Homeಮುಖಪುಟಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

- Advertisement -
- Advertisement -

ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ.

“ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ ಅನುಮತಿ ನಿರಾಕರಿಸಿದ್ದೇವೆ. ಏಕೆಂದರೆ, ಸ್ಪ್ಯಾನಿಷ್ ಬಂದರಿನಲ್ಲಿ ನಿಲುಗಡೆ ಬಯಸಿದ್ದ ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿನಲ್ಲಿ ಇದೇ ಮೊದಲ ಬಾರಿಗೆ ನಾವು ಶಸ್ತ್ರಾಸ್ತ್ರ ಪತ್ತೆ ಹಚ್ಚಿದ್ದೇವೆ” ಎಂದು ಅಲ್ಬರೆಸ್ ತಿಳಿಸಿದ್ದಾರೆ.

“ಇಸ್ರೇಲ್‌ಗೆ ಶಸ್ತ್ರಾಸ್ತ್ರ ಹೊತ್ತೊಯ್ಯುವ ಎಲ್ಲಾ ಹಡಗುಗಳಿಗೆ ಸ್ಪ್ಯಾನಿಷ್ ಬಂದರಿನಲ್ಲಿ ಇದೇ ನಿಯಮ ಅನ್ವಯಿಸಲಿದೆ. ವಿದೇಶಾಂಗ ಸಚಿವಾಲಯ ಒಂದು ಸ್ಪಷ್ಟ ಕಾರಣಕ್ಕಾಗಿ ಅಂತಹ ಹಡಗುಗಳ ನಿಲುಗಡೆಗೆ ಅವಕಾಶ ನಿರಾಕರಿಸಿದೆ. ಮಧ್ಯಪ್ರಾಚ್ಯಕ್ಕೆ ಹೆಚ್ಚಿನ ಶಸ್ತ್ರಾಸ್ತ್ರಗಳ ಅಗತ್ಯವಿಲ್ಲ, ಅಲ್ಲಿ ಶಾಂತಿ ನೆಲೆಸಬೇಕು” ಎಂದು ಅಲ್ಬರೆಸ್ ಹೇಳಿದ್ದಾರೆ.

ಅಲ್ಬರೆಸ್ ಅವರು ಹಡಗಿನ ಬಗ್ಗೆ ವಿವರಗಳನ್ನು ನೀಡಿಲ್ಲ. ಆದರೆ, ಸ್ಪೇನ್‌ನ ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಅವರು “ಮೇ 21 ರಂದು ಕಾರ್ಟೇಜಿನಾದ ಆಗ್ನೇಯ ಬಂದರಿನಲ್ಲಿ ನಿಲುಗಡೆಗೆ ‘ಮೇರಿಯಾನ್ನೆ ಡ್ಯಾನಿಕಾ’ ಎಂಬ ಹಡಗು ಅನುಮತಿ ಕೋರಿತ್ತು ಎಂದು ತಿಳಿಸಿದ್ದಾರೆ.

ಡ್ಯಾನಿಶ್ ಧ್ವಜ ಹೊಂದಿದ್ದ ಈ ಹಡಗು ಭಾರತದ ಚೆನ್ನೈನಿಂದ ಇಸ್ರೇಲ್‌ನ ಹೈಫಾ ಬಂದರಿಗೆ 27 ಟನ್ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿತ್ತು ಎಂದು ವರದಿಗಳು ಹೇಳಿವೆ.

ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಮತ್ತು ಅವರ ಸಮ್ಮಿಶ್ರ ಪಾಲುದಾರರಾದ ಎಡಪಂಥೀಯ ‘ಸುಮಾರ್ ಒಕ್ಕೂಟ’ ಶುಕ್ರವಾರ ಕಾರ್ಟೇಜಿನಾ ಬಂದರಿನಲ್ಲಿ ಶುಕ್ರವಾರ ನಿಲುಗಡೆ ಬಯಸಿದ್ದ ‘ಬೋರ್ಕಮ್’ ಎಂಬ ಮತ್ತೊಂದು ಹಡಗಿನ ಮೇಲೂ ಈ ಘೋಷಣೆ ಮಾಡಿದೆ.

‘ಬೋರ್ಕಮ್’ ಹಡಗು ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಒಯ್ಯುತ್ತಿದೆ ಎಂದು ಪ್ಯಾಲೆಸ್ತೀನ್ ಪರ ಗುಂಪುಗಳು ಹೇಳಿವೆ. ಈ ಹಡಗಿಗೂ ನಿಲುಗಡೆ ನಿಷೇಧಿಸಬೇಕು ಎಂದು ‘ಸುಮಾರ್’ ಒಕ್ಕೂಟ ಒತ್ತಾಯಿಸಿದೆ. ಆದರೆ, ಬೋರ್ಕಮ್ ಹಡಗು ಮಿಲಿಟರಿ ವಸ್ತುಗಳನ್ನು ಜೆಕ್ ಗಣರಾಜ್ಯಕ್ಕೆ ಸಾಗಿಸುತ್ತಿದೆ, ಇಸ್ರೇಲ್ ಅಲ್ಲ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಹೇಳಿದ್ದಾರೆ.

ಗಾಝಾ ಮೇಲಿನ ಇಸ್ರೇಲ್ ಆಕ್ರಮಣವನ್ನು ಕಟುವಾಗಿ ಖಂಡಿಸಿದ ಯುರೋಪಿನ ಪ್ರಮುಖ ದೇಶಗಳಲ್ಲಿ ಸ್ಪೇನ್ ಮೊದಲ ಮುಂಬದಿಯದಲ್ಲಿದೆ. ಪ್ಯಾಲೆಸ್ತೀನ್‌ ದೇಶದ ಹಕ್ಕುಗಳನ್ನು ಬೆಂಬಲಿಸಲು ಇತರ ಯುರೋಪಿಯನ್ ದೇಶಗಳಲ್ಲಿ ಸ್ಪೇನ್ ಕರೆ ನೀಡಿವೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ನಂತರ ಸ್ಪೇನ್ ಇಸ್ರೇಲ್‌ಗೆ ಶಸ್ತ್ರಾಸ್ತ್ರ ಮಾರಾಟವನ್ನು ನಿಲ್ಲಿಸಿದೆ. 2023ರ ಅಕ್ಟೋಬರ್‌ನಿಂದ ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣದಲ್ಲಿ 35 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಬಲಿಯಾಗಿದ್ದಾರೆ. ಇಸ್ರೇಲ್ ಆಕ್ರಮಣ ಈಗಲೂ ಮುಂದುವರೆಯುತ್ತಿದೆ.

ತಂಬ್‌ನೈಲ್ ಚಿತ್ರ ಸಾಂದರ್ಭಿಕ

ಇದನ್ನೂ ಓದಿ : ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಪಿಲ್ ಸಿಬಲ್ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...