Homeಮುಖಪುಟಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

- Advertisement -
- Advertisement -

ಆಂಧ್ರಪ್ರದೇಶದ ಹಲವೆಡೆ ಮತದಾನಕ್ಕೆ ನಮಗೆ ಹಣ ಕೊಟ್ಟಿಲ್ಲ ಎಂದು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ವಿಚಿತ್ರ ಘಟನೆ ನಡೆದಿದೆ. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಆಂಧ್ರದಲ್ಲಿ ಮತದಾನ ನಡೆಯುತ್ತಿದ್ದು, ಚುನಾವಣೆಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಉದ್ಭವಿಸಿದೆ.

ಎನ್‌ಡಿಎ ಪ್ರಚಾರ ಸಭೆಗೆ 500ರೂ.ಹಣದ ಆಮಿಷ ನೀಡಿ ಕರೆದುಕೊಂಡು ಬಂದು ಹಣ ಕೊಡದೆ ವಂಚನೆ ಮಾಡಲಾಗಿದೆ ಎಂದು ಮಹಿಳೆಯರು ಮಹರಾಷ್ಟ್ರದ ಔರಂಗಾಬಾದ್‌ನಲ್ಲಿ ಇತ್ತೀಚೆಗೆ ಆರೋಪಿಸಿದ್ದರು. ಇದೀಗ ಆಂಧ್ರಪ್ರದೇಶದ ಪಲಂಡು ಜಿಲ್ಲೆಯ ಸತ್ತೇನಪಲ್ಲಿಯಲ್ಲಿ ಸ್ಥಳೀಯ ನಿವಾಸಿಗಳು ಮತದಾನಕ್ಕೆ ಮೊದಲು ಭರವಸೆ ನೀಡಿದ ಲಂಚದ ಹಣ ನಮಗೆ ಬಂದಿಲ್ಲ ಎಂದು ಪ್ರತಿಭಟನೆ ನಡೆಸಿದ್ದಾರೆ.

ನಿರ್ದಿಷ್ಟ ಅಭ್ಯರ್ಥಿಗೆ ಮತ ಹಾಕಲು ಹಣ ನೀಡುವುದಾಗಿ ಮುಖಂಡರೊಬ್ಬರು ಭರವಸೆ ನೀಡಿದ್ದಾರೆ. ಆದರೆ, ಭರವಸೆ ಈಡೇರಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಆಂಧ್ರದ ಕನಿಷ್ಠ ಐದು ಕಡೆ ಈ ರೀತಿಯ ಬೆಳವಣಿಗೆ ನಡೆದಿದೆ. ಆಂಧ್ರ ಪ್ರದೇಶದಲ್ಲಿಇದು ಹೊಸ ಬೆಳವಣಿಗೆಯಲ್ಲದಿದ್ದರೂ, ವಿಧಾನಸಭಾ ಮತ್ತು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಮತಕ್ಕೆ ಒಂದು ಸಾವಿರದಿಂದ 6,000 ರೂ.ವರೆಗೆ ಬೆಲೆ ನಿಗದಿ ಮಾಡಲಾಗಿದೆ ಎನ್ನಲಾಗಿದೆ.

ಈ ಘಟನೆಯು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ರಾಜಕಾರಣಿಗಳ ಹೊಣೆಗಾರಿಕೆಯ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಧಿಕಾರಿಗಳು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಲು ಇನ್ನೂ ಮುಂದಾಗಿಲ್ಲ, ಆದರೆ ಪ್ರತಿಭಟನೆಯು ಚುನಾವಣೆಯಲ್ಲಿ ಪಾರದರ್ಶಕತೆ ಮತ್ತು ನೈತಿಕ ನಡವಳಿಕೆಯ ಅಗತ್ಯತೆಯ ಬಗ್ಗೆ ಗಮನ ಸೆಳೆದಿದೆ.

ಪೀತಂಪುರಂನಲ್ಲಿ ಅಭ್ಯರ್ಥಿಗಳ ಕಚೇರಿಗಳ ಮುಂದೆ ಮತದಾರರು ಹಣಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ಬೆಂಬಲಿಗರು ಪ್ರತಿ ಮತಕ್ಕೆ 5,000 ರೂ. ನೀಡುವ ಭರವಸೆ ನೀಡಿದ್ದು, ಮಹಿಳಾ ಮತದಾರರಿಗೆ ಹಣ ನೀಡಿಲ್ಲ ಎಂದು ಪ್ರತಿಭಟನೆ ನಡೆದಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಓಂಗೋಲ್‌ನಲ್ಲಿ ಪ್ರತಿ ಮತಕ್ಕೆ 5 ಸಾವಿರ ರೂ.ನಂತೆ ಹಣ ವಿತರಿಸಲಾಗಿದೆ. ಆದರೆ ಹಣ ಸಿಗದವರು ಪ್ರತಿಭಟನೆ ನಡೆಸಿದ್ದಾರೆ. ಇದಲ್ಲದೆ ಪೂರ್ವ ಗೋದಾವರಿ ಜಿಲ್ಲೆಯ ಕೊಂಡೇವರಂ ಗ್ರಾಮದಲ್ಲಿ ಮತದಾನ ಮಾಡಲು ಹಣಕ್ಕೆ ಬೇಡಿಕೆ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ವಿಜಯವಾಡದಲ್ಲೂ ಇದೇ ರೀತಿಯ ಬೆಳವಣಿಗೆ ಕಂಡು ಬಂದಿದ್ದು, ಪಾಲಿಕೆ ಸದಸ್ಯರ ಮನೆಯಲ್ಲಿ ಪ್ರತಿ ಮತಕ್ಕೆ ಒಂದು ಸಾವಿರ ರೂಪಾಯಿಯಂತೆ ವಿತರಿಸಲಾಗಿದೆ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದಲ್ಲಿ ಇಂದು ಲೋಕಸಭೆಗೆ ಮತ್ತು ರಾಜ್ಯ ವಿಧಾನಸಭೆಗೆ ಮತದಾನ ನಡೆಯುತ್ತಿದೆ. ರಾಜ್ಯದ ಕೆಲವು ಮತಗಟ್ಟೆಗಳಲ್ಲಿ ಹಿಂಸಾಚಾರ ವರದಿಯಾಗಿದೆ. ಆಂಧ್ರಪ್ರದೇಶದ ಮುಖ್ಯ ಚುನಾವಣಾಧಿಕಾರಿ(ಸಿಇಒ) ಮುಕೇಶ್ ಕುಮಾರ್ ಮೀನಾ ಮಾತನಾಡಿ, ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾದ ಮೂವರು ಟಿಡಿಪಿ ಪೋಲಿಂಗ್ ಏಜೆಂಟ್‌ಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...