Homeಕರ್ನಾಟಕಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

ಎಫ್‌ಸಿಐ ಗೋದಾಮಿನಲ್ಲಿ ಕೊಳೆಯುತ್ತಿರುವ 18 ಮಿಲಿಯನ್ ಟನ್ ಅಕ್ಕಿ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ

- Advertisement -
- Advertisement -

ಭಾರತೀಯ ಆಹಾರ ನಿಗಮದ (ಎಫ್‌ಸಿಐ) ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಕೊಳೆಯುತ್ತಿದ್ದು, ಅದನ್ನು ವಿಲೇವಾರಿ ಮಾಡಲು ಕೇಂದ್ರ ಸರ್ಕಾರ ಪರದಾಡುತ್ತಿದೆ ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಬಡವರಿಗೆ ಉಚಿತವಾಗಿ ವಿತರಿಸುವ ಅಕ್ಕಿಯ ವಿಶೇಷಣಗಳನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ, ಎಫ್‌ಸಿಐ ಗೋದಾಮುಗಳಲ್ಲಿನ ಅಕ್ಕಿಯ ವಿಲೇವಾರಿಗೆ ಸರ್ಕಾರ ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದೆ. ಸಿಫ್ಟರ್‌ಗಳು, ಗ್ರೇಡರ್‌ಗಳು ಮತ್ತು ಇತರ ಯಂತ್ರೋಪಕರಣಗಳ ಕೊರತೆಯಿಂದ ಗರೀಬ್ ಕಲ್ಯಾಣ್ ಯೋಜನೆಯ ಅಕ್ಕಿ ಪರಿಷ್ಕರಿಸುವ ಪ್ರಸ್ತಾವನೆಯು ತುಂಬಾ ದುಬಾರಿ ಮತ್ತು ಶ್ರಮದಾಯಕವೆಂದು ಕಂಡು ಬಂದಿದೆ ಎಂದು ಇಬ್ಬರು ಅಧಿಕಾರಿಗಳು ಉಲ್ಲೇಖಿಸಿ livemint.com ವರದಿ ಮಾಡಿದೆ.

ಪಿಎಂಜಿಕೆವೈ ಅಡಿಯಲ್ಲಿ ಅಕ್ಕಿ ಹಂಚಿಕೆಯನ್ನು ಹೆಚ್ಚಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ನೌಕರರಿಗೆ ಉಚಿತ ಆಹಾರವನ್ನು ನೀಡುವುದು ಮತ್ತು ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಇಎಂಎಸ್‌ಎಸ್‌) ಅಡಿಯಲ್ಲಿ ಅಕ್ಕಿ ಬೆಲೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಎಫ್‌ಸಿಐ ಮೇಜಿನ ಮೇಲೆ ಇರುವ ಪ್ರಸ್ತಾವಣೆಗಳಾಗಿವೆ. ಇವುಗಳನ್ನು ಕಾರ್ಯಗತಗೊಳಿಸುವುದು ಅಸಾಧ್ಯ ಎಂಬುವುದು ಸರ್ಕಾರಕ್ಕೆ ಮನದಟ್ಟಾಗಿದೆ.

ಎಫ್‌ಸಿಐ ಗೋದಾಮುಗಳಲ್ಲಿ 18 ಮಿಲಿಯನ್ ಟನ್‌ಗಿಂತಲೂ ಹೆಚ್ಚು ಅಕ್ಕಿ ಸುಮ್ಮನೆ ಕೊಳೆಯುತ್ತಿದೆ ಎಂಬ ವರದಿ ನೋಡಿದ ರಾಜ್ಯ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದೆ.

“ಬಡವರ ಹೊಟ್ಟೆಗೆ ವಂಚಿಸುವುದಕ್ಕಿಂತ ದೊಡ್ಡ ಕ್ರೌರ್ಯ ಇನ್ನೊಂದಿಲ್ಲ. 18 ಮಿಲಿಯನ್ ಟನ್ ಅಕ್ಕಿ ಹುಳು ಹಿಡಿದರೂ ಪರವಾಗಿಲ್ಲ, ಬಡವರ ಹೊಟ್ಟೆಗೆ ಅನ್ನವಾಗಬಾರದು ಎನ್ನುವ ಕೇಂದ್ರ ಸರ್ಕಾರದ ಧೂರ್ತತನಕ್ಕೆ ಜನತೆ ಪಾಠ ಕಲಿಸಲಿದ್ದಾರೆ. ಅನ್ನಭಾಗ್ಯ ಯೋಜನೆಗಾಗಿ ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ, ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ” ಎಂದು ಕಾಂಗ್ರೆಸ್‌ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದೆ.

“ಅಕ್ಕಿ ರಾಜಕೀಯ ಮಾಡಿದ ಕೇಂದ್ರ ಸರ್ಕಾರಕ್ಕೆ ಕೆಲವು ಪ್ರಶ್ನೆಗಳು” ಎಂದು ಕೆಳಗಿನ ಪ್ರಶ್ನೆಗಳನ್ನು ಕೇಳಿದೆ.

1. 24 ರೂಪಾಯಿಯ ಭಾರತ್ ಅಕ್ಕಿ ಕೇವಲ ಚುನಾವಣಾ ಗಿಮಿಕ್ ಆಗಿ ಉಳಿಯಿತೇ?

2. ಖಾಸಗಿ ಕಂಪೆನಿಗಳೂ ಸಹ ಕೇಂದ್ರ ಆಹಾರ ನಿಗಮದ ಅಕ್ಕಿಯನ್ನು ಖರೀದಿಸಲು ಮುಂದಾಗಲಿಲ್ಲವೇ?

3. ಖಾಲಿ ಮಾಡಲಾಗದಷ್ಟು ಅಕ್ಕಿ ಇದ್ದರೂ ಕನ್ನಡಿಗರಿಗೆ ವಂಚಿಸಿದ್ದೇಕೆ?

4. ನಮ್ಮ ಸರ್ಕಾರ ಕೆಜಿಗೆ ₹34 ಕೊಟ್ಟು ಖರೀದಿಸಿದ್ದಿದ್ದರೆ ಆಹಾರ ನಿಗಮಕ್ಕೆ ಲಾಭವಾಗುತ್ತಿತ್ತು, ಆ ಲಾಭವನ್ನು ತಪ್ಪಿಸಿ ನಷ್ಟಕ್ಕೆ ತಳ್ಳಿದ್ದೇಕೆ?

“ಕನ್ನಡಿಗರಿಗೆ ಅಕ್ಕಿ ನೀಡದೆ ದ್ರೋಹ ಮಾಡಿದಿರಲ್ಲ, ಕನ್ನಡಿಗರು ನಿಮಗೆ ಯಾವ ಜನ್ಮದ ಶತ್ರುಗಳು?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ 10 ಕೆ.ಜಿ ಅಕ್ಕಿ ವಿತರಿಸಲು ಮುಂದಾಗಿತ್ತು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಎಫ್‌ಸಿಐ ಗೋದಾಮಿನಿಂದ ಅಕ್ಕಿ ಪೂರೈಸುವಂತೆ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ಅಕ್ಕಿ ನೀಡಿಲ್ಲ ಎಂಬ ಆರೋಪವಿದೆ. ಕೊನೆಗೆ ಎಲ್ಲೂ ಸಾಕಷ್ಟು ಅಕ್ಕಿ ಸಿಗದಿದ್ದಾಗ ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಯ ಹಣವನ್ನು ಪಡಿತರ ಚೀಟಿದಾರರ ಖಾತೆಗೆ ಹಾಕಲು ನಿರ್ಧರಿಸಿತ್ತು. ಅದರಂತೆ, ಈಗ ಯೋಜನೆ ಮುಂದುವರೆಯುತ್ತಿದೆ.

ಇದನ್ನೂ ಓದಿ : ನರೇಂದ್ರ ಮೋದಿ ಅಧಿಕಾರಕ್ಕೆ ಮರಳುವುದಿಲ್ಲ ಎಂಬುದೆ ಒಂದು ಗ್ಯಾರಂಟಿ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...