Homeಮುಖಪುಟಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

ಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕೇವಲ ಹಿಂದೂ-ಮುಸ್ಲಿಂ, ಮಂದಿರ-ಮಸೀದಿ, ಸನಾತನ-ಇಸ್ಲಾಂ ಬಗ್ಗೆ ಮಾತನಾಡುತ್ತಾರೆ, ಆದರೆ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನದಂತಹ ದೇಶದ ದೊಡ್ಡ ಸಮಸ್ಯೆಗಳ ಬಗ್ಗೆ ಮೌನವಾಗಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಟೀಕಿಸಿದ್ದಾರೆ.

ಜಾರ್ಖಂಡ್‌ನ ಛಾತ್ರಾದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, ಬೆಲೆ ಏರಿಕೆ ವಿಚಾರವಾಗಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. ಯುಪಿಎ ಆಡಳಿತದಲ್ಲಿ ಕೇಸರಿ ಪಕ್ಷಕ್ಕೆ ಒಂದು ಕಾಲದಲ್ಲಿ ಪ್ರಮುಖ ಕಾಳಜಿಯಾಗಿದ್ದ ಹಣದುಬ್ಬರವು ಈಗ ಅವರಿಗೆ ಆರಾಮದಾಯಕವಾಗಿದೆ. ಅಡುಗೆ ಅನಿಲ ದರವು ಯುಪಿಎ ಆಡಳಿತಾವಧಿಯಲ್ಲಿ 400ರೂ. ಇದ್ದಾಗ, ಬಿಜೆಪಿಯು ಬೆಲೆಯೇರಿಕೆಯನ್ನು ರಾಕ್ಷಸ ಎಂದು ಕರೆದಿತ್ತು. ಆದರೆ, ಅದರ ದರವು ರೂ. 1,200ನ್ನು ಮೀರಿರುವಾಗ ಬೆಲೆಯೇರಿಕೆಯು ಪ್ರೇಮಿಯಾಗಿ ಬದಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಪಕ್ಷವು ದ್ವೇಷದ ರಾಜಕಾರಣ ಮಾಡುತ್ತಿದೆ ಮತ್ತು ಹಿಂದೂ-ಮುಸ್ಲಿಂ ಹೆಸರಿನಲ್ಲಿ ತಾರತಮ್ಯವನ್ನು ಹರಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೇವಲ ಹಿಂದೂ-ಮುಸ್ಲಿಂ, ಮಂದಿರ-ಮಸೀದಿ, ಸನಾತನ-ಇಸ್ಲಾಂ ಬಗ್ಗೆ ಮಾತನಾಡುತ್ತಾರೆ, ಆದರೆ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನದಂತಹ ದೇಶದ ದೊಡ್ಡ ಸಮಸ್ಯೆಗಳ ಬಗ್ಗೆ  ಮೌನವಾಗಿದ್ದಾರೆ. ಪ್ರಧಾನಮಂತ್ರಿಯವರು ಇತ್ತೀಚೆಗೆ ಜಾರ್ಖಂಡ್‌ನ ಛತ್ರಕ್ಕೆ ಭೇಟಿ ನೀಡಿದ್ದರು, ಆದರೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಒಂದೇ ಒಂದು ಪದವನ್ನು ಹೇಳಲಿಲ್ಲ ಅಥವಾ ಮುಂದಿನ ಐದು ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿ ಬಗ್ಗೆ ಯಾವುದೇ ಮಾರ್ಗಸೂಚಿಯನ್ನು ನೀಡಲಿಲ್ಲ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಜೆಪಿಯು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಸಂಚು ರೂಪಿಸಿ ಕಂಬಿ ಹಿಂದೆ ಕಳುಹಿಸಲಾಗಿದೆ. ಬಿಜೆಪಿಗರು ನಮ್ಮ ಕುಟುಂಬದ ವಿರುದ್ಧ ಇಡಿ, ಸಿಬಿಐನ್ನು ಬಳಸಿದ್ದಾರೆ, ಆದರೆ ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳು ಅಧಿಕಾರಕ್ಕೆ ಬಂದರೆ ಒಂದು ಕೋಟಿ ಯುವಕರಿಗೆ ಉದ್ಯೋಗ, ಎಲ್‌ಪಿಜಿ ಸಿಲಿಂಡರ್ ದರವನ್ನು 500ರೂ.ಗೆ ಇಳಿಸಲಾಗುವುದು ಮತ್ತು 200ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆ ಬಹಳ ಮಹತ್ವದ್ದಾಗಿದೆ ಏಕೆಂದರೆ ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಚುನಾವಣೆಯಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅಪಾಯಕ್ಕೆ ಸಿಲುಕಲಿದೆ, ಕೇಂದ್ರದಿಂದ ಮೋದಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ ಎಂದು ಹೇಳಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ದೊಡ್ಡ ಕೈಗಾರಿಕೆ ಸ್ಥಾಪನೆಯಾಗಿಲ್ಲ. ಮೋದಿ ಸರ್ಕಾರ ಕೈಗಾರಿಕೆಗಳನ್ನು ಸ್ಥಾಪಿಸುವ ಬದಲು ರೈಲ್ವೆ, ವಿಮಾನ ನಿಲ್ದಾಣಗಳು, ಬ್ಯಾಂಕ್‌ಗಳು ಮತ್ತು ಸಾರ್ವಜನಿಕ ವಲಯದ ಘಟಕಗಳನ್ನು ಮಾರಾಟ ಮಾಡುವಲ್ಲಿ ನಿರತವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ವಾರಣಾಸಿಯಿಂದ ಮೋದಿ ವಿರುದ್ಧ ಸ್ಪರ್ಧೆಗಿಳಿದಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...