Homeಫ್ಯಾಕ್ಟ್‌ಚೆಕ್FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು...

FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

- Advertisement -
- Advertisement -

“ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತೀಯ ಸೇನೆಯಿಂದ ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ ನೀಡುತ್ತೇವೆ ಮತ್ತು ಸೆರೆಮನೆಯಲ್ಲಿರುವ ಎಲ್ಲಾ ಉಗ್ರರನ್ನು ಬಿಡುಗಡೆ ಮಾಡುತ್ತೇವೆ” (ಸಗೀರ್ ಸಯೀದ್ ಖಾನ್- ಕಾಂಗ್ರೆಸ್ ನಾಯಕ) ಎಂದು ಬರೆದು ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

‘ಕೇಸರಿ ಪಡೆ’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್‌ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ‘ಸಗೀರ್ ಸಯೀದ್ ಖಾನ್’ ಎಂದು ಬರೆದಿರುವುದರಿಂದ ನಾವು ಆ ವ್ಯಕ್ತಿ ಅಂತಹ ಹೇಳಿಕೆ ಕೊಟ್ಟಿದ್ದಾರೆಯೇ? ಎಂದು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಗೂಗಲ್‌ನಲ್ಲಿ ಕೀ ವರ್ಡ್‌ ಬಳಸಿ ಹುಡುಕಾಡಿದಾಗ 26 ಡಿಸೆಂಬರ್ 2018ರಂದು ‘ರಿಪಬ್ಲಿಕ್ ವರ್ಲ್ಡ್’ ಸುದ್ದಿ ವಾಹಿನಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ್ದ ವಿಡಿಯೋ ದೊರೆತಿದೆ. “Congress Makes Terror Reward Promise In Jammu And Kashmir” ಎಂಬ ಶೀರ್ಷಿಕೆಯ ವಿಡಿಯೋದಲ್ಲಿ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕರ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯಿದೆ.

ವಿಡಿಯೋದಲ್ಲಿ, “ಕಾಶ್ಮೀರವನ್ನು ಸ್ವರ್ಗ ಎಂದು ಕರೆಯಲಾಗುತ್ತಿತ್ತು, ಈಗ ಶವಗಳಿಂದ ತುಂಬಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಲ್ಲಿ ಕೊಲ್ಲಲ್ಪಟ್ಟ ಅಮಾಯಕರ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ಮತ್ತು ಒಬ್ಬರಿಗೆ ಉದ್ಯೋಗ ನೀಡಲಾಗುವುದು. ಭಯೋತ್ಪಾದನೆ ಪ್ರಕರಣಗಳಲ್ಲಿ ಕಂಬಿ ಹಿಂದೆ ಬಿದ್ದಿರುವ ಅಮಾಯಕರನ್ನು ಬಿಡುಗಡೆ ಮಾಡಲಾಗುವುದು. ಇಲ್ಲಿನ ಹತ್ಯೆಗಳಿಗೆ ಕಾರಣರಾದ ಬಿಜೆಪಿ ನಾಯಕರು, ಅವರು ಎಷ್ಟೇ ಪ್ರಮುಖರು ಮತ್ತು ಶಕ್ತಿಶಾಲಿಗಳಾಗಿದ್ದರೂ, ಹೊಸ ಕಾನೂನನ್ನು ಜಾರಿಗೊಳಿಸಲಾಗುವುದು ಮತ್ತು ಅವರನ್ನು ಗಲ್ಲಿಗೇರಿಸಲಾಗುವುದು. ಏಕೆಂದರೆ ಸೇನೆಯು ಅವರ ಆದೇಶವನ್ನು ಅನುಸರಿಸುತ್ತಿದೆ” ಎಂದು ಸಗೀರ್ ಸಯೀದ್ ಖಾನ್ ಹೇಳಿರುವುದು ಇದೆ.

ಡಿಸೆಂಬರ್ 27, 2018ರಂದು “Congress Leader Sagheer Saeed Khan Lands Party In A Soup” ಎಂಬ ಶೀರ್ಷಿಕೆಯಲ್ಲಿ ಎಬಿಪಿ ನ್ಯೂಸ್ ಕೂಡ ಈ ಕುರಿತ ಸುದ್ದಿಯ ವಿಡಿಯೋವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿತ್ತು. ಅದರಲ್ಲೂ ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ನಿರ್ದೋಷಿಗಳ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುತ್ತೇವೆ. ಅವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುತ್ತೇವೆ. ಶಂಕಿತ ಭಯೋತ್ಪಾದಕರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು” ಎಂದು ಖಾನ್ ಹೇಳಿರುವುದು ಇದೆ.

ಸಗೀರ್ ಸಯೀದ್ ಹೇಳಿಕೆಯನ್ನು ಕಾಂಗ್ರೆಸ್ ನಿರಾಕರಿಸಿತ್ತು:

ಮಾಧ್ಯಮಗಳಲ್ಲಿ ವರದಿಯಾದ ಸಗೀರ್ ಸಯೀದ್ ಖಾನ್ ಅವರ ಹೇಳಿಕೆಯ ಕುರಿತು ಡಿಸೆಂಬರ್ 26, 2018 ರಂದು ಫೇಸ್‌ಬುಕ್ ಪೋಸ್ಟ್ ಮೂಲಕ ಜಮ್ಮು ಕಾಶ್ಮೀರ ಕಾಂಗ್ರೆಸ್ (ಜೆಕೆಪಿಸಿಸಿ) ಪ್ರತಿಕ್ರಿಯಿಸಿತ್ತು. ಜೆಕೆಪಿಸಿಸಿ ಮುಖ್ಯಸ್ಥ ರವೀಂದರ್ ಶರ್ಮಾ ಅವರು ವಿಡಿಯೋ ಮೂಲಕ ಮಾತನಾಡಿ ಸಗೀರ್ ಸಯೀದ್ ಅವರ ಹೇಳಿಕೆಯನ್ನು ನಿರಾಕರಿಸಿದ್ದರು. ಸಗೀರ್ ಅವರು ಜೆಕೆಪಿಸಿಸಿಯ ಅನುಮತಿ ಇಲ್ಲದೆ ಪಕ್ಷದ ನೀತಿಯ ಬಗ್ಗೆ ಯಾವುದೇ ಹೇಳಿಕೆ ನೀಡಲು ಅನುಮತಿಯಿಲ್ಲ. ಅವರು ಪಕ್ಷದ ವಕ್ತಾರರಲ್ಲ. ಪಕ್ಷದ ಅಲ್ಪಸಂಖ್ಯಾತ ವಿಭಾಗದಿಂದ ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

Congress leader

“ಭಯೋತ್ಪಾದನೆಯನ್ನು ಕಟ್ಟುನಿಟ್ಟಾಗಿ ಎದುರಿಸಬೇಕು ಮತ್ತು ಜನರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬುವುದು ಪಕ್ಷದ ನಿಲುವು. ಕೇಂದ್ರ ನಾಯಕತ್ವದ ಅನುಮೋದನೆ ಮತ್ತು ನಾಮನಿರ್ದೇಶಿತ ಅಧಿಕೃತ ವಕ್ತಾರರ ಅನುಮೋದನೆಯಿಲ್ಲದೆ ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡಲು ಯಾರಿಗೂ ಅಧಿಕಾರವಿಲ್ಲ. ಹಾಗಾಗಿ ಸಗೀರ್ ಖಾನ್ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳಬಾರದು” ಎಂದು ರವಿಂದರ್ ಶರ್ಮಾ ಹೇಳಿದ್ದರು.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೆಂದರೆ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಅಲ್ಪ ಸಂಖ್ಯಾತ ವಿಭಾಗದ ಮುಖ್ಯಸ್ಥರಾಗಿದ್ದ ಹಾಜಿ ಸಗೀರ್ ಸಯೀದ್ ಖಾನ್ ಅವರು, ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಯ ಹೆಸರಿನಲ್ಲಿ ಕೊಲ್ಲಲ್ಪಟ್ಟ ಅಮಾಯಕ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಲಾಗುವುದು ಮತ್ತು ಅವರ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದಿದ್ದರು. ಅಲ್ಲದೆ, ಭಯೋತ್ಪಾದನೆಯ ಹೆಸರಿನಲ್ಲಿ ಬಂಧಿತರಾಗಿರುವ ಅಮಾಯಕನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಅಲ್ಲದೆ, ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಪರಿಹಾರ, ಉದ್ಯೋಗ ನೀಡಲಾಗುವುದು ಮತ್ತು ಉಗ್ರರನ್ನು ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಿರಲಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ವಿಡಿಯೋ 2018ರದ್ದಾಗಿದೆ. ಅಲ್ಲದೆ, ಸಗೀರ್ ಸಯೀದ್ ಅವರ ಹೇಳಿಕೆಯನ್ನು ಕಾಂಗ್ರೆಸ್ ತಿರಸ್ಕರಿಸಿತ್ತು.

ಇದನ್ನೂ ಓದಿ : FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...