Homeಮುಖಪುಟಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಜನರು ಸರತಿ ಸಾಲಿನಲ್ಲಿ ನಿಂತು ಮತದಾನವನ್ನು ಮಾಡುತ್ತಿದ್ದಾರೆ. ಈ ಮಧ್ಯೆ ಸರತಿ ಸಾಲನ್ನು ಮೀರಿ ಮತದಾನಕ್ಕೆ ತೆರಳಿದ್ದ ಶಾಸಕರನ್ನು ಪ್ರಶ್ನಿಸಿದ ಮತದಾರನಿಗೆ ಶಾಸಕರು ಮತ್ತು ಅವರ ಬೆಂಬಲಿಗರು ಥಳಿಸಿರುವ ಘಟನೆ ನಡೆದಿದೆ. ಇದಲ್ಲದೆ ರಾಜ್ಯದಲ್ಲಿ ಹಲವೆಡೆ ಹಿಂಸಾತ್ಮಕ ಘಟನೆಗಳು ವರದಿಯಾಗಿದೆ.

ವೈಎಸ್ಆರ್‌ಸಿಪಿ ತೆನಾಲಿ ಕ್ಷೇತ್ರದ ಶಾಸಕ ಅನ್ನಾಬತ್ತಿನ ಶಿವಕುಮಾರ್ ತೆನಾಲಿಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರನೋರ್ವನಿಗೆ ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವೈರಲ್‌ ವಿಡಿಯೋದಲ್ಲಿ ಶಾಸಕರು ಮತದಾರನಿಗೆ ಕಪಾಳಮೋಕ್ಷ ಮಾಡುವುದು ಮತ್ತು ಇದಕ್ಕೆ ಪ್ರತಿಯಾಗಿ ಶಾಸಕರಿಗೆ ಮತದಾರ ಮರು ಕಪಾಳಮೋಕ್ಷ ಮಾಡಿರುವುದು ಸೆರೆಯಾಗಿದೆ. ಈ ವೇಳೆ ಶಾಸಕರ ಬೆಂಬಲಿಗರು ಆತನಿಗೆ ಹಿಗ್ಗಾ-ಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

 

ಇನ್ನು ಟಿಡಿಪಿ ಮತ್ತು ವೈಎಸ್‌ಆರ್‌ಸಿಪಿ ಕಾರ್ಯಕರ್ತರ ನಡುವಿನ ಘರ್ಷಣೆಯಿಂದ ಮಾಚರ್ಲಾ ಕ್ಷೇತ್ರದ ರೆಂಟಾಲಾ ಮತ್ತು ಪಲಾಂಡು ಜಿಲ್ಲೆಯ ಗುರಜಾಲದಲ್ಲಿ ಉದ್ವಿಗ್ನತೆ ಉಂಟಾಗಿದೆ. ಎರಡೂ ಕಡೆಯವರು ಪರಸ್ಪರ ಕಲ್ಲುಗಳನ್ನು ತೂರಾಟ ನಡೆಸಿದ್ದಾರೆ, ದೊಣ್ಣೆಗಳನ್ನು ಬಳಸಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ.

ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು ಪಲ್ನಾಡು ರೆಂಟಾಲ ಮತ್ತು ಇತರ ಸ್ಥಳಗಳಿಗೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಸುಗಮವಾಗಿ ಚುನಾವಣೆ ನಡೆಸುವಂತೆ ಸಿಇಒಗೆ ಸೂಚಿಸಿದೆ.

ಇನ್ನು ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಮತಗಟ್ಟೆಗೆ ನುಗ್ಗಿ ಇವಿಎಂಗಳನ್ನು ಹಾನಿಗೊಳಿಸಿದ್ದಾರೆ. ಪ್ರಕಾಶಂ ಜಿಲ್ಲೆಯ ದರ್ಸಿ ವಿಧಾನಸಭಾ ಕ್ಷೇತ್ರದ ಬೊಟ್ಲಪಾಲೆಂ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಇವಿಎಂಗಳು ಹಾನಿಗೊಂಡಿದೆ, ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು. ಚುನಾವಣಾಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿ ಮತ್ತೆ ಮತದಾನಕ್ಕೆ ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಪ್ರಕ್ಷಂ ಜಿಲ್ಲಾ ಚುನಾವಣಾಧಿಕಾರಿ ಎಎಸ್ ದಿನೇಶ್ ಕುಮಾರ್ ಆದೇಶಿಸಿದ್ದಾರೆ. ಸ್ಥಳದಲ್ಲಿ  ಹೆಚ್ಚಿನ ತೊಂದರೆಯಾಗದಂತೆ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ಚಿತ್ತೂರು ಜಿಲ್ಲೆಯ ಕಾರ್ವೇಟಿನಗರದ ಅಣ್ಣೂರು ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಕೆ ನಾರಾಯಣ ಸ್ವಾಮಿ ಮತ್ತು ಟಿಡಿಪಿ ಶಾಸಕ ಥಾಮಸ್ ಅವರ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಇದರಿಂದ ಕೆಲಕಾಲ ಉದ್ವಿಗ್ನತೆ ಉಂಟಾಗಿತ್ತು.

ಅಮದಲವಲಸ ವಿಧಾನಸಭಾ ಕ್ಷೇತ್ರದ ಪೊಂದೂರು ಮಂಡಲದ ಗೋಕರ್ಣಪಲ್ಲಿಯಲ್ಲಿ ಟಿಡಿಪಿ ಮತ್ತು ವೈಎಸ್‌ಆರ್‌ಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್‌ ಪಡೆಗಳನ್ನು ನಿಯೋಜಿಸಲಾಗಿದೆ. ವೈಎಸ್‌ಆರ್‌ಸಿ ಅಭ್ಯರ್ಥಿ ತಮಿನೇನಿ ಸೀತಾರಾಂ ಅವರ ಪತ್ನಿ ತಮಿನೇನಿ ವಾಣಿ ಅವರು ಜನರಲ್ ಏಜೆಂಟ್ ಆಗಿ ಮತಗಟ್ಟೆಗೆ ಪ್ರವೇಶಿಸಿದ್ದು, ಟಿಡಿಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಘರ್ಷಣೆಗೆ ಕಾರಣವಾಗಿದೆ.

ಮತ್ತೊಂದೆಡೆ, ಪುಂಗನೂರು ವಿಧಾನಸಭಾ ಕ್ಷೇತ್ರದ ಸದ್ದುಂ ಮಂಡಲದ ಬೋರಕಮಂಡ ಗ್ರಾಮದಲ್ಲಿ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟ್‌ಗಳನ್ನು ವೈಎಸ್‌ಆರ್‌ಸಿ ಕಾರ್ಯಕರ್ತರು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಕೂಡಲೇ ಪೊಲೀಸರು ಅವರನ್ನು ಪಿಲೇರುವಿನಲ್ಲಿ ಪತ್ತೆ ಹಚ್ಚಿ ಬೋರಕಮಂಡಕ್ಕೆ ಕರೆತಂದಿದ್ದಾರೆ.

ಇದನ್ನು ಓದಿ: ಮೋದಿ ಕೈಗೆ ಮತ್ತೆ ಅಧಿಕಾರ ಕೊಟ್ಟರೆ ಬಡವರು, ದಲಿತರನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...