Homeಮುಖಪುಟರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

“ರಾಯ್ ಬರೇಲಿಯನ್ನು ನನ್ನ ಹೊಸ ಕರ್ಮಭೂಮಿಯನ್ನಾಗಿ ಸ್ವೀಕರಿಸಿದ್ದೇನೆ. ಏಕೆಂದರೆ, ಅದು ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ” ಎಂದು ನಾಮಪತ್ರ ಸಲ್ಲಿಸಿದ ನಂತರ ನಡೆದ ಮೊದಲ ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದರು.

ಸೋಮವಾರ ಮಹಾರಾಜಗಂಜ್ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ‘ನನಗೆ ಇಬ್ಬರು ತಾಯಂದಿರು, ನನ್ನನ್ನು ರಕ್ಷಿಸಿದ ಸೋನಿಯಾ ಗಾಂಧಿ ಮತ್ತು ಇಂದಿರಾ ಗಾಂಧಿ, ರಾಯ್ ಬರೇಲಿ ನನ್ನ ಇಬ್ಬರು ತಾಯಂದಿರ ಕೆಲಸದ ಸ್ಥಳವಾಗಿದೆ. ಅದಕ್ಕಾಗಿಯೇ ನಾನು ಚುನಾವಣೆಗೆ ಸ್ಪರ್ಧಿಸಲು ಇಲ್ಲಿಗೆ ಬಂದಿದ್ದೇನೆ” ಎಂದರು.

“ರಾಯ್‌ಬರೇಲಿಯೊಂದಿಗೆ ನಮ್ಮ ಕುಟುಂಬಕ್ಕೆ 100 ವರ್ಷಗಳಷ್ಟು ಹಳೆಯ ಸಂಬಂಧವಿದೆ, ಈ ಚುನಾವಣೆಯು ಇತಿಹಾಸದಲ್ಲಿ ಸಂವಿಧಾನವನ್ನು ರಕ್ಷಿಸಲು ಹೋರಾಡುತ್ತಿರುವ ಮೊದಲ ಹೋರಾಟವಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂವಿಧಾನವನ್ನು ಹರಿದು ಹಾಕುತ್ತದೆ, ಬಡವರ ಎಲ್ಲಾ ಮಾರ್ಗಗಳನ್ನು ಮುಚ್ಚುತ್ತದೆ. ಅವರು ಅದಾನಿ ಮತ್ತು ಅಂಬಾನಿಗಾಗಿ ಸರ್ಕಾರ ರಚಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಟ್ಟುಕೊಂಡ ರಾಹುಲ್ ಗಾಂಧಿ, ‘”ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿ ಅವರು 22 ಕೋಟ್ಯಾಧಿಪತಿಗಳಿಗೆ 16 ಲಕ್ಷ ಕೋಟಿ ರೂ.ಗಳನ್ನು ನೀಡಿದ್ದಾರೆ. ಈ ಹಣ 70 ಕೋಟಿ ಜನರ ಆದಾಯಕ್ಕೆ ಸಮಾನವಾಗಿದೆ. ಈ ಹೋರಾಟ ಬಡವರ ರಕ್ಷಣೆಗಾಗಿ ಸರ್ಕಾರ ರಚನೆಯಾದರೆ ಪ್ರತಿ ತಿಂಗಳ ಮೊದಲನೇ ತಾರೀಖಿನಂದು ಪ್ರತಿಯೊಬ್ಬ ಮಹಿಳೆಯ ಖಾತೆಗೆ 8500 ರೂಪಾಯಿಗಳನ್ನು ಜಮಾ ಮಾಡಲಾಗುವುದು” ಎಂದರು.

“ಪ್ರಧಾನಿ ಯುವಕರನ್ನು ನಿರುದ್ಯೋಗಿಗಳನ್ನಾಗಿ ಮಾಡಿದ್ದಾರೆ.ಇಂಡಿಯಾ ಅಲಯನ್ಸ್ ಸರ್ಕಾರ ರಚನೆಯಾದರೆ ಪ್ರತಿಯೊಬ್ಬ ಯುವಕನಿಗೆ ಶಿಷ್ಯವೇತನ ಸಿಗುತ್ತದೆ. ಈ ಮೂಲಕ ಮೊದಲ ಉದ್ಯೋಗ ಗ್ಯಾರಂಟಿ’ ಎಂದು ರಾಹುಲ್ ಹೇಳಿದರು.

ಹೊಸ ಸರ್ಕಾರ ಗುತ್ತಿಗೆದಾರ ವ್ಯವಸ್ಥೆಯನ್ನು ಕೊನೆಗೊಳಿಸಲಿದೆ ಎಂದು ಅವರು ಘೋಷಿಸಿದರು. ಸಾರ್ವಜನಿಕ ವಲಯವೇ ಆಗಿರಲಿ ಅಥವಾ ಸರ್ಕಾರಿ ಇಲಾಖೆಗಳೇ ಆಗಿರಲಿ, ಸರ್ಕಾರ ರಚನೆಯಾದ ಕೂಡಲೇ ಗುತ್ತಿಗೆದಾರರ ವ್ಯವಸ್ಥೆ ಕೊನೆಗೊಳ್ಳಲಿದೆ ಎಂದರು.

ಈ ವೇಳೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇಬ್ಬರೂ ಒಟ್ಟಿಗೆ ವೇದಿಕೆಯಲ್ಲಿದ್ದದ್ದು ನೆರೆದಿದ್ದವರ ಉತ್ಸಾಹವನ್ನು ಹೆಚ್ಚಿಸಿತು.

ಅವರು ತಮ್ಮ ಭಾಷಣವನ್ನು ಮುಕ್ತಾಯಗೊಳಿಸುತ್ತಿದ್ದಂತೆ ಮತ್ತೊಂದು ರ್ಯಾಲಿಯಲ್ಲಿ, ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ವೇದಿಕೆಯ ಮುಂಭಾಗದಲ್ಲಿ ತಮ್ಮೊಂದಿಗೆ ಸೇರಲು ಆಹ್ವಾನಿಸಿದರು. ಆಕೆಯ ಭುಜದ ಮೇಲೆ ಕೈಯಿಟ್ಟು ಪ್ರೀತಿಯಿಂದ ಆಕೆಯ ಮುಖವನ್ನು ಮುಟ್ಟಿ, ರಾಯ್ ಬರೇಲಿ ಪ್ರಚಾರಕ್ಕಾಗಿ ಆಕೆಯ ಸಮರ್ಪಣೆಗಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.

“ನಾನು ಚುನಾವಣೆಗಾಗಿ ದೇಶಾದ್ಯಂತ ಪ್ರವಾಸ ಮಾಡುತ್ತಿದ್ದೇನೆ ಮತ್ತು ನನ್ನ ಸಹೋದರಿ ಇಲ್ಲಿ ತನ್ನ ಸಮಯವನ್ನು ವಿನಿಯೋಗಿಸುತ್ತಿದ್ದಾಳೆ. ಇದಕ್ಕಾಗಿ ಆಕೆಗೆ ದೊಡ್ಡ ಧನ್ಯವಾದಗಳು” ಎಂದು ಅವರು ಹೇಳಿದರು.

ಯಾವಾಗ ಮದುವೆಯಾಗುತ್ತೀರಿ ಎಂದು ಗುಂಪಿನಲ್ಲಿದ್ದವರು ಕೇಳಿದ ಪ್ರಶ್ನೆಯತ್ತ ಗಮನ ಹರಿಸಿದ ರಾಹುಲ್, ಸ್ವಲ್ಪ ಸಮಯದ ನಂತರ, “ಶೀಘ್ರದಲ್ಲೇ ಅದನ್ನು ಪರಿಹರಿಸಲಾಗುವುದು” ಎಂದು ಸಭಿಕರಿಗೆ ಭರವಸೆ ನೀಡಿದರು. “ಅಬ್ ಜಲ್ದಿ ಕರ್ನಿ ಪಡೆಗಿ” ಎಂದು ಹಿಂದಿಯಲ್ಲಿ ಹೇಳಿದರು.

ಇದನ್ನೂ ಓದಿ; ಅದಾನಿ-ಅಂಬಾನಿ ಟೆಂಪೋದಲ್ಲಿ ಹಣ ಕಳುಹಿಸಿದ್ದರೆ ತನಿಖೆಗೆ ಆದೇಶಿಸಿ: ಪ್ರಧಾನಿಗೆ ಖರ್ಗೆ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...