Homeಕರ್ನಾಟಕಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

ಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

- Advertisement -
- Advertisement -

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಕೊಳೆಯುತ್ತಿದ್ದು, ಅದನ್ನು ವಿಲೇವಾರಿ ಮಾಡಲು ಕೇಂದ್ರ ಸರ್ಕಾರ ಪರದಾಡುತ್ತಿದೆ ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಬಡವರಿಗೆ ಉಚಿತವಾಗಿ ವಿತರಿಸುವ ಅಕ್ಕಿಯ ವಿಶೇಷಣಗಳನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಎಫ್‌ಸಿಐ ಗೋದಾಮುಗಳಲ್ಲಿನ ಅಕ್ಕಿಯ ವಿಲೇವಾರಿಗೆ ಸರ್ಕಾರ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದೆ. ಸಿಫ್ಟರ್‌ಗಳು, ಗ್ರೇಡರ್‌ಗಳು ಮತ್ತು ಇತರ ಯಂತ್ರೋಪಕರಣಗಳ ಕೊರತೆಯಿಂದ ಗರೀಬ್ ಕಲ್ಯಾಣ್ ಯೋಜನೆಯ ಅಕ್ಕಿ ಪರಿಷ್ಕರಿಸುವ ಪ್ರಸ್ತಾವನೆಯು ತುಂಬಾ ದುಬಾರಿ ಮತ್ತು ಶ್ರಮದಾಯಕವೆಂದು ಕಂಡು ಬಂದಿದೆ ಎಂದು ಇಬ್ಬರು ಅಧಿಕಾರಿಗಳು ಉಲ್ಲೇಖಿಸಿ livemint.com ವರದಿ ಮಾಡಿದೆ.

ಪಿಎಂಜಿಕೆವೈ ಅಡಿಯಲ್ಲಿ ಅಕ್ಕಿ ಹಂಚಿಕೆಯನ್ನು ಹೆಚ್ಚಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ನೌಕರರಿಗೆ ಉಚಿತ ಆಹಾರವನ್ನು ನೀಡುವುದು ಮತ್ತು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಇಎಂಎಸ್‌ಎಸ್‌) ಅಡಿಯಲ್ಲಿ ಅಕ್ಕಿ ಬೆಲೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಎಫ್‌ಸಿಐ ಮೇಜಿನ ಮೇಲೆ ಇರುವ ಪ್ರಸ್ತಾವಣೆಗಳಾಗಿವೆ. ಇವುಗಳನ್ನು ಕಾರ್ಯಗತಗೊಳಿಸುವುದು ಅಸಾಧ್ಯ ಎಂಬುವುದು ಸರ್ಕಾರಕ್ಕೆ ಮನದಟ್ಟಾಗಿದೆ.

ಎಫ್‌ಸಿಐ ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಸುಮ್ಮನೆ ಕೊಳೆಯುತ್ತಿದೆ ಎಂಬ ವರದಿ ನೋಡಿದ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.

“ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ. 18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ, ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ” ಎಂದು ಕಾಂಗ್ರೆಸ್‌ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

“ಅಕ್ಕಿ ರಾಜಕೀಯ ಮಾಡಿದ ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆಗಳು” ಎಂದು ಕೆಳಗಿನ ಪ್ರಶ್ನೆಗಳನ್ನು ಕೇಳಿದೆ.

1. 24 ರೂಪಾಯಿಯ ಭಾರತ್ ಅಕ್ಕಿ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿಯಿತೇ?

2. ಖಾಸಗಿ ಕಂಪೆನಿಗಳೂ ಸಹ ಕೇಂದ್ರ ಆಹಾರ ನಿಗಮದ ಅಕ್ಕಿಯನ್ನು ಖರೀದಿಸಲು ಮುಂದಾಗಲಿಲ್ಲವೇ?

3. ಖಾಲಿ ಮಾಡಲಾಗದಷ್ಟು ಅಕ್ಕಿ ಇದ್ದರೂ ಕನ್ನಡಿಗರಿಗೆ ವಂಚಿಸಿದ್ದೇಕೆ?

4. ನಮ್ಮ ಸರ್ಕಾರ ಕೆಜಿಗೆ ₹34 ಕೊಟ್ಟು ಖರೀದಿಸಿದ್ದಿದ್ದರೆ ಆಹಾರ ನಿಗಮಕ್ಕೆ ಲಾಭವಾಗುತ್ತಿತ್ತು, ಆ ಲಾಭವನ್ನು ತಪ್ಪಿಸಿ ನಷ್ಟಕ್ಕೆ ತಳ್ಳಿದ್ದೇಕೆ?

“ಕನ್ನಡಿಗರಿಗೆ ಅಕ್ಕಿ ನೀಡದೆ ದ್ರೋಹ ಮಾಡಿದಿರಲ್ಲ, ಕನ್ನಡಿಗರು ನಿಮಗೆ ಯಾವ ಜನ್ಮದ ಶತ್ರುಗಳು?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ ವಿತರಿಸಲು ಮುಂದಾಗಿತ್ತು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಎಫ್‌ಸಿಐ ಗೋದಾಮಿನಿಂದ ಅಕ್ಕಿ ಪೂರೈಸುವಂತೆ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ಅಕ್ಕಿ ನೀಡಿಲ್ಲ ಎಂಬ ಆರೋಪವಿದೆ. ಕೊನೆಗೆ ಎಲ್ಲೂ ಸಾಕಷ್ಟು ಅಕ್ಕಿ ಸಿಗದಿದ್ದಾಗ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನು ಪಡಿತರ ಚೀಟಿದಾರರ ಖಾತೆಗೆ ಹಾಕಲು ನಿರ್ಧರಿಸಿತ್ತು. ಅದರಂತೆ, ಈಗ ಯೋಜನೆ ಮುಂದುವರೆಯುತ್ತಿದೆ.

ಇದನ್ನೂ ಓದಿ : ನರೇಂದ್ರ ಮೋದಿ ಅಧಿಕಾರಕ್ಕೆ ಮರಳುವುದಿಲ್ಲ ಎಂಬುದೆ ಒಂದು ಗ್ಯಾರಂಟಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...