Homeಫ್ಯಾಕ್ಟ್‌ಚೆಕ್FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

- Advertisement -
- Advertisement -

“ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು. ಲಂಡನ್‌ನಲ್ಲಿ ಬಸವಣ್ಣ ಪ್ರತಿಮೆ ನಿರ್ಮಾಣದ ಉಸ್ತುವಾರಿ ತೆಗೆದುಕೊಂಡಿದ್ದ ಡಾ. ನೀರಜ್ ಪಾಟೀಲ್ ಹಲವು ಭಾರೀ ಆಹ್ವಾನಿಸಿದ್ದರೂ, ಸಿದ್ದರಾಮಯ್ಯ ಪ್ರತಿಮೆ ಉದ್ಘಾಟನೆಗೆ ಹೋಗಿರಲಿಲ್ಲ. ಕೊನೆಗೆ ನೀರಜ್ ಪಾಟೀಲ್ ಅವರು ಪ್ರಧಾನಿ ಮೋದಿಯಿಂದ ಪ್ರತಿಮೆ ಉದ್ಘಾಟಿಸಿದ್ದರು. ಇದೆಲ್ಲಾ ಆದ ಬಳಿಕ ಲಂಡನ್‌ಗೆ ತೆರಳಿದ್ದ ಸಿದ್ದರಾಮಯ್ಯ ಅವರು ಒಂದು ದಿನ ರಾತ್ರಿ ಹೊತ್ತು ಬಸನವಣ್ಣ ಪ್ರತಿಮೆ ಬಳಿ ತೆರಳಿ ಫೋಟೋ ತೆಗೆಸಿಕೊಂಡು ಪೋಸ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ಬಸವಣ್ಣ ಮತ್ತು ಅವರ ಅನುಯಾಯಿಗಳ ವಿರೋಧಿ” ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಇದು 2018ರ ವಿಷಯ ಎಂದು ಗೊತ್ತಾಗಿದೆ. 2018ರಲ್ಲಿ ಸಿದ್ದರಾಮಯ್ಯನವರು ಲಂಡನ್‌ಗೆ ತೆರಳಿದ್ದ ವೇಳೆ ವ ಬಸವಣ್ಣ ಪ್ರತಿಮೆ ಮುಂದೆ ನಿಂತು ಫೋಟೋಈ ತೆಗೆಸಿಕೊಂಡಿದ್ದರು. ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಲಂಡನ್‌ನ ಜೇಮ್ಸ್ ಪಾರ್ಕ್‌ನಲ್ಲಿರುವ ಅಣ್ಣ ಬಸವಣ್ಣನವರ ಪುತ್ಥಳಿ ನೋಡಿ‌ ಕಣ್ತುಂಬಿ ಬಂತು. ನಿಜವಾದ ವಿಶ್ವಗುರು ನಮ್ಮ ಬಸವಣ್ಣ” ಎಂದು ಬರೆದುಕೊಂಡಿದ್ದರು.

ಸಿದ್ದರಾಮಯ್ಯನವರು ಫೋಟೋ ತೆಗೆಸಿಕೊಂಡಿದ್ದ ಬಸವಣ್ಣ ಪ್ರತಿಮೆಯ ನಿರ್ಮಾಣದ ಉಸ್ತುವಾರಿಯನ್ನು ಕರ್ನಾಟಕದ ಕಲಬುರಗಿ ಮೂಲದ ಅಂದಿನ ಲಂಡನ್ ಮೇಯರ್ ಡಾ. ನೀರಜ್ ಪಾಟೀಲ್ ವಹಿಸಿದ್ದರು. ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದ ಈ ನೀರಜ್ ಪಾಟೀಲ್, ಸಿದ್ದರಾಮಯ್ಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳನ್ನು ಆಧರಿಸಿ ವೈರಲ್ ವಿಡಿಯೋ ತಯಾರಿಸಲಾಗಿದೆ.

ಟಿವಿ ವಾಹಿನಿ ಜೊತೆ ಮಾತನಾಡಿದ್ದ ನೀರಜ್ ಪಾಟೀಲ್, “ಸಿದ್ದರಾಮಯ್ಯನವರು ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಜಗದೀಶ್ ಶೆಟ್ಟರ್ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು. ಇದರಿಂದ ನಾವು ತುಂಬಾ ಕಷ್ಟಪಡುವಂತಾಯಿತು. ಅನುದಾನ ಕೋರಿ ನಾವು ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, “ಲಂಡನ್‌ನಲ್ಲಿ ಯಾರಿಗೆ ಬಸವಣ್ಣ ಪ್ರತಿಮೆ? ಅಲ್ಲಿ ಯಾರಿಗೆ ಬಸವಣ್ಣ ಗೊತ್ತು?” ಎಂದು ಉಡಾಫೆಯಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆ ಕಾರ್ಯಕ್ರಮಕ್ಕೆ ಬರಲು ನಿರಾಕರಿಸಿದ್ದರು” ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು. “ನಾನು ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಯಾವುದೇ ಅನುದಾನ ನೀಡಿಲ್ಲ ಮತ್ತು ಖಡಿತಗೊಳಿಸಿಲ್ಲ. ಪ್ರಧಾನಿ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಾರೆ ಎಂಬ ಕಾರಣಕ್ಕೆ ನಾನು ಹೋಗಿರಲಿಲ್ಲ ಎಂಬುವುದು ಸುಳ್ಳು. ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ನಾನು ಪ್ರತಿಮೆ ಉದ್ಘಾಟನೆಗೆ ಹೋಗಲಾಗಿಲ್ಲ. ಆ ಬಳಿಕ ಲಂಡನ್‌ಗೆ ಹೋಗಿದ್ದಾಗ ಬಸವಣ್ಣ ಪ್ರತಿಮೆ ಕಂಡು ಫೋಟೋ ತೆಗೆಸಿಕೊಂಡಿದ್ದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ 

ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದಂತೆ ಡಾ. ನೀರಜ್ ಪಾಟೀಲ್ ಮಾಡಿರುವ ಆರೋಪಗಳು ಸುಳ್ಳು. ಅಲ್ಲದೆ, ನಾವು ಪರಿಶೀಲನೆ ನಡೆಸಿದಂತೆ ಸಿಎಂ ಸಿದ್ದರಾಮಯ್ಯ ಬಸವಣ್ಣ ಪ್ರತಿಮೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದಾರೆ ಎಂದು ನೀರಜ್ ಪಾಟೀಲ್ ಹೊರತು ಇತರ ಯಾರೂ ಆರೋಪ ಮಾಡಿಲ್ಲ. 2018ರ ಬಳಿಕ ಬಂದ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಕೂಡ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನೀರಜ್ ಪಾಟೀಲ್ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಕೂಡ ದೊರೆತಿಲ್ಲ.

ಇದನ್ನೂ ಓದಿ : FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...