Homeಮುಖಪುಟಸಿಎಎ: 14 ಜನರಿಗೆ ಮೊದಲ ಪೌರತ್ವ ಪ್ರಮಾಣಪತ್ರ ವಿತರಿಸಿದ ಕೇಂದ್ರ ಸರ್ಕಾರ

ಸಿಎಎ: 14 ಜನರಿಗೆ ಮೊದಲ ಪೌರತ್ವ ಪ್ರಮಾಣಪತ್ರ ವಿತರಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ದೇಶದ ಹಲವು ರಾಜ್ಯಗಳು ಮತ್ತು ಜನರ ವಿರೋಧದ ನಡುವೆಯೂ ವಿವಾದಿತ ಪೌರತ್ವ ಕಾಯ್ದೆಯನ್ನು ಜಾರಿ ಮಾಡಿರುವ ಕೇಂದ್ರ ಸರ್ಕಾರವು, ಬುಧವಾರ 14 ಜನರಿಗೆ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ ಪ್ರತಿಯನ್ನು ನೀಡಿದೆ.

ನಿಗದಿತ ಪೋರ್ಟಲ್ ಮೂಲಕ ಪೌರತ್ವಕ್ಕಾಗಿ ಆನ್‌ಲೈನ್‌ನಲ್ಲಿ ಸಲ್ಲಿಸಿದ್ದ ಅರ್ಜಿಗಳನ್ನು ಪ್ರಕ್ರಿಯೆಗೊಳಿಸಿದ ನಂತರ, ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರಿಗೆ ದಾಖಲೆಗಳನ್ನು ಹಸ್ತಾಂತರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಸಿಎಎ ಅಡಿಯಲ್ಲಿ ನಿಯಮಗಳನ್ನು ರೂಪಿಸಿ ಮತ್ತು ಸೂಚಿಸಿದ ಸುಮಾರು ಎರಡು ತಿಂಗಳ ನಂತರ ಕಾನೂನಿನ ಅಡಿಯಲ್ಲಿ ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ನೀಡಲಾಯಿತು.

ಈ ಬೆಳವಣಿಗೆಯನ್ನು “ಐತಿಹಾಸಿಕ ದಿನ” ಎಂದು ಬಣ್ಣಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವವರ ದಶಕಗಳ ಕಾಯುವಿಕೆ ಕೊನೆಗೊಂಡಿದೆ ಎಂದು ಹೇಳಿದರು.

ಮೂರು ದೇಶಗಳಲ್ಲಿ ಧಾರ್ಮಿಕ ಕಿರುಕುಳದಿಂದ ಓಡಿಹೋದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಹೋದರರು ಮತ್ತು ಸಹೋದರಿಯರು ಭಾರತೀಯ ಪೌರತ್ವವನ್ನು ಪಡೆಯಲು ಪ್ರಾರಂಭಿಸಿದ್ದಾರೆ. ದೇಶದ ಸ್ವಾತಂತ್ರ್ಯದ ಸಮಯದಲ್ಲಿ ನೀಡಿದ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಡೇರಿಸಿದ್ದಾರೆ ಎಂದು ಶಾ ಹೇಳಿದರು.

“ದಶಕಗಳಿಂದ ನರಳುತ್ತಿರುವ ಈ ಜನರಿಗೆ ನ್ಯಾಯ ಮತ್ತು ಹಕ್ಕುಗಳನ್ನು ನೀಡಿದ್ದಕ್ಕಾಗಿ ನಾನು ಮೋದಿಜಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನನ್ನ ಎಲ್ಲಾ ನಿರಾಶ್ರಿತ ಸಹೋದರ ಸಹೋದರಿಯರಿಗೆ ಮೋದಿ ಸರ್ಕಾರವು ಸಿಎಎ ಮೂಲಕ ಎಲ್ಲರಿಗೂ ಪೌರತ್ವವನ್ನು ನೀಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ” ಎಂದು ಅಮಿತ್ ಶಾ ‘ಎಕ್ಸ್’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪೌರತ್ವ ಪ್ರಮಾಣಪತ್ರ ಹಸ್ತಾಂತರಕ್ಕೆ ಸಂಬಂಧಿಸಿದ ಈ ಬೆಳವಣಿಗೆಯು ಏಳು ಹಂತದ ಸಾರ್ವತ್ರಿಕ ಚುನಾವಣೆಗಳ ಮಧ್ಯೆ ನಡೆದಿದೆ. ಚುನಾವಣೆಯು ಏಪ್ರಿಲ್ 19 ರಂದು ಪ್ರಾರಂಭವಾಗಿದ್ದು, ಜೂನ್ 1 ರಂದು ಕೊನೆಗೊಳ್ಳುತ್ತದೆ; ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಹಿಂದೂ, ಸಿಖ್, ಜೈನ್, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ವಲಸಿಗರಿಗೆ ಭಾರತೀಯ ಪೌರತ್ವವನ್ನು ನೀಡಲು ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಜಾರಿಗೊಳಿಸಲಾಗಿದೆ.

ಜಾರಿಗೆ ಬಂದ ತಕ್ಷಣ, ಸಿಎಎ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದುಕೊಂಡಿತು. ಆದರೆ, ನಾಲ್ಕು ವರ್ಷಗಳ ವಿಳಂಬದ ನಂತರ ಈ ವರ್ಷ ಮಾರ್ಚ್ 11 ರಂದು ಭಾರತೀಯ ಪೌರತ್ವವನ್ನು ನೀಡಬಹುದಾದ ನಿಯಮಗಳನ್ನು ಹೊರಡಿಸಲಾಯಿತು.

ಕೇಂದ್ರ ಗೃಹ ಕಾರ್ಯದರ್ಶಿ ಭಲ್ಲಾ ಅವರು ಪ್ರಮಾಣಪತ್ರಗಳನ್ನು ಹಸ್ತಾಂತರಿಸುವಾಗ, 14 ಜನ ಪೌರತ್ವ ಸ್ವೀಕರಿಸುವವರನ್ನು ಅಭಿನಂದಿಸಿದರು.

ಇದನ್ನೂ ಓದಿ; ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ; ಕೇಜ್ರಿವಾಲ್ ಜೊತೆ ಕಾಣಿಸಿಕೊಂಡ ಆರೋಪಿ ಬಿಭವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...