Homeಮುಖಪುಟಇವಿಎಂ ಸಂಖ್ಯೆಗಳಲ್ಲಿನ ವ್ಯತ್ಯಾಸ: ಚುನಾವಣಾ ಪಾರದರ್ಶಕತೆ ಬಗ್ಗೆ ಹುಟ್ಟು ಹಾಕಿದ ಕಳವಳ

ಇವಿಎಂ ಸಂಖ್ಯೆಗಳಲ್ಲಿನ ವ್ಯತ್ಯಾಸ: ಚುನಾವಣಾ ಪಾರದರ್ಶಕತೆ ಬಗ್ಗೆ ಹುಟ್ಟು ಹಾಕಿದ ಕಳವಳ

- Advertisement -
- Advertisement -

ಭಾರತದ ಸಾರ್ವತ್ರಿಕ ಚುನಾವಣಾ ಪ್ರಕ್ರಿಯೆಯು ಮೇ 13ರಂದು 96 ಸ್ಥಾನಗಳಲ್ಲಿ ಮತದಾನದೊಂದಿಗೆ ನಾಲ್ಕನೇ ಹಂತವನ್ನು ಪ್ರವೇಶಿಸಿದೆ. ಭಾರತೀಯ ಚುನಾವಣಾ ಆಯೋಗದ (ಇಸಿಐ) ಒಟ್ಟಾರೆ ನಡವಳಿಕೆ, ಚುನಾವಣೆ ನಿರ್ವಹಣೆ ಬಗ್ಗೆ ಗಂಭೀರ ಕಳವಳಗಳು ವ್ಯಕ್ತವಾಗಿರುವ ಮಧ್ಯೆ ಆರ್‌ಟಿಐ ಕಾರ್ಯಕರ್ತ ಮನರಂಜನ್‌ ಎಸ್‌ ರಾಯ್‌ ಹಲವು ಮಹತ್ವದ ಅಂಶಗಳನ್ನು ಹಂಚಿಕೊಂಡಿದ್ದಾರೆ.

ಮೇ.11ರಂದು ನಾಗರಿಕರು ಮತ್ತು ನಾಗರಿಕ ಸಮಾಜ ಸಂಸ್ಥೆಗಳು “ಬೆನ್ನುಹುರಿಯನ್ನು ಬೆಳೆಸಿಕೊಳ್ಳಿ ಅಥವಾ ರಾಜೀನಾಮೆ ನೀಡಿ” ಎಂದು ಚುನಾವಣಾ ಆಯೋಗಕ್ಕೆ ಆಗ್ರಹಿಸಿ ಜಂಟಿ ಅಭಿಯಾನವನ್ನು ನಡೆಸಿದೆ. ಸಾವಿರಾರು ನಾಗರಿಕರು “ಬೆನ್ನುಹುರಿಯನ್ನು ಬೆಳೆಸಿಕೊಳ್ಳಿ ಅಥವಾ ರಾಜೀನಾಮೆ ನೀಡಿ” ಎಂಬ ಘೋಷವಾಕ್ಯದ  ಪೋಸ್ಟ್‌ಕಾರ್ಡ್‌ಗಳನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದ್ದಾರೆ. ಅಭಿಯಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಚುನಾವಣಾ ಸಮಯದಲ್ಲಿ ದ್ವೇಷದ ಹೇಳಿಕೆ ನೀಡುವ ಮೂಲಕ ಸಾಮರಸ್ಯ ಹಾಳುಮಾಡುವ ಗುರಿಯನ್ನು ಸ್ಪಷ್ಟವಾಗಿ ಹೊಂದಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಹೇಳಲಾಗಿದೆ.

ಇದಕ್ಕೂ ಒಂದು ದಿನ ಮೊದಲು, ಮೇ.10ರಂದು, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಸುಪ್ರೀಂಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದೆ.  ಮೊದಲ ಎರಡು ಹಂತಗಳಲ್ಲಿ ಮತದಾನವಾದ ಮತಗಳ ಕುರಿತು ಮಾಹಿತಿ ನೀಡುವಲ್ಲಿ ಚುನಾವಣಾ ಆಯೋಗದ ವಿಳಂಬದ ಬಗ್ಗೆ ಕೋರ್ಟ್‌ ಗಮನಕ್ಕೆ ತಂದಿತ್ತು. ಚುನಾವಣಾ ಅಕ್ರಮಗಳಿಂದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಈ ಮನವಿ ಸಲ್ಲಿಸಲಾಗಿದೆ ಎಂದು ಎಡಿಆರ್ ಹೇಳಿತ್ತು.

ಏ.30 ರಂದು ಚುನಾವಣಾ ಆಯೋಗ ಪ್ರಕಟಿಸಿದ 2024ರ ಲೋಕಸಭಾ ಚುನಾವಣೆಯ ಮೊದಲ ಎರಡು ಹಂತಗಳ ಮತದಾರರ ಅಂಕಿ ಅಂಶವನ್ನು, ಮೊದಲ ಹಂತದ ಮತದಾನದ 11 ದಿನಗಳ ನಂತರ ಮತ್ತು ಎರಡನೇ ಹಂತದ ಮತದಾನದ ನಂತರ 4 ದಿನಗಳ ನಂತರ ಪ್ರಕಟಿಸಲಾಗಿದೆ. ECI ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಏಪ್ರಿಲ್ 30, 2024ರಂದು ಪ್ರಕಟಿಸಿದ ಮಾಹಿತಿಯು, ECI ಚುನಾವಣಾ ದಿನ ಘೋಷಿಸಿದ ಆರಂಭಿಕ ಶೇಕಡಾವಾರುಗಳಿಗೆ ಹೋಲಿಸಿದರೆ 5-6%ದಷ್ಟು ಮತದಾನದಲ್ಲಿ ಹೆಚ್ಚಳವನ್ನು ತೋರಿಸುತ್ತದೆ. ಈ ಅಂಕಿ-ಅಂಶಗಳು ತೀವ್ರ ಕಳವಳ ಮತ್ತು ಸಾರ್ವಜನಿಕ ಅನುಮಾನಗಳನ್ನು ಹುಟ್ಟುಹಾಕಿದೆ.

ಐದು ಪ್ರಮುಖ ಪತ್ರಕರ್ತರ ಸಂಘಟನೆಗಳಾದ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂಡಿಯನ್ ವುಮೆನ್ಸ್ ಪ್ರೆಸ್ ಕಾರ್ಪ್, ವಿದೇಶಿ ವರದಿಗಾರರ ಕ್ಲಬ್, ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್ಸ್ ಮತ್ತು ಪ್ರೆಸ್ ಅಸೋಸಿಯೇಷನ್ ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದು 3 ಹಂತಗಳ ಮತಗಳ ಸಂಪೂರ್ಣಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿ ಆಘಾತ ಮತ್ತು ಆಶ್ಚರ್ಯವನ್ನು ವ್ಯಕ್ತಪಡಿಸಿತ್ತು.

ಈ ಬೆಳವಣಿಗೆಗಳು ಚುನಾವಣೆಯ ನ್ಯಾಯಸಮ್ಮತತೆಯ ಬಗ್ಗೆ ಜನರ ಮನಸ್ಸಿನಲ್ಲಿ ಆತಂಕಕ್ಕೆ ಕಾರಣವಾಗಿವೆ ಎಂದು ಪತ್ರದಲ್ಲಿ ಹೇಳಲಾಗಿದೆ. 2019ರವರೆಗೆ ಅಂದರೆ ಕಳೆದ ಸಾರ್ವತ್ರಿಕ ಚುನಾವಣೆಯವರೆಗೆ, ಪ್ರತಿ ಹಂತದಲ್ಲಿ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸುವುದು ಸಾಮಾನ್ಯವಾಗಿತ್ತು. ಮತದಾನದ ದಿನದಂದು ಏನಾಯಿತು ಎಂಬುದನ್ನು ಚುನಾವಣಾ ಆಯೋಗದಿಂದ ತಿಳಿದುಕೊಳ್ಳಲು ನಾಗರಿಕರಿಗೆ ಎಲ್ಲಾ ರೀತಿಯ ಹಕ್ಕಿದೆ. ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದರೆ, ಪತ್ರಕರ್ತರ ಅನುಮಾನಗಳು ಮತ್ತು ಗೊಂದಲಗಳು ನಿವಾರಣೆಯಾಗುತ್ತದೆ. ಚುನಾವಣಾ ಆಯೋಗವು ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿಯನ್ನು ನಡೆಸಬೇಕು ಮತ್ತು ಮುಂದಿನ ಮತದಾನದ ದಿನಾಂಕದೊಳಗೆ ಸಂಪೂರ್ಣ ಮತಗಳ ಸಂಖ್ಯೆ ಮತ್ತು ಮತದಾನದ ಅಂತಿಮ ಶೇಕಡಾವಾರು ಸೇರಿದಂತೆ ಸಂಪೂರ್ಣ ಸಮೀಕ್ಷೆಯ ಮಾಹಿತಿಯನ್ನು ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿತ್ತು.

ಚುನಾವಣಾ ಆಯೋಗದ ನಡವಳಿಕೆಯ ಬಗ್ಗೆ ಈ ಗಂಭೀರ ಅನುಮಾನಗಳು ಮತ್ತು ಆತಂಕಗಳು ಹಲವಾರು ಸಾರ್ವಜನಿಕ ವೇದಿಕೆಗಳಲ್ಲಿ ವ್ಯಕ್ತವಾಗುತ್ತಿವೆ.

ಎಐಡಿಎಂ ಜೊತೆ ಮಾತನಾಡಿದ ರಾಯ್, 2024ರ ಚುನಾವಣೆಗೆ ಸಂಬಂಧಿಸಿದಂತೆ ಸಂಸ್ಥೆಯು ಹೊರಡಿಸಿದ ಪತ್ರಿಕಾ ಪ್ರಕಟಣೆಯು ಸಹ ಹೊಂದಾಣಿಕೆಯಿಲ್ಲದೆ ಮತ್ತು ಅಸಂಗತತೆಯಿಂದ ತುಂಬಿದೆ. 2019 ಮತ್ತು 2024ರ ಲೋಕಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ ಹೊರಡಿಸಲಾದ ECI ಪತ್ರಿಕಾ ಪ್ರಕಟಣೆಗಳ ಸರಳ ಹೋಲಿಕೆಯು ಹಲವಾರು ಅಸಂಗತತೆಯನ್ನು ಹೊರತರುತ್ತದೆ ಎಂದು ರಾಯ್ ಗಮನಸೆಳೆದಿದ್ದಾರೆ.

2019 ಮತ್ತು 2024ರ ನಡುವೆ 7.2 ಕೋಟಿ ಮತದಾರರ ಹೆಚ್ಚಳ ಕಂಡುಬಂದಿದೆ ಎಂದು ECI ಪತ್ರಿಕಾ ಪ್ರಕಟಣೆಗಳು ತೋರಿಸುತ್ತವೆ. ಈ ಏರಿಕೆಯು 2024ರ ಚುನಾವಣೆಗೆ ಮತಗಟ್ಟೆಗಳ ಸೇರ್ಪಡೆಗೆ ಕಾರಣವಾಗಿದೆ ಎಂದು ತೋರುತ್ತದೆ. ದೇಶಾದ್ಯಂತ ಒಟ್ಟು 15,000 ಮತಗಟ್ಟೆಗಳನ್ನು ಸೇರಿಸಲಾಗಿದ್ದು, ವಾಸ್ತವಿಕ ಮತದಾನ ಕೇಂದ್ರಗಳ ಸಂಖ್ಯೆಯನ್ನು 10.35 ಲಕ್ಷದಿಂದ 10.50 ಲಕ್ಷಕ್ಕೆ ಏರಿಸಲಾಗಿದೆ. ವಿಚಿತ್ರವೆಂದರೆ, ಈ ಮತಗಟ್ಟೆಗಳಲ್ಲಿ ನಿಯೋಜಿಸಲಾದ ಇವಿಎಂಗಳ ಸಂಖ್ಯೆಯಲ್ಲಿ ಯಾವುದೇ ಪ್ರಮಾಣಾನುಗುಣವಾಗಿ ಹೆಚ್ಚಳವಾಗಿಲ್ಲ.

ಇವಿಎಂಗಳ ಬಳಕೆಯ ಕುರಿತು 2019ರ ಪತ್ರಿಕಾ ಪ್ರಕಟಣೆಯಲ್ಲಿ, ಚುನಾವಣಾ ಆಯೋಗವು ಇವಿಎಂನ್ನು ರೂಪಿಸುವ ವಿವಿಧ ಘಟಕಗಳ ವಿವರಗಳನ್ನು ನೀಡಿದೆ. ಒಟ್ಟು 57.05 ಲಕ್ಷ ಯಂತ್ರಗಳನ್ನು ಈ ಕೆಳಗಿನ ವಿಘಟನೆಯೊಂದಿಗೆ ಪಟ್ಟಿ ಮಾಡಿದೆ. ಬ್ಯಾಲೆಟ್ ಯೂನಿಟ್(BU) – 23.3 ಲಕ್ಷ, ಕಂಟ್ರೋಲ್‌ ಯುನಿಟ್‌ (CU) – 16.35 ಲಕ್ಷ ಮತ್ತು ವಿವಿಪ್ಯಾಟ್‌ -17.4 ಲಕ್ಷ ಎಂದು ತಿಳಿಸಿದೆ. ಇವಿಎಂ ಎಂದರೆ ಬ್ಯಾಲೆಟ್ ಯುನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿವಿಪಿಎಟಿ ಘಟಕ ಎಂದು ಸ್ಪಷ್ಟವಾಗಿ ಹೇಳುತ್ತದೆ. ಇತ್ತೀಚೆಗೆ ಸುಪ್ರೀಂಕೋರ್ಟ್ ಕೂಡ ಈ ವ್ಯಾಖ್ಯಾನವನ್ನು ಪುನರುಚ್ಚರಿಸಿದೆ.

ಈ ವ್ಯಾಖ್ಯಾನದ ಪ್ರಕಾರ, 2019ರ ಚುನಾವಣೆಯಲ್ಲಿ ನಿಯೋಜಿಸಲಾದ ಒಟ್ಟು ಇವಿಎಂಗಳ ಸಂಖ್ಯೆ 57.05 ಲಕ್ಷ. ಆದರೆ, ಇಸಿಐನ ಪತ್ರಿಕಾ ಪ್ರಕಟಣೆಯು 2024ರ ಚುನಾವಣೆಯಲ್ಲಿ 55 ಲಕ್ಷ ಇವಿಎಂಗಳನ್ನು ಬಳಸಲಾಗುತ್ತಿದೆ ಎಂದು ಹೇಳುತ್ತದೆ. 2019 ಮತ್ತು 2024ರ ಇವಿಎಂ ಅಂಕಿಅಂಶಗಳ ನಡುವಿನ ಈ ವ್ಯತ್ಯಾಸದ ಆಧಾರದ ಮೇಲೆ, ಅವರು ಕೆಲವು ಸರಳ ಪ್ರಶ್ನೆಗಳನ್ನು ಕೇಳುವುದಾಗಿ ರಾಯ್ AIDEM ಗೆ ಹೇಳಿದ್ದಾರೆ. 2019ಕ್ಕೆ ಹೋಲಿಸಿದರೆ 7.2ಕೋಟಿ ಮತದಾರರು ಮತ್ತು 15,000 ಮತಗಟ್ಟೆಗಳು ಈ ಬಾರಿ ಹೆಚ್ಚಳವಾಗಿದೆ. ಇದಕ್ಕೆ ಹೊರತಾಗಿಯೂ ಈ ಬಾರಿ ಚುನಾವಣೆಗಳಿಗೆ ECI ಸರಿಸುಮಾರು 2.05 ಲಕ್ಷ EVMಗಳನ್ನು ಕಡಿಮೆ ನಿಗದಿಪಡಿಸಿದೆ. ಇದರ ಹಿಂದಿನ ಮರ್ಮವೇನು? ಇವಿಎಂಗಳು ಮೊದಲಿಗಿಂತ ಇದ್ದಕ್ಕಿದ್ದಂತೆ ಸ್ಮಾರ್ಟ್ ಆಗಿವೆಯೇ? ಚುನಾವಣಾ ಆಯೋಗ ಇದಕ್ಕೆ ಯಾವುದೇ ವಿವರಣೆಯನ್ನು ನೀಡುತ್ತಿದ್ದರೆ, ಅದು ಸಾರ್ವಜನಿಕ ಡೊಮೇನ್‌ನಲ್ಲಿರಬೇಕು. ಆ ರೀತಿಯ ಪಾರದರ್ಶಕತೆಯನ್ನು ಈ ಸಾಂವಿಧಾನಿಕ ಸಂಸ್ಥೆಯಿಂದ ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.

ರಾಯ್ ಅವರು ಆರ್‌ಟಿಐ ಅರ್ಜಿಯ ಮೂಲಕ ಪಡೆದ ಮತ್ತು ಚುನಾವಣಾ ಆಯೋಗದಿಂದ ಪಡೆದ ಮಾಹಿತಿಯಲ್ಲಿ ಇವಿಎಂಗಳ ಸಂಖ್ಯೆಯ ಕುರಿತ ಅಂಕಿಅಂಶಗಳು ಅನುಮಾನಗಳನ್ನು ಹುಟ್ಟುಹಾಕಿವೆ . RTI ಮೂಲಕ ರಾಯ್ ಅವರು ಪಡೆದ ದಾಖಲೆಗಳ ಪ್ರಕಾರ, ಒಟ್ಟು 10,42,000 ಇವಿಎಂಗಳನ್ನು ಪೂರೈಸಲು ಜೂನ್ 21,2021 ರಂದು ECIL ಮತ್ತು BEL  ಚುನಾವಣಾ ಆಯೋಗ ಆದೇಶವನ್ನು ನೀಡಿತ್ತು. BELನಿಂದ 4,87,000 ಬ್ಯಾಲೆಟ್ ಯೂನಿಟ್ ಮತ್ತು ECIL ನಿಂದ 5,55,000 ಪೂರೈಸಲು ಬ್ಯಾಲೆಟ್ ಯೂನಿಟ್ ಪೂರೈಸಲು ಸೂಚಿಸಿತ್ತು. BELನಿಂದ 4,08,500 ಕಂಟ್ರೋಲ್‌ ಯುನಿಟ್‌ ಮತ್ತು  ECIL ನಿಂದ 2,88,500 ಸೇರಿದಂತೆ ಒಟ್ಟು 6,97,000 ಕಂಟ್ರೋಲ್‌ ಯುನಿಟ್‌ ಪೂರೈಸಲು ಸೂಚಿಸಿತ್ತು. BELನಿಂದ 3,24,000 ವಿವಿಪ್ಯಾಟ್‌ ಮತ್ತು  ECIL ನಿಂದ 3,22,000 ವಿವಿಪ್ಯಾಟ್‌ ಪೂರೈಸಲು ಚುನಾವಣಾ ಆಯೋಗವು ಸೂಚಿಸಿತ್ತು. ಅಧಿಸೂಚನೆಯ ಪ್ರಕಾರ ಆದೇಶವನ್ನು ಮಾರ್ಚ್ 2023ರಲ್ಲಿ ಪೂರ್ಣಗೊಳಿಸಬೇಕಿತ್ತು. ಅಂದರೆ ಇದು ಸ್ಪಷ್ಟವಾಗಿ, 2024ರ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟು ಆದೇಶಿಸಿರುವುದು ಸ್ಪಷ್ಟವಾಗುತ್ತದೆ.

2022-2023ರಲ್ಲಿ ECIಗೆ ಪೂರೈಸಿದ ಒಟ್ಟು ಬ್ಯಾಲೆಟ್ ಯೂನಿಟ್ ಸಂಖ್ಯೆ 4,18,590, ಹೆಚ್ಚು ವಿಚಿತ್ರವೆಂದರೆ, ಕಂಟ್ರೋಲ್‌ ಯುನಿಟ್‌ಗಾಗಿ ECIL ಹೊಂದಿದ್ದ ಆದೇಶವು 2,88,500 ಯುನಿಟ್‌ಗಳಿಗೆ ಆಗಿತ್ತು, ಆದರೆ ರಾಯ್‌ಗೆ RTI ಪ್ರತಿಕ್ರಿಯೆಯಲ್ಲಿ ಕಂಪನಿಯು 3,31,319 ಯುನಿಟ್‌ಗಳನ್ನು ಪೂರೈಸಿದೆ ಎಂದು ಹೇಳಿದೆ. ಅದು 42,819 ಯುನಿಟ್‌ಗಳ ಹೆಚ್ಚುವರಿ ವಿತರಣೆಯಾಗಿದೆ ಎಂಬುವುದನ್ನು ಸೂಚಿಸುತ್ತದೆ.

RTI ಮಾಹಿತಿ ಪ್ರಕಾರ, BELನಿಂದ ಪಡೆದ RTI ಉತ್ತರದಲ್ಲಿ Mk V (Mk 5) ಹೆಸರಿನ EVMಗಳ ಮಾದರಿಯ ಉಲ್ಲೇಖಗಳಿವೆ. ವಾಸ್ತವವಾಗಿ, 2021 ಜೂನ್ ಆದೇಶದ ಪ್ರಕಾರ BEL 2022-23 ರಲ್ಲಿ ECI ಗೆ ಸರಬರಾಜು ಮಾಡಿದ ಎಲ್ಲಾ ಬ್ಯಾಲೆಟ್ ಯೂನಿಟ್‌ಗಳು ಮತ್ತು ಕಂಟ್ರೋಲ್‌ ಯುನಿಟ್‌ಗಳು ಈ ಮಾದರಿಗೆ ಸೇರಿವೆ. ಈ ಪೂರೈಕೆಯು 4,87,000 BU ಮತ್ತು 4,08,500 CU ಆಗಿದೆ. ಈ ಮಾದರಿಯ ತಾಂತ್ರಿಕ ವಿವರಗಳು ಅನುಭವಿ ಇವಿಎಂ ವೀಕ್ಷಕರಿಗೂ ತಿಳಿದಿಲ್ಲ ಮತ್ತು ECI ವಿವರಣಾತ್ಮಕ ಟಿಪ್ಪಣಿಯ ಮೂಲಕ ಮಾದರಿಯ ಗುಣಲಕ್ಷಣಗಳನ್ನು ಸಾರ್ವಜನಿಕರಿಗೆ ವಿವರಿಸುವ ಅಗತ್ಯವಿದೆ ಎಂದು ರಾಯ್ AIDEMಗೆ ತಿಳಿಸಿದ್ದಾರೆ. ಪ್ರಸ್ತುತ ಭಾರತದಲ್ಲಿ ಬಳಸುತ್ತಿರುವ ಇವಿಎಂಗಳು ಎಂ3 ಮತ್ತು ಎಂ2ಎಂ3 ಮಾದರಿಗಳಿಗೆ ಸೇರಿವೆ. ಹಿಂದೆ, M2 ಮಾದರಿಯ EVM ಗಳನ್ನು ಸಹ ಬಳಸಲಾಗುತ್ತಿತ್ತು.

ನಿರ್ದಿಷ್ಟವಾಗಿ ಇವಿಎಂಗಳ ಬಳಕೆಗೆ ಸಂಬಂಧಿಸಿದಂತೆ, ರಾಯ್ ಅವರು 2018ರ ಹಿಂದೆಯೇ ನ್ಯಾಯಾಂಗ ಸೇರಿದಂತೆ ಸಾರ್ವಜನಿಕ ವೇದಿಕೆಗಳಲ್ಲಿ ಅಸಮಂಜಸತೆ ಮತ್ತು ದೋಷಗಳನ್ನು ಗಮನಕ್ಕೆ ತಂದಿದ್ದಾರೆ. ಅವರು ಮಾರ್ಚ್ 2018ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. 2019ರ ಲೋಕಸಭಾ ಚುನಾವಣೆಯ ಮೊದಲು PILನ್ನು ಸಲ್ಲಿಸಲಾಯಿತು ಮತ್ತು ನಂತರ ಸುಮಾರು 20 ವಿಚಾರಣೆಗಳು ಮತ್ತು ಅನೇಕ ಮುಂದೂಡಿಕೆಗಳಿಗೆ ಸಾಕ್ಷಿಯಾಗಿದೆ. ಆರು ವರ್ಷಗಳ ಸುದೀರ್ಘ ಕಾಯುವಿಕೆ ಮುಂದುವರಿದಾಗಲೂ ರಾಯ್ ಹೊಸ ಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಇದು ಪ್ರಸ್ತುತ ECI ಮೇಲೆ ಯಾವ ಪರಿಣಾಮ ಬೀರುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

ಇದನ್ನು ಓದಿ: ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸಿ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಪತ್ರಿಕಾ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...