Homeಕರ್ನಾಟಕ'ಉಗ್ರ' ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

‘ಉಗ್ರ’ ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

- Advertisement -
- Advertisement -

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಕಳೆದ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದಿಂದ ಬಂಧಿಸಲ್ಪಟ್ಟಿದ್ದ ಉಳ್ಳಾಲದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಮೊಮ್ಮಗ ಅಮ್ಮಾರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಒಬ್ಬರು ವ್ಯಕ್ತಿಯ ಮೊಬೈಲ್‌ನಲ್ಲಿ ಐಸಿಸ್ ಧ್ವಜ ಮತ್ತು ಕರಪತ್ರಗಳು ಇದ್ದ ಮಾತ್ರಕ್ಕೆ ಅವರನ್ನು ಭಯೋತ್ಪಾದಕ ಎನ್ನಲಾಗದು ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿಯಾಗಿದೆ.

ಆಗಸ್ಟ್ 21,2021 ರಂದು ಯುಎಪಿಎ ಕಾಯ್ದೆಯಡಿಯಲ್ಲಿ ಎನ್‌ಐಎ ಅಮ್ಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯಿಂದ ಬಂಧಿಸಿತ್ತು. ತನ್ನ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್‌ನಲ್ಲಿ ಅಮ್ಮಾರ್ ಅಬ್ದುಲ್ ರೆಹಮಾನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆಯ ನಂತರ ಹೈಕೋರ್ಟ್ ಜಾಮೀನು ನೀಡಿದೆ.

“ಕೇವಲ ಭಯೋತ್ಪಾದಕ ಸಂಘಟನೆಯತ್ತ ಆಕರ್ಷಣೆ ಭಯೋತ್ಪಾದನೆಯಾಗುವುದಿಲ್ಲ. ಐಸಿಸ್ ಪರ ಭಾಷಣಗಳನ್ನು ಕೇಳುವುದು ಯುಎಪಿಎ ಕಾಯ್ದೆಯ ಸೆಕ್ಷನ್ 38 ಮತ್ತು 39ರ ಅಡಿಯಲ್ಲಿ ಬರುವುದಿಲ್ಲ. ಐಸಿಸ್ ಧ್ವಜಗಳು ಮತ್ತು ಲಾಡೆನ್ ಭಾಷಣಗಳ ಭಾಗಗಳು ಅಮ್ಮಾರ್ ಅವರ ಮೊಬೈಲ್‌ನಲ್ಲಿ ಕಂಡು ಬಂದಿದ್ದರೂ, ಅಂತಹ ವಿಷಯಗಳು ಆನ್‌ಲೈನ್‌ನಲ್ಲಿ ಸುಲಭವಾಗಿ ಲಭ್ಯವಿರುವುದರಿಂದ ಇದು ಅವರನ್ನು ಐಸಿಸ್ ಸದಸ್ಯರನ್ನಾಗಿ ಮಾಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವ್ಯಕ್ತಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಅಮ್ಮಾರ್ ಬಂಧನದ ನಂತರ ಜನವರಿ 4 ರಂದು ದಿವಂಗತ ಶಾಸಕ ಇದಿನಬ್ಬ ಅವರ ಸೊಸೆ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಅವರನ್ನು ಎನ್‌ಐಎ ಬಂಧಿಸಿತ್ತು. ಇದಿನಬ್ಬ ಅವರ ಮಗ ಅನಸ್ ಅಬ್ದುಲ್ ಅವರನ್ನು ವಿವಾಹವಾದ ನಂತರ ಇಸ್ಲಾಂಗೆ ಮತಾಂತರಗೊಂಡ ದೀಪ್ತಿ ಮಾರ್ಲಾ, ಅಮ್ಮಾರ್ ನಿರ್ದೇಶನದ ಮೇರೆಗೆ ಐಸಿಸ್‌ಗಾಗಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಎನ್‌ಐಎ ಮಾರ್ಚ್ 5,2021ರಂದು ದೆಹಲಿಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿದೆ. ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಅಮ್ಮಾರ್ ಅಬ್ದುಲ್ ರೆಹಮಾನ್ ಅವರಿಗೆ ಜಾಮೀನು ದೊರೆತರೆ, ದೀಪ್ತಿ ಮಾರ್ಲಾ ಇನ್ನೂ ಎನ್‌ಐಎ ಕಸ್ಟಡಿಯಲ್ಲೇ ಇದ್ದಾರೆ.

ಇದನ್ನೂ ಓದಿ : ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...