Homeಚಳವಳಿಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಎರಡೂವರೆ ಲಕ್ಷ ಹುಡುಗಿಯರಿಗೆ ಪುಂಡಪೋಕರಿಗಳ ವಿರುದ್ಧ ಸ್ವಯಂರಕ್ಷಣೆಯ ತರಬೇತಿ ನೀಡಿದ ಸಾಧಕನಿಗೊಂದು ಸಲಾಂ..

ಉತ್ತರ ಪ್ರದೇಶದ ಗೋರಖ್‌ಪುರದ ನಿವಾಸಿಯಾಗಿರುವ ಅಭಿಷೇಕ್ ಯಾದವ್, ಈ ದೇಶದಲ್ಲಿ ಮಹಿಳೆಯರಿಗೆ ಸಾಕಷ್ಟು ರಕ್ಷಣೆ ಇಲ್ಲದಿರುವುದನ್ನು ಕಂಡು ದೇಶದ ಬಹುತೇಕ ಮಾನವೀಯತೆಯುಳ್ಳ ನಾಗರಿಕರಂತೆ ಮರುಗಿದ್ದರು. ಅದಕ್ಕಾಗಿ ಏನನ್ನಾದರೂ ‌ಮಾಡಲೇಬೇಕೆಂದು ಹೊರಟ ಅವರ ಸಾಧನೆ ಮಾತ್ರ ಅಸಾಧಾರಣವಾದುದು.

- Advertisement -
- Advertisement -

ಕೃಪೆ: ಇಂಡಿಯಾಟೈಮ್ಸ್‌

ಅನುವಾದ: ನಿಖಿಲ್ ಕೋಲ್ಪೆ

ಡಿಸೆಂಬರ್ 16, 2012ರ ರಾತ್ರಿ ದಿಲ್ಲಿಯಲ್ಲಿ ಪುಂಡರ ಗುಂಪೊಂದು ಅರೆ ವೈದ್ಯಕೀಯ ವಿದ್ಯಾರ್ಥಿನಿ ಯುವತಿಯೊಬ್ಬರ ಮೇಲೆ ಚಲಿಸುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘೋರ ಘಟನೆ ನಡೆದಿತ್ತು. ನಿರ್ಭಯಾ ಪ್ರಕರಣವೆಂದು ಮಾಧ್ಯಮಗಳು ಹೆಸರಿಸಿದ್ದ ಈ ಘಟನೆಯಿಂದ ದೇಶದ ಜನರಂತೆ ಗೋರಖ್‌ಪುರದ ಅಭಿಷೇಕ್ ಯಾದವ್ ಅವರಿಗೂ ತೀವ್ರ ನೋವಾಗಿತ್ತು.

ಈ ಕುರಿತು ಏನನ್ನಾದರೂ ಮಾಡಲೇಬೇಕು ಎಂಬ ದೃಢ ಸಂಕಲ್ಪ ಮಾಡಿದಾಗ ಅವರು ಹೆಚ್ಚು ಆ ಕಡೆ, ಈ ಕಡೆ ನೋಡಬೇಕಾಗಿರಲಿಲ್ಲ. ಹಲವು ರೀತಿಯ ಸ್ವಯಂರಕ್ಷಣಾ ಕಲೆಗಳಲ್ಲಿ ನಿಷ್ಣಾತರಾಗಿರುವ ಅವರು, ಮಹಿಳೆಯರು ಮತ್ತು ಹುಡುಗಿಯರಿಗೆ ಈ ರೀತಿಯ ದಾಳಿಕೋರರ ವಿರುದ್ಧ ತಮ್ಮನ್ನು ರಕ್ಷಿಸಿಕೊಳ್ಳುವ ತರಬೇತಿ ನೀಡಲು ನಿರ್ಧರಿಸಿದರು. ಅಂದಿನಿಂದ ಅವರು 2.5 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಹುಡುಗಿಯರಿಗೆ ಸ್ವಯಂ ರಕ್ಷಣೆಯಲ್ಲಿ ತರಬೇತಿ ನೀಡಿದ್ದಾರೆ.

28 ವರ್ಷ ಪ್ರಾಯದ ಅವರು, ‘ಅಭಿಸೆಲ್ಫ್ ಪ್ರೊಟೆಕ್ಷನ್ ಟ್ರಸ್ಟ್’ (Abhiself Protection Trust) ಎಂಬ ಸ್ವಯಂಸೇವಾ ಸಂಸ್ಥೆಯನ್ನು ನಡೆಸುತ್ತಿದ್ದು, ಅದರ ಅಡಿಯಲ್ಲಿ ‘ಮೇರಿ ರಕ್ಷಾ ಮೇರಿ ಹಾತೋಂಮೆ’ (ನನ್ನ ರಕ್ಷಣೆ ನನ್ನ ಕೈಗಳಲ್ಲಿ) ಕಾರ್ಯಕ್ರಮದಡಿ ಹೆಣ್ಣುಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ. ಅವರಲ್ಲಿ ತರಬೇತಿ ಪಡೆಯುತ್ತಿರುವವರಲ್ಲಿ ಹೆಚ್ಚಿನವರು ಗ್ರಾಮೀಣ ಪ್ರದೇಶದವರೇ ಆಗಿರುವುದು ವಿಶೇಷವಾಗಿದೆ.

ಅಭಿಷೇಕ್ ಮೂಲತಃ ಜಪಾನ್ ಮೂಲದ ಐಕಿಡೋ (Aikido) ಪರಿಣಿತರಾಗಿದ್ದು, ಆರಂಭದಲ್ಲಿ ಉತ್ತರ ಪ್ರದೇಶ ಪೊಲೀಸರಿಗೆ ತರಬೇತಿ ನೀಡುತ್ತಿದ್ದರು.

“ನಾನು 2007ರಲ್ಲಿ ಉತ್ತರ ಪ್ರದೇಶದ ಪೊಲೀಸ್ ಕಮಾಂಡೊಗಳಿಗೆ ತರಬೇತಿ ಆರಂಭಿಸಿದೆ. ಆದರೆ, 2012ರಲ್ಲಿ ದಿಲ್ಲಿಯ ಸಾಮೂಹಿಕ ಅತ್ಯಾಚಾರದ ಬಳಿಕ, ಅದೇ ರಕ್ಷಣಾ ತಂತ್ರವನ್ನು ಹೆಣ್ಣುಮಕ್ಕಳಿಗೆ ಕಲಿಸಲು ನಾವೊಂದು ಅಭಿಯಾನ ಆರಂಭಿಸಿದೆವು. ಒಂದು ವಾರ ಅವಧಿಯ ಈ ತರಬೇತಿಯು ಯಾವುದೇ ದಾಳಿಕೋರರನ್ನು ಸ್ವಂತವಾಗಿ ಎದುರಿಸಲು ಅವರನ್ನು ಶಕ್ತರನ್ನಾಗಿ ಮಾಡುತ್ತದೆ” ಎಂದು ಅಭಿಷೇಕ್ ಹೇಳುತ್ತಾರೆ.

ಅವರ ಶಿಬಿರಗಳಲ್ಲಿ ಸಾಮಾನ್ಯವಾಗಿ ನೂರಾರು ಹೆಣ್ಣುಮಕ್ಕಳಿರುತ್ತಾರೆ. ಆದರೆ, ಅವರು 2016ರಲ್ಲಿ ಪ್ರತಾಪಗಢದ ಕುಂದಾ ಎಂಬಲ್ಲಿ 5,700ರಷ್ಟು ಭಾರೀ ಸಂಖ್ಯೆಯ ಹೆಣ್ಣುಮಕ್ಕಳಿಗೆ ತರಬೇತಿ ನೀಡಿ ಲಿಮ್ಕಾ ವಿಶ್ವದಾಖಲೆ ಮಾಡಿದರು.

2002ರಿಂದ ಸ್ವಯಂರಕ್ಷಣಾ ಕಲೆಯಲ್ಲಿ ತರಬೇತಿ ಪಡೆಯಲು ಆರಂಭಿಸಿದ ಅವರು, ಅಂತರರಾಷ್ಟ್ರೀಯ ಕರಾಟೆಯಲ್ಲಿ ಚಿನ್ನದ ಪದಕ ವಿಜೇತರೂ ಹೌದು. ಈಗ ತರಬೇತಿಯಲ್ಲಿ ಅವರಿಗೆ ನೆರವಾಗಲು 12 ಮಂದಿಯ ತಂಡವಿದೆ.

“ನಮ್ಮ ಗುರಿಯೆಂದರೆ ಹೆಣ್ಣುಮಕ್ಕಳನ್ನು ಸಶಕ್ತಗೊಳಿಸಿ, ಯಾವುದೇ ಸವಾಲನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುವಂತಹ ವ್ಯಕ್ತಿಗಳಾಗಿ ಅವರನ್ನು ಗಟ್ಟಿಗೊಳಿಸುವುದು. ಐಕಿಡೋದಲ್ಲಿ ಯಾರೂ ಬೇಕಾದರೂ ನಿಯಮಿತ ಅಭ್ಯಾಸದಿಂದ ಕಲಿತು ನಿಜಜೀವನದಲ್ಲಿ ಉಪಯೋಗಿಸಬಹುದಾದ ಹಲವಾರು ಪಟ್ಟುಗಳು ಮತ್ತು ತಂತ್ರಗಳಿವೆ” ಎಂದು ಅಭಿಷೇಕ್ ವಿವರಿಸುತ್ತಾರೆ.

“ನಾವು ಶಾಲೆಯಿಂದ ಶಾಲೆಗೆ ಹೋಗುತ್ತೇವೆ. ಅಲ್ಲಿ ನಾವು ಅವರು ಏಕೆ ಸ್ವಯಂರಕ್ಷಣೆಯನ್ನು ಕಲಿಯುವುದು ಅಗತ್ಯ ಮತ್ತು ಅದರಲ್ಲೂ ಮಹಿಳೆಯರ ಸುರಕ್ಷಿತತೆಯ ವಿಷಯದಲ್ಲಿ ನಮ್ಮ ದೇಶದಲ್ಲಿ ಪರಿಸ್ಥಿತಿ ಇಷ್ಟೊಂದು ಕೆಟ್ಟಿರುವ ಸಂದರ್ಭದಲ್ಲಿ ಇದು ಏಕೆ ಮುಖ್ಯ ಎಂದು ವಿವರಿಸುತ್ತೇವೆ” ಎಂದವರು ಹೇಳುತ್ತಾರೆ.

ಉತ್ತರ ಪ್ರದೇಶದಲ್ಲಿ ತರಬೇತಿ ನೀಡಿದ ಮೇಲೆ ಈ ತರಬೇತಿ ಕಾರ್ಯಕ್ರಮವನ್ನು ರಾಜ್ಯದಾಚೆಗೂ ವಿಸ್ತರಿಸುವ ಗುರಿಯಿದೆ ಎನ್ನುವ ಅವರು, ಸದ್ಯವೇ ದಿಲ್ಲಿ ಮತ್ತು ಹರ್ಯಾಣದಲ್ಲಿ ತರಬೇತಿ ಕಾರ್ಯಕ್ರಮ ಆರಂಭಿಸುವುದಾಗಿ ತಿಳಿಸಿದ್ದಾರೆ…

ಅವರಿಗೆ ನಾವೆಲ್ಲರೂ ಒಂದು ಸಲಾಂ ಹೇಳೋಣ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...