Homeಮುಖಪುಟಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

- Advertisement -
- Advertisement -

ಆಂಧ್ರಪ್ರದೇಶದ ಹಲವೆಡೆ ಮತದಾನಕ್ಕೆ ನಮಗೆ ಹಣ ಕೊಟ್ಟಿಲ್ಲ ಎಂದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಚಿತ್ರ ಘಟನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಆಂಧ್ರದಲ್ಲಿ ಮತದಾನ ನಡೆಯುತ್ತಿದ್ದು, ಚುನಾವಣೆಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಉದ್ಭವಿಸಿದೆ.

ಎನ್‌ಡಿಎ ಪ್ರಚಾರ ಸಭೆಗೆ 500ರೂ.ಹಣದ ಆಮಿಷ ನೀಡಿ ಕರೆದುಕೊಂಡು ಬಂದು ಹಣ ಕೊಡದೆ ವಂಚನೆ ಮಾಡಲಾಗಿದೆ ಎಂದು ಮಹಿಳೆಯರು ಮಹರಾಷ್ಟ್ರದ ಔರಂಗಾಬಾದ್‌ನಲ್ಲಿ ಇತ್ತೀಚೆಗೆ ಆರೋಪಿಸಿದ್ದರು. ಇದೀಗ ಆಂಧ್ರಪ್ರದೇಶದ ಪಲಂಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಸ್ಥಳೀಯ ನಿವಾಸಿಗಳು ಮತದಾನಕ್ಕೆ ಮೊದಲು ಭರವಸೆ ನೀಡಿದ ಲಂಚದ ಹಣ ನಮಗೆ ಬಂದಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.

ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು ಹಣ ನೀಡುವುದಾಗಿ ಮುಖಂಡರೊಬ್ಬರು ಭರವಸೆ ನೀಡಿದ್ದಾರೆ. ಆದರೆ, ಭರವಸೆ ಈಡೇರಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಆಂಧ್ರದ ಕನಿಷ್ಠ ಐದು ಕಡೆ ಈ ರೀತಿಯ ಬೆಳವಣಿಗೆ ನಡೆದಿದೆ. ಆಂಧ್ರ ಪ್ರದೇಶದಲ್ಲಿಇದು ಹೊಸ ಬೆಳವಣಿಗೆಯಲ್ಲದಿದ್ದರೂ, ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಮತಕ್ಕೆ ಒಂದು ಸಾವಿರದಿಂದ 6,000 ರೂ.ವರೆಗೆ ಬೆಲೆ ನಿಗದಿ ಮಾಡಲಾಗಿದೆ ಎನ್ನಲಾಗಿದೆ.

ಈ ಘಟನೆಯು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ರಾಜಕಾರಣಿಗಳ ಹೊಣೆಗಾರಿಕೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಧಿಕಾರಿಗಳು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇನ್ನೂ ಮುಂದಾಗಿಲ್ಲ, ಆದರೆ ಪ್ರತಿಭಟನೆಯು ಚುನಾವಣೆಯಲ್ಲಿ ಪಾರದರ್ಶಕತೆ ಮತ್ತು ನೈತಿಕ ನಡವಳಿಕೆಯ ಅಗತ್ಯತೆಯ ಬಗ್ಗೆ ಗಮನ ಸೆಳೆದಿದೆ.

ಪೀತಂಪುರಂನಲ್ಲಿ ಅಭ್ಯರ್ಥಿಗಳ ಕಚೇರಿಗಳ ಮುಂದೆ ಮತದಾರರು ಹಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ಬೆಂಬಲಿಗರು ಪ್ರತಿ ಮತಕ್ಕೆ 5,000 ರೂ. ನೀಡುವ ಭರವಸೆ ನೀಡಿದ್ದು, ಮಹಿಳಾ ಮತದಾರರಿಗೆ ಹಣ ನೀಡಿಲ್ಲ ಎಂದು ಪ್ರತಿಭಟನೆ ನಡೆದಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಓಂಗೋಲ್‌ನಲ್ಲಿ ಪ್ರತಿ ಮತಕ್ಕೆ 5 ಸಾವಿರ ರೂ.ನಂತೆ ಹಣ ವಿತರಿಸಲಾಗಿದೆ. ಆದರೆ ಹಣ ಸಿಗದವರು ಪ್ರತಿಭಟನೆ ನಡೆಸಿದ್ದಾರೆ. ಇದಲ್ಲದೆ ಪೂರ್ವ ಗೋದಾವರಿ ಜಿಲ್ಲೆಯ ಕೊಂಡೇವರಂ ಗ್ರಾಮದಲ್ಲಿ ಮತದಾನ ಮಾಡಲು ಹಣಕ್ಕೆ ಬೇಡಿಕೆ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ವಿಜಯವಾಡದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡು ಬಂದಿದ್ದು, ಪಾಲಿಕೆ ಸದಸ್ಯರ ಮನೆಯಲ್ಲಿ ಪ್ರತಿ ಮತಕ್ಕೆ ಒಂದು ಸಾವಿರ ರೂಪಾಯಿಯಂತೆ ವಿತರಿಸಲಾಗಿದೆ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದಲ್ಲಿ ಇಂದು ಲೋಕಸಭೆಗೆ ಮತ್ತು ರಾಜ್ಯ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಹಿಂಸಾಚಾರ ವರದಿಯಾಗಿದೆ. ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ(ಸಿಇಒ) ಮುಕೇಶ್ ಕುಮಾರ್ ಮೀನಾ ಮಾತನಾಡಿ, ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ ಮೂವರು ಟಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...