್ಲಿ ಕೈ ಹಿಡಿದಿದ್ದಾರೆ.

ಕೈಲಾಶೋ ಅವರನ್ನು ಕುರುಕ್ಷೇತ್ರ ಜಿಲ್ಲೆಯ ಪ್ರಮುಖ ಒಬಿಸಿ ನಾಯಕಿ ಎಂದು ಪರಿಗಣಿಸಲಾಗಿದೆ. ಮೇ 25 ರ ಲೋಕಸಭೆ ಚುನಾವಣೆಯಲ್ಲಿ ಕುರುಕ್ಷೇತ್ರದಲ್ಲಿ ಇಂಡಿಯಾ ಬ್ಲಾಕ್ ಬೆಂಬಲಿತ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಶೀಲ್ ಗುಪ್ತಾ ಪರವಾಗಿ ಪ್ರಚಾರ ಮಾಡುವುದಾಗಿ ಅವರು ಘೋಷಿಸಿದರು.

ಅವರು 1998 ಮತ್ತು 1999 ರಲ್ಲಿ ಕುರುಕ್ಷೇತ್ರ ಲೋಕಸಭಾ ಸ್ಥಾನದಿಂದ ಕ್ರಮವಾಗಿ ಹರಿಯಾಣ ಲೋಕದಳ (ರಾಷ್ಟ್ರೀಯ) ಮತ್ತು ಭಾರತೀಯ ರಾಷ್ಟ್ರೀಯ ಲೋಕದಳದ ಟಿಕೆಟ್‌ಗಳಲ್ಲಿ ಆಯ್ಕೆಯಾದರು. ಐಎನ್‌ಡಿಎಲ್ ಅನ್ನು ಮೊದಲು ಹರಿಯಾಣ ಲೋಕದಳ (ರಾಷ್ಟ್ರೀಯ) ಎಂದು ಕರೆಯಲಾಗುತ್ತಿತ್ತು.

ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಕೈಲಾಶೋ ಮಾತನಾಡಿ, “ರಾಜ್ಯದಲ್ಲಿ 10 ವರ್ಷಗಳ ಆಡಳಿತದಲ್ಲಿ ಸಮಾಜದ ಪ್ರತಿಯೊಂದು ವರ್ಗವನ್ನು ಗೌರವಿಸಿದ ಭೂಪಿಂದರ್ ಸಿಂಗ್ ಹೂಡಾ ಅವರ ನೇತೃತ್ವದಲ್ಲಿ ನಾನು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ. ನಾನು ಬಹಳ ಸಮಯದಿಂದ ಯೋಚಿಸಿದ್ದೆ, ಕಾಂಗ್ರೆಸ್‌ನಂತಹ ಪ್ರಜಾಸತ್ತಾತ್ಮಕ ಪಕ್ಷ ಜಗತ್ತಿನಲ್ಲಿ ಬೇರೆಲ್ಲೂ ಇಲ್ಲ” ಎಂದರು.

ಪಕ್ಷ ತೊರೆಯಲು ಕಾರಣ ಹೇಳಿದ ಮಾಜಿ ಸಂಸದೆ, “ಬಿಜೆಪಿಯಲ್ಲಿ ಸಾರ್ವಜನಿಕರ ಬಗ್ಗೆ ಕಾಳಜಿ ಇಲ್ಲ; ಸಂವಿಧಾನ ಬದಲಿಸುವ ಷಡ್ಯಂತ್ರ ನಡೆಯುತ್ತಿದೆ. ರೈತರನ್ನು ದೊಣ್ಣೆಗಳಿಂದ ಥಳಿಸಲಾಗಿದೆ” ಎಂದರು.

ಕೈಲಾಶೋ ಅವರನ್ನು ಸ್ವಾಗತಿಸಿದ ಹೂಡಾ, “ಹರ್ಯಾಣದಲ್ಲಿ ಸುಮಾರು 40 ಮಾಜಿ ಶಾಸಕರು ಮತ್ತು ಸಂಸದರು ಈಗಾಗಲೇ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ, ಇತ್ತೀಚೆಗೆ ಪಕ್ಷಕ್ಕೆ ನೀಡಿದ ಮೂವರು ಸ್ವತಂತ್ರ ಶಾಸಕರ ಬೆಂಬಲವನ್ನು ಹೊರತುಪಡಿಸಿ. ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಬಹು,ತ ಕಳೆದುಕೊಂಡಿದೆ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ವಿಧಾನಸಭೆ ವಿಸರ್ಜಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಪತ್ರ ನೀಡಿದ್ದೇವೆ” ಎಂದರು.

ಕೈಲಾಶೋ ಅವರು ಸುಮಾರು ಮೂರು ದಶಕಗಳಿಂದ ಕುರುಕ್ಷೇತ್ರದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಅವರು 1996 ರ ಲೋಕಸಭಾ ಚುನಾವಣೆಯಲ್ಲಿ ಸೋಶಿಯಲ್ ಆಕ್ಷನ್ ಪಾರ್ಟಿಯ ಟಿಕೆಟ್‌ನಲ್ಲಿ ಕುರುಕ್ಷೇತ್ರದಲ್ಲಿ ಸ್ಪರ್ಧಿಸಿದರು. ಆದರೆ, ಹರಿಯಾಣ ವಿಕಾಸ್ ಪಕ್ಷದ ಅಭ್ಯರ್ಥಿ ಓ ಪಿ ಜಿಂದಾಲ್ ಅವರು ಚುನಾವಣಾ ಯುದ್ಧದಲ್ಲಿ ಗೆದ್ದರು. 1998 ರಲ್ಲಿ, ಅವರು ಹರಿಯಾಣ ಲೋಕದಳ (ರಾಷ್ಟ್ರೀಯ) ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ಕಾಂಗ್ರೆಸ್‌ನ ಕುಲದೀಪ್ ಶರ್ಮಾ ಅವರನ್ನು ಸೋಲಿಸಿದರು. ಐಎನ್‌ಎಲ್‌ಡಿ ಅಭ್ಯರ್ಥಿಯಾಗಿ ಕೈಲಾಶೋ ಕ್ಷೇತ್ರದಿಂದ 1999 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಓ ಪಿ ಜಿಂದಾಲ್ ಅವರನ್ನು ಸೋಲಿಸಿದರು. ಜಿಂದಾಲ್ ಪುತ್ರ ನವೀನ್ ಜಿಂದಾಲ್ ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

2009ರಲ್ಲಿ ಹೂಡಾ ಮುಖ್ಯಮಂತ್ರಿಯಾಗಿದ್ದಾಗ ಕೈಲಾಶೋ ಕಾಂಗ್ರೆಸ್ ಸೇರಿದ್ದರು. ಆದಾಗ್ಯೂ, ಅವರು ಎರಡು ವಿಧಾನಸಭಾ ಚುನಾವಣೆಗಳಲ್ಲಿ (2009 ಮತ್ತು 2014) ಲಾಡ್ವಾ ಕ್ಷೇತ್ರದಿಂದ ಸೋತರು. 2019 ರ ವಿಧಾನಸಭಾ ಚುನಾವಣೆಗೆ ಮುನ್ನ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.

ಇದನ್ನೂ ಓದಿ; ಮುಂದಿನ 10 ವರ್ಷಗಳಲ್ಲಿ ಒಡಿಶಾವನ್ನು ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ: ನವೀನ್ ಪಟ್ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...