Homeಮುಖಪುಟಕೇಂದ್ರದಲ್ಲಿ ಸರ್ಕಾರ ರಚನೆಗೆ 'ಇಂಡಿಯಾ ಮೈತ್ರಿಕೂಟ'ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

- Advertisement -
- Advertisement -

ಕೇಂದ್ರದಲ್ಲಿ ಸರ್ಕಾರ ರಚಿಸಲು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ ಪಕ್ಷವು ಬಾಹ್ಯ ಬೆಂಬಲ ನೀಡಲಿದೆ ಪ.ಬಂಗಾಳ ಸಿಎಂ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.

ಹೂಗ್ಲಿಯ ಚಿನ್ಸುರಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿದ ತಕ್ಷಣ ಸಿಎಎ, ಎನ್‌ಆರ್‌ಸಿ ಮತ್ತು ಯುಸಿಸಿಯನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗಳಿಸುವ ಬಿಜೆಪಿಯ ಗುರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಜನರು ಬಿಜೆಪಿಯನ್ನು ತಿರಸ್ಕರಿಸಲಿದ್ದಾರೆ ಎಂದು ಹೇಳಿದ್ದಾರೆ.

400 ಸೀಟು ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ, ಆದರೆ ಜನ ಇದು ನಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ. ಬಿಜೆಪಿ ಕಳ್ಳರಿಂದ ತುಂಬಿರುವ ಪಕ್ಷ ಎಂದು ಇಡೀ ದೇಶವೇ ಅರ್ಥ ಮಾಡಿಕೊಂಡಿದೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಾವು ಹೊರಗಿನಿಂದ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸುತ್ತೇವೆ. ಆದ್ದರಿಂದ ಪಶ್ಚಿಮ ಬಂಗಾಳದಲ್ಲಿ, ನಮ್ಮ ತಾಯಂದಿರು ಮತ್ತು ಸಹೋದರಿಯರು ಎಂದಿಗೂ ಸಮಸ್ಯೆಯನ್ನು ಎದುರಿಸುವುದಿಲ್ಲ,  100 ದಿನಗಳ ಉದ್ಯೋಗ ಯೋಜನೆಯಲ್ಲಿ ಕೆಲಸ ಮಾಡುವವರು ಸಹ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ಪಕ್ಷವು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಸಿಪಿಐ(ಎಂ)ನ್ನು ಬೆಂಬಲಿಸುವುದಿಲ್ಲ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಈ ಎರಡೂ ಪಕ್ಷಗಳು ರಾಜ್ಯದಲ್ಲಿ ಬಿಜೆಪಿಗೆ ಸಹಾಯ ಮಾಡುತ್ತಿವೆ. ಬಂಗಾಳದಲ್ಲಿ ಸಿಪಿಐ(ಎಂ) ಮತ್ತು ಕಾಂಗ್ರೆಸ್‌ನ್ನು ಲೆಕ್ಕಿಸಬೇಡಿ. ಅವರು ನಮ್ಮೊಂದಿಗಿಲ್ಲ, ಇಲ್ಲಿ ಬಿಜೆಪಿ ಜೊತೆಗಿದ್ದಾರೆ. ನಾನು ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

2004ರ ಚುನಾವಣೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸೋಲನ್ನು ಸ್ಮರಿಸಿದ ಬ್ಯಾನರ್ಜಿ, ಬಿಜೆಪಿಯ ‘ಇಂಡಿಯಾ ಶೈನಿಂಗ್’ ಘೋಷಣೆಯ ಹೊರತಾಗಿಯೂ 2004ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಸೋಲನ್ನು ಕಂಡಿದ್ದರು.  ಈ ಸೋಲನ್ನು ಯಾರೂ ಊಹಿಸಿರಲಿಲ್ಲ. ಜನರು ಅವರಿಗೆ ಮತ ಹಾಕಿರಲಿಲ್ಲ ಎಂದು ಹೇಳಿದ್ದಾರೆ.

ಎರಡು ತಿಂಗಳ ಅವಧಿಯಲ್ಲಿ ಏಳು ಹಂತಗಳಲ್ಲಿ ಚುನಾವಣೆಯನ್ನು ನಿಗದಿಪಡಿಸಿದ್ದಕ್ಕಾಗಿ ಚುನಾವಣಾ ಆಯೋಗವನ್ನು ಟೀಕಿಸಿದ ಮಮತಾ ಬ್ಯಾನರ್ಜಿ, ಈ ನಿರ್ಧಾರವು ಕೇಸರಿ ಪಕ್ಷಕ್ಕೆ ಅನುಕೂಲಕರವಾಗಿದೆ ಮತ್ತು ಅತಿಯಾದ ತಾಪಮಾನದಿಂದ ಸಾಮಾನ್ಯ ಜನರು ಎದುರಿಸುತ್ತಿರುವ ಕಷ್ಟಗಳನ್ನು ಕಡೆಗಣಿಸಿದ್ದಾರೆ. ಚುನಾವಣಾ ಆಯೋಗವು ಕೈಗೊಂಬೆಯಾಗಿದ್ದು, ಮೋದಿಯವರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತದೆ. ಎರಡೂವರೆ ತಿಂಗಳಿನಿಂದ ಚುನಾವಣೆ ನಡೆಯುತ್ತಿದೆ, ಚುನಾವಣಾ ಅಧಿಕಾರಿಗಳು ಎಂದಾದರೂ ಜನಸಾಮಾನ್ಯರ ಕಷ್ಟಗಳನ್ನು ಅರಿತುಕೊಂಡಿದ್ದೀರಾ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಿಸುವ ಯೋಜನೆಗಳನ್ನು ಘೋಷಿಸುವ ಮೂಲಕ ಮೋದಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ. ಚುನಾವಣೆ ನಡೆಯುತ್ತಿರುವಾಗ ಈಗ ಯಾಕೆ ಹೀಗೆ ಹೇಳುತ್ತಿದ್ದೀರಿ? ನೀವು ಇದನ್ನು ಮೊದಲೇ ಘೋಷಿಸಬೇಕಿತ್ತು, ಮೋದಿ ಅವರೇ, ನೀವು ಚುನಾವಣಾ ನೀತಿ ಸಂಹಿತೆಯ್ನು ಉಲ್ಲಂಘಿಸುತ್ತಿದ್ದೀರಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನು ಓದಿ: ಮೋದಿ ಬೆಲೆ ಏರಿಕೆ, ನಿರುದ್ಯೋಗದ ಬಗ್ಗೆ ಮಾತನಾಡುವುದನ್ನು ಬಿಟ್ಟು ಮಂದಿರ-ಮಸೀದಿ ಎನ್ನುತ್ತಿದ್ದಾರೆ: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...