Homeಮುಖಪುಟಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

ಮಾಧವಿ ಲತಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

- Advertisement -
- Advertisement -

ಮತದಾರರನ್ನು ಬೆದರಿಸುವ ಮತ್ತು ಸಾಮರಸ್ಯಕ್ಕೆ ಭಂಗ ತಂದಿರುವ ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಮಾಧವಿ ಲತಾ ಮತ್ತು ಬಿಜೆಪಿ ಪಕ್ಷದ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ತೆಲಂಗಾಣ ಫಾರ್ ಪೀಸ್ ಅಂಡ್ ಯೂನಿಟಿ (ಟಿಪಿಯು) ಮಂಗಳವಾರ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದೆ.

44 ಸಾಮಾಜಿಕ ಹಕ್ಕುಗಳ ಕಾರ್ಯಕರ್ತರು ಸಹಿ ಮಾಡಿದ ದೂರಿನಲ್ಲಿ, ಮುಸ್ಲಿಂ ಮಹಿಳಾ ಮತದಾರರು ಮುಸುಕು ತೆಗೆಯುವಂತೆ ಒತ್ತಾಯಿಸಿ, ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸುವುದು ಮತ್ತು ಅವರ ಗುರುತನ್ನು ಪ್ರಶ್ನಿಸಿರುವುದು ಮುಸ್ಲಿಂ ಮಹಿಳಾ ಮತದಾರರ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.

ಮಾಧವಿ ಲತಾ ತಮ್ಮ ಕ್ರಮಗಳನ್ನು ಸಮರ್ಥಿಸಿಕೊಂಡರೆ, 1961ರ ಜನತಾ ಪ್ರಾತಿನಿಧ್ಯ ಕಾಯ್ದೆಯ ನಿಯಮ 35ರಡಿಯಲ್ಲಿ ಮಾಧವಿ ಲತಾ ವರ್ತನೆ ಶಿಕ್ಷಾರ್ಹವಾಗಿದೆ ಎಂದು ಹೇಳಲಾಗಿದೆ. ಮತದಾರರಿಗೆ ಗುರುತಿನ ಚೀಟಿ ಕಾಯ್ದೆಯಡಿ ವಿತರಿಸಲಾಗಿರುವ ಗುರುತಿನ ಚೀಟಿಗಳನ್ನು ಪರಿಶೀಲಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅಧಿಕೃತ ಮತಗಟ್ಟೆ ಅಧಿಕಾರಿಗೆ ಮಾತ್ರವಿದೆ. ಆದ್ದರಿಂದ 1961ರ ಪ್ರಜಾ ಪ್ರತಿನಿಧಿ ಕಾಯ್ದೆಯ ನಿಯಮ 35ರ ಅಡಿ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.

ನಿಯಮಗಳ ಪ್ರಕಾರ, ವ್ಯಕ್ತಿಯೊಬ್ಬರ ಗುರುತನ್ನು ಪ್ರಶ್ನಿಸುವ ಅಧಿಕಾರ ಕೇವಲ ಚುನಾವಣಾಧಿಕಾರಿ ಅಥವಾ ಅವರಿಗೆ ನೆರವು ನೀಡಲು ನೇಮಕಗೊಂಡಿರುವ ನಿರ್ದಿಷ್ಟ ಉದ್ಯೋಗಿಗಳು ಅಥವಾ ಮತಗಟ್ಟೆ ಏಜೆಂಟ್‌ಗಳಿಗೆ ಮಾತ್ರವಿದೆ. ಮಾಧವಿ ಲತಾ ಅವರು ಮತದಾರರನ್ನು ಬೆದರಿಸಲು, ಗುರುತನ್ನು ಹೇಳುವಂತೆ ಒತ್ತಾಯಿಸಲು,  ಗುರುತಿನ ಚೀಟಿಗಳನ್ನು ತೆಗೆದುಕೊಳ್ಳಲು, ವೈಯಕ್ತಿಕ ಮಾಹಿತಿಯ ಪ್ರಶ್ನೆಗಳನ್ನು ಕೇಳಲು ಕಾನೂನಿನಲ್ಲಿ ಯಾವುದೇ ಅವಕಾಶ ಇಲ್ಲ ಎಂದು ದೂರಿನಲ್ಲಿ ಹೇಳಲಾಗಿದೆ.

ಮಾಧವಿ ಲತಾ ಅವರು ಬುರ್ಖಾ ಧರಿಸಿರುವ ಮತ್ತು ತಲೆಗೆ ಸ್ಕಾರ್ಫ್ ಧರಿಸಿದ್ದ ಮುಸ್ಲಿಂ ಮಹಿಳೆಯರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂಬುದು ವರದಿಗಳಿಂದ ಸ್ಪಷ್ಟವಾಗಿದೆ, ಇದು ಕೇವಲ ಕೋಮು ಸೌಹಾರ್ದತೆಗೆ ಭಂಗ ತರುವ ಉದ್ದೇಶವನ್ನು ಹೊಂದಿದೆ ಎಂದು ಕೂಡ ಮುಖ್ಯ ಚುನಾವಣಾ ಆಯುಕ್ತರಿಗೆ ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಲೋಕಸಭೆ ಚುನಾವಣೆಯ 4ನೇ ಹಂತದ ಮತದಾನದ ದಿನ ಹೈದರಾಬಾದ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ, ಆಝಂಪುರದ ಮತಗಟ್ಟೆ ಸಂಖ್ಯೆ 122ಕ್ಕೆ ತೆರಳಿ ಮುಸ್ಲಿಂ ಮಹಿಳೆಯರ ಬುರ್ಖಾದ ಸ್ಕಾರ್ಫ್‌ ತೆಗೆಸಿ ಗುರುತಿನ ಚೀಟಿಗಳನ್ನು ಪರಿಶೀಲಿಸಿದ್ದಾರೆ. ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನು ಓದಿ: ಹೈದಾರಾಬಾದ್| ಬುರ್ಖಾಧಾರಿ ಮಹಿಳೆಯರ ವೋಟರ್ ಐಡಿ ಪರಿಶೀಲಿಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...