Homeಮುಖಪುಟಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಜನರು ಸರತಿ ಸಾಲಿನಲ್ಲಿ ನಿಂತು ಮತದಾನವನ್ನು ಮಾಡುತ್ತಿದ್ದಾರೆ. ಈ ಮಧ್ಯೆ ಸರತಿ ಸಾಲನ್ನು ಮೀರಿ ಮತದಾನಕ್ಕೆ ತೆರಳಿದ್ದ ಶಾಸಕರನ್ನು ಪ್ರಶ್ನಿಸಿದ ಮತದಾರನಿಗೆ ಶಾಸಕರು ಮತ್ತು ಅವರ ಬೆಂಬಲಿಗರು ಥಳಿಸಿರುವ ಘಟನೆ ನಡೆದಿದೆ. ಇದಲ್ಲದೆ ರಾಜ್ಯದಲ್ಲಿ ಹಲವೆಡೆ ಹಿಂಸಾತ್ಮಕ ಘಟನೆಗಳು ವರದಿಯಾಗಿದೆ.

ವೈಎಸ್ಆರ್‌ಸಿಪಿ ತೆನಾಲಿ ಕ್ಷೇತ್ರದ ಶಾಸಕ ಅನ್ನಾಬತ್ತಿನ ಶಿವಕುಮಾರ್ ತೆನಾಲಿಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರನೋರ್ವನಿಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ ಶಾಸಕರು ಮತದಾರನಿಗೆ ಕಪಾಳಮೋಕ್ಷ ಮಾಡುವುದು ಮತ್ತು ಇದಕ್ಕೆ ಪ್ರತಿಯಾಗಿ ಶಾಸಕರಿಗೆ ಮತದಾರ ಮರು ಕಪಾಳಮೋಕ್ಷ ಮಾಡಿರುವುದು ಸೆರೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ಆತನಿಗೆ ಹಿಗ್ಗಾ-ಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇನ್ನು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಮಾಚರ್ಲಾ ಕ್ಷೇತ್ರದ ರೆಂಟಾಲಾ ಮತ್ತು ಪಲಾಂಡು ಜಿಲ್ಲೆಯ ಗುರಜಾಲದಲ್ಲಿ ಉದ್ವಿಗ್ನತೆ ಉಂಟಾಗಿದೆ. ಎರಡೂ ಕಡೆಯವರು ಪರಸ್ಪರ ಕಲ್ಲುಗಳನ್ನು ತೂರಾಟ ನಡೆಸಿದ್ದಾರೆ, ದೊಣ್ಣೆಗಳನ್ನು ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು ಪಲ್ನಾಡು ರೆಂಟಾಲ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಸುಗಮವಾಗಿ ಚುನಾವಣೆ ನಡೆಸುವಂತೆ ಸಿಇಒಗೆ ಸೂಚಿಸಿದೆ.

ಇನ್ನು ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಮತಗಟ್ಟೆಗೆ ನುಗ್ಗಿ ಇವಿಎಂಗಳನ್ನು ಹಾನಿಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ದರ್ಸಿ ವಿಧಾನಸಭಾ ಕ್ಷೇತ್ರದ ಬೊಟ್ಲಪಾಲೆಂ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಇವಿಎಂಗಳು ಹಾನಿಗೊಂಡಿದೆ, ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು. ಚುನಾವಣಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಮತ್ತೆ ಮತದಾನಕ್ಕೆ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಪ್ರಕ್ಷಂ ಜಿಲ್ಲಾ ಚುನಾವಣಾಧಿಕಾರಿ ಎಎಸ್ ದಿನೇಶ್ ಕುಮಾರ್ ಆದೇಶಿಸಿದ್ದಾರೆ. ಸ್ಥಳದಲ್ಲಿ  ಹೆಚ್ಚಿನ ತೊಂದರೆಯಾಗದಂತೆ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಚಿತ್ತೂರು ಜಿಲ್ಲೆಯ ಕಾರ್ವೇಟಿನಗರದ ಅಣ್ಣೂರು ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ಮತ್ತು ಟಿಡಿಪಿ ಶಾಸಕ ಥಾಮಸ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.

ಅಮದಲವಲಸ ವಿಧಾನಸಭಾ ಕ್ಷೇತ್ರದ ಪೊಂದೂರು ಮಂಡಲದ ಗೋಕರ್ಣಪಲ್ಲಿಯಲ್ಲಿ ಟಿಡಿಪಿ ಮತ್ತು ವೈಎಸ್‌ಆರ್‌ಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ವೈಎಸ್‌ಆರ್‌ಸಿ ಅಭ್ಯರ್ಥಿ ತಮಿನೇನಿ ಸೀತಾರಾಂ ಅವರ ಪತ್ನಿ ತಮಿನೇನಿ ವಾಣಿ ಅವರು ಜನರಲ್ ಏಜೆಂಟ್ ಆಗಿ ಮತಗಟ್ಟೆಗೆ ಪ್ರವೇಶಿಸಿದ್ದು, ಟಿಡಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಮತ್ತೊಂದೆಡೆ, ಪುಂಗನೂರು ವಿಧಾನಸಭಾ ಕ್ಷೇತ್ರದ ಸದ್ದುಂ ಮಂಡಲದ ಬೋರಕಮಂಡ ಗ್ರಾಮದಲ್ಲಿ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟ್‌ಗಳನ್ನು ವೈಎಸ್‌ಆರ್‌ಸಿ ಕಾರ್ಯಕರ್ತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಕೂಡಲೇ ಪೊಲೀಸರು ಅವರನ್ನು ಪಿಲೇರುವಿನಲ್ಲಿ ಪತ್ತೆ ಹಚ್ಚಿ ಬೋರಕಮಂಡಕ್ಕೆ ಕರೆತಂದಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...