Homeಮುಖಪುಟಎಂಸಿಸಿ ಈಗ 'ಮೋದಿ ನೀತಿ ಸಂಹಿತೆ' ಆಗಿದೆ; ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ನಿಲ್ಲಿಸಿ: ಚುನಾವಣಾ...

ಎಂಸಿಸಿ ಈಗ ‘ಮೋದಿ ನೀತಿ ಸಂಹಿತೆ’ ಆಗಿದೆ; ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ ನಿಲ್ಲಿಸಿ: ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ

- Advertisement -
- Advertisement -

ಮಾದರಿ ನೀತಿ ಸಂಹಿತೆಯನ್ನು ಮೋದಿ ನೀತಿ ಸಂಹಿತೆಯಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿರುವ ತೃಣಮೂಲ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮತ್ತು ಅದರ ನಾಯಕರು ಚುನಾವಣಾ ನೀತಿ ಸಂಹಿತೆಯ ಘೋರ ಉಲ್ಲಂಘನೆ ಮಾಡುವುದನ್ನು ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಮಂಗಳವಾರ ಮನವಿ ಮಾಡಿದೆ.

ಚುನಾವಣಾ ಸಮಿತಿಗೆ ಈ ವಿಷಯದ ಬಗ್ಗೆ ಮನವಿ ಸಲ್ಲಿಸಿದ ನಂತರ, ಟಿಎಂಸಿಯ ರಾಜ್ಯಸಭಾ ಸಂಸದರಾದ ಸಾಕೇತ್ ಗೋಖಲೆ ಮತ್ತು ಸಾಗರಿಕಾ ಘೋಸ್ ಅವರು ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದರು. ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಗಳ ಬಗ್ಗೆ ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗದ ನಿಷ್ಕ್ರಿಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರಿಗೆ ನೋಟಿಸ್ ನೀಡಲಾಗಿದೆ. ಆದರೆ, ನಮ್ಮ ದೂರುಗಳ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ, ಪ್ರಧಾನಿ ಮೋದಿ ತಮ್ಮ ಹೇಳಿಕೆಗಳಲ್ಲಿ ಹೆಚ್ಚು ಧೈರ್ಯಶಾಲಿಯಾಗಿದ್ದಾರೆ. ಅವರು ಚುನಾವಣಾ ಸಮಯದಲ್ಲಿ ತನಗೆ ಯಾವುದೇ ನಿರ್ಬಂಧ ಇಲ್ಲ ಎಂದು ಭರವಸೆಗಳನ್ನು ನೀಡುತ್ತಿದ್ದಾರೆ, ತಮ್ಮ ಪಕ್ಷವು ಆಡಳಿತ ಪಕ್ಷವಾಗಿ ಜಾರಿಗೆ ತರಲು ಸಾಧ್ಯವಾಗದ ಆರ್ಥಿಕ ಯೋಜನೆಗಳನ್ನು ಘೋಷಿಸುತ್ತಿದ್ದಾರೆ ಎಂದು ಹೇಳಿದರು.

“ಆದರೂ, ಮಾದರಿ ನೀತಿ ಸಂಹಿತೆಯ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ” ಎಂದು ಗೋಖಲೆ ಇಲ್ಲಿನ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಹೊರಗೆ ಸುದ್ದಿಗಾರರಿಗೆ ತಿಳಿಸಿದರು.

ಘೋಷ್ ಮತ್ತು ಗೋಖಲೆ ಇಬ್ಬರೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಗೆ ಪ್ರಧಾನಿ ಮೋದಿಯವರನ್ನು ಹೊಣೆಗಾರರನ್ನಾಗಿ ಮಾಡುತ್ತಿಲ್ಲ ಎಂದು ಪ್ರತಿಪಾದಿಸಿದರು.

“ಚುನಾವಣಾ ಆಯೋಗದ ಮೇಲ್ವಿಚಾರಣೆಯಲ್ಲಿ, ಮಾದರಿ ನೀತಿ ಸಂಹಿತೆ ಈಗ ಮೋದಿ ನೀತಿ ಸಂಹಿತೆಯಾಗಿ ಮಾರ್ಪಟ್ಟಿದೆ. ಮೋದಿ ಅವರು ನೀಡಿದ ಯಾವುದೇ ಹೇಳಿಕೆಯನ್ನು ನಿಯಂತ್ರಿಸಲಾಗುವುದಿಲ್ಲ ಮತ್ತು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಇದು ನಮ್ಮ ಚುನಾವಣೆಯ ನ್ಯಾಯಸಮ್ಮತತೆಯನ್ನು ಹಾಳುಮಾಡುತ್ತದೆ” ಎಂದು ಘೋಸ್ ಹೇಳಿದರು.

ಚುನಾವಣೆಯ ಉಳಿದ ಹಂತಗಳಿಗೆ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ದೂರುಗಳ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿ ಬಾರಿ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದಾಗ ಪ್ರಧಾನಿ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಬಾರದು ಎಂದು ಒತ್ತಾಯಿಸಿ ನಾವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದೇವೆ ಎಂದು ಗೋಖಲೆ ಹೇಳಿದರು.

ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ ಬರೆದಿದ್ದು, ಬಿಜೆಪಿಯಿಂದ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪಗಳು ಮತ್ತು ಧರ್ಮದ ಆಧಾರದ ಮೇಲೆ ಮತಕ್ಕಾಗಿ ಮನವಿಗಳು ಮತ್ತು ಪ್ರಧಾನಿ ಮೋದಿಯವರು ತಮ್ಮ ರ್ಯಾಲಿಗಳಲ್ಲಿ ಮಾಡಿದ ವಿಭಜಕ ಹೇಳಿಕೆಗಳು ಸೇರಿದಂತೆ ಬಿಜೆಪಿಯಿಂದ ಆಪಾದಿತ ಉಲ್ಲಂಘನೆಗಳ ನಿರ್ದಿಷ್ಟ ನಿದರ್ಶನಗಳನ್ನು ವಿವರಿಸುತ್ತದೆ.

“ಮೋದಿಯವರು ನಿರ್ಲಜ್ಜ ಹೇಳಿಕೆಗಳು ನಮ್ಮ ಜಾತ್ಯತೀತ ಗಣರಾಜ್ಯದ ಮೇಲೆ ಉದ್ದೇಶಪೂರ್ವಕ ದಾಳಿ ಮಾತ್ರವಲ್ಲ, ಮುಕ್ತ ಮತ್ತು ನ್ಯಾಯಯುತ ಚುನಾವಣಾ ಪ್ರಚಾರದ ನೀತಿಯ ವಿರುದ್ಧವೂ ಆಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಪೂರಕ ಆರೋಪಪಟ್ಟಿಯಲ್ಲಿ ಎಎಪಿ ಆರೋಪಿಯಾಗಲಿದೆ ಎಂದ ಇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...