Homeಮುಖಪುಟದ್ವೇಷ ಭಾಷಣ: ಮೋದಿ ವಿರುದ್ಧ ಎಫ್‌ಐಆರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ದ್ವೇಷ ಭಾಷಣ: ಮೋದಿ ವಿರುದ್ಧ ಎಫ್‌ಐಆರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ದ್ವೇಷ ಭಾಷಣಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ‘ತಪ್ಪಾಗಿ ಗ್ರಹಿಸಲಾಗಿದೆ’ ಎಂದು ತಿರಸ್ಕರಿಸಿದೆ.

ನ್ಯಾಯಮೂರ್ತಿ ಸಚಿನ್ ದತ್ತಾ ಈ ಕುರಿತ ಅರ್ಜಿಯನ್ನು ತಿರಸ್ಕರಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಚುನಾವಣಾ ಆಯೋಗವು ಈಗಾಗಲೇ ಈ ವಿಷಯವನ್ನು ಪರಿಗಣಿಸಿರುವುದರಿಂದ ಈ ಬಗ್ಗೆ ಅರ್ಜಿಯ ವಿಚಾರಣೆ ಮಾಡುವುದಿಲ್ಲ ಹೈಕೋರ್ಟ್‌ ಹೇಳಿದೆ. ಚುನಾವಣಾ ಆಯೋಗ ಯಾರಿಗೆ ನೋಟಿಸ್ ನೀಡಬೇಕೆಂದು ನಾವು ನಿರ್ಧರಿಸಲು ಸಾಧ್ಯವಿಲ್ಲ. ಅವರು ಏನನ್ನೂ ಮಾಡುವುದಿಲ್ಲ ಎಂದು ನಾವು ಊಹಿಸಲು ಸಾಧ್ಯವಿಲ್ಲ. ಆಯೋಗ ಮೊದಲು ಎಫ್‌ಐಆರ್ ದಾಖಲಿಸಿ ಬಳಿಕ ಪ್ರತಿಕ್ರಿಯೆ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಪೀಠ ಹೇಳಿದೆ.

ಇದೇ ವೇಳೆ ಚುನಾವಣಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಕಾರ್ಯವನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ದತ್ತಾ ಹೇಳಿದ್ದಾರೆ.

ಏಪ್ರಿಲ್ ಕೊನೆಯಲ್ಲಿ ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ ಎಂದು ಹೇಳಿದ್ದು, ಮುಸ್ಲಿಂ ಅಲ್ಪಸಂಖ್ಯಾತರನ್ನು “ಒಳನುಸುಳುವವರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರು” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಹಂಚಬಹುದು ಎಂದು ಹೇಳಿ ವಿವಾದವನ್ನು ಸೃಷ್ಟಿಸಿದ್ದರು.

ದೇಶದ ವೈಯಕ್ತಿಕ ಆಸ್ತಿಗಳನ್ನು ಕಸಿದು, ಅದನ್ನು ಮುಸ್ಲಿಮರಿಗೆ ಕಾಂಗ್ರೆಸ್ ಹಂಚಲಿದೆ. ಇದು ನಗರ ನಕ್ಸಲರ ಯೋಜನೆಯಾಗಿದೆ. ಈ ‘ನಗರ ನಕ್ಸಲ್’ ಮನಸ್ಥಿತಿಯಿಂದ ತಾಯಂದಿರೇ ಮತ್ತು ಸಹೋದರಿಯರೇ, ಅವರು ನಿಮ್ಮ ‘ಮಂಗಲಸೂತ್ರ’ವನ್ನು ಸಹ ಬಿಡುವುದಿಲ್ಲ. ಅವರು ಆ ಮಟ್ಟಕ್ಕೆ ಹೋಗಬಹುದು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅವರು ತಾಯಿ ಮತ್ತು ಸಹೋದರಿಯರ ಚಿನ್ನವನ್ನು ಲೆಕ್ಕ ಹಾಕುತ್ತಾರೆ, ಅದರ ಬಗ್ಗೆ ಮಾಹಿತಿ ಪಡೆದು ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಅವರು ಅದನ್ನು ಯಾರಿಗೆ ಹಂಚುತ್ತಾರೆ? ಮನಮೋಹನ್ ಸಿಂಗ್ ಅವರ ಸರ್ಕಾರವು ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕು ಎಂದು ಹೇಳಿತ್ತು. ಇದನ್ನು ನುಸುಳುಕೋರರಿಗೆ ವಿತರಿಸಲಾಗುವುದು. ನೀವು ಕಷ್ಟಪಟ್ಟು ಸಂಪಾದಿಸಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಅನುಮೋದಿಸುತ್ತೀರಾ? ಇದು ನಿಮಗೆ ಸ್ವೀಕಾರಾರ್ಹವೇ? ನೀವು ಕಷ್ಟಪಟ್ಟು ಸಂಪಾದಿಸಿದ ನಿಮ್ಮ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಹಕ್ಕು ಸರ್ಕಾರಗಳಿಗೆ ಇದೆಯೇ? ತಾಯಂದಿರ ಮಂಗಳಸೂತ್ರದ ಮೌಲ್ಯವು ಚಿನ್ನ ಅಥವಾ ಅದರ ಬೆಲೆಯಲ್ಲಿಲ್ಲ, ಆದರೆ ಜೀವನದಲ್ಲಿ ಅವಳ ಕನಸುಗಳಿಗೆ ಸಂಬಂಧಿಸಿದೆ ಮತ್ತು ನೀವು ಅದನ್ನು ಕಸಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದೀರಾ? ಎಂದು ಪ್ರಧಾನಿ ಮೋದಿ ಪ್ರಶ್ನಿಸಿದ್ದರು. ಮೋದಿಯ ಈ ದ್ವೇಷದ ಭಾಷಣದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ನ್ಯಾಯವಾದಿ ನಿಜಾಮ್ ಪಾಷಾ ಅವರ ಪರ ವಾದ ಮಂಡಿಸಿದ ಅರ್ಜಿದಾರರು, ಭಾರತ ರಾಷ್ಟ್ರ ಸಮಿತಿ ನಾಯಕ ಕೆ.ಚಂದ್ರಶೇಖರ ರಾವ್ ವಿರುದ್ಧ ಚುನಾವಣಾ ಸಂಸ್ಥೆ ಕ್ರಮ ಕೈಗೊಂಡಿದೆ ಆದರೆ ಮೋದಿಗೆ ನೊಟೀಸ್‌ ಕೂಡ ಜಾರಿ ಮಾಡಿಲ್ಲ. ಮೋದಿಯನ್ನು ಇತರರಿಗಿಂತ ಭಿನ್ನವಾಗಿ ಏಕೆ ನಡೆಸಿಕೊಳ್ಳುತ್ತಿದ್ದಾರೆ? ಮೋದಿ ಭಾಷಣ ಮಾಡಿದ್ದರೂ ಚುನಾವಣಾ ಆಯೋಗ ನೊಟೀಸ್‌ ನೀಡಿರುವುದು ಬಿಜೆಪಿ ಅಧ್ಯಕ್ಷರಿಗೆ, ಅದರಲ್ಲಿ ಮೋದಿ ಮಾಡಿದ ಭಾಷಣವನ್ನು ಕೂಡ ಉಲ್ಲೇಖಿಸಿಲ್ಲ. ಈ ವ್ಯಕ್ತಿಗೆ ಮಾತ್ರ ಸಲಹೆ ಮತ್ತು ಇತರರ ವಿರುದ್ಧ ಕ್ರಮ ಯಾಕೆ? ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಕೋರ್ಟ್‌ನಲ್ಲಿ ವಾದಿಸಲಾಗಿದೆ.

ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲ ಸುರುಚಿ ಸೂರಿ, ನೋಟೀಸ್‌ಗೆ ಪ್ರತಿಕ್ರಿಯಿಸಲು ಬಿಜೆಪಿಗೆ ಮೇ 15ರವೆರೆಗೆ ಗಡುವು ನೀಡಲಾಗಿದೆ. ಅಗತ್ಯ ಬಿದ್ದರೆ ಈ ಬಗ್ಗೆ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಆಂಧ್ರಪ್ರದೇಶ ಚುನಾವಣೆ: ಶಾಸಕನಿಂದ ಮತದಾರನಿಗೆ ಕಪಾಳಮೋಕ್ಷ; ರಾಜ್ಯದ ವಿವಿಧೆಡೆ ಹಿಂಸಾತ್ಮಕ ಘಟನೆ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...