Homeಕರ್ನಾಟಕ'ಉಗ್ರ' ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

‘ಉಗ್ರ’ ಎನ್ನಲು ಪೂರಕ ಸಾಕ್ಷ್ಯಗಳಿಲ್ಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದೆಹಲಿ ಹೈಕೋರ್ಟ್ ಜಾಮೀನು

- Advertisement -
- Advertisement -

ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಕಳೆದ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದಿಂದ ಬಂಧಿಸಲ್ಪಟ್ಟಿದ್ದ ಉಳ್ಳಾಲದ ಮಾಜಿ ಶಾಸಕ ದಿವಂಗತ ಇದಿನಬ್ಬ ಅವರ ಮೊಮ್ಮಗ ಅಮ್ಮಾರ್ ಅಬ್ದುಲ್ ರೆಹಮಾನ್‌ಗೆ ದೆಹಲಿ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಒಬ್ಬರು ವ್ಯಕ್ತಿಯ ಮೊಬೈಲ್‌ನಲ್ಲಿ ಐಸಿಸ್ ಧ್ವಜ ಮತ್ತು ಕರಪತ್ರಗಳು ಇದ್ದ ಮಾತ್ರಕ್ಕೆ ಅವರನ್ನು ಭಯೋತ್ಪಾದಕ ಎನ್ನಲಾಗದು ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿಯಾಗಿದೆ.

ಆಗಸ್ಟ್ 21,2021 ರಂದು ಯುಎಪಿಎ ಕಾಯ್ದೆಯಡಿಯಲ್ಲಿ ಎನ್‌ಐಎ ಅಮ್ಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮನೆಯಿಂದ ಬಂಧಿಸಿತ್ತು. ತನ್ನ ಬಂಧನ ಪ್ರಶ್ನಿಸಿ ವಿಚಾರಣಾಧೀನ ಕೋರ್ಟ್‌ನಲ್ಲಿ ಅಮ್ಮಾರ್ ಅಬ್ದುಲ್ ರೆಹಮಾನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಜಾಮೀನು ನಿರಾಕರಿಸಿದ ಹಿನ್ನೆಲೆ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆಯ ನಂತರ ಹೈಕೋರ್ಟ್ ಜಾಮೀನು ನೀಡಿದೆ.

“ಕೇವಲ ಭಯೋತ್ಪಾದಕ ಸಂಘಟನೆಯತ್ತ ಆಕರ್ಷಣೆ ಭಯೋತ್ಪಾದನೆಯಾಗುವುದಿಲ್ಲ. ಐಸಿಸ್ ಪರ ಭಾಷಣಗಳನ್ನು ಕೇಳುವುದು ಯುಎಪಿಎ ಕಾಯ್ದೆಯ ಸೆಕ್ಷನ್ 38 ಮತ್ತು 39ರ ಅಡಿಯಲ್ಲಿ ಬರುವುದಿಲ್ಲ. ಐಸಿಸ್ ಧ್ವಜಗಳು ಮತ್ತು ಲಾಡೆನ್ ಭಾಷಣಗಳ ಭಾಗಗಳು ಅಮ್ಮಾರ್ ಅವರ ಮೊಬೈಲ್‌ನಲ್ಲಿ ಕಂಡು ಬಂದಿದ್ದರೂ, ಅಂತಹ ವಿಷಯಗಳು ಆನ್‌ಲೈನ್‌ನಲ್ಲಿ ಸುಲಭವಾಗಿ ಲಭ್ಯವಿರುವುದರಿಂದ ಇದು ಅವರನ್ನು ಐಸಿಸ್ ಸದಸ್ಯರನ್ನಾಗಿ ಮಾಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವ್ಯಕ್ತಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಅಮ್ಮಾರ್ ಬಂಧನದ ನಂತರ ಜನವರಿ 4 ರಂದು ದಿವಂಗತ ಶಾಸಕ ಇದಿನಬ್ಬ ಅವರ ಸೊಸೆ ದೀಪ್ತಿ ಮಾರ್ಲಾ ಅಲಿಯಾಸ್ ಮರಿಯಂ ಅವರನ್ನು ಎನ್‌ಐಎ ಬಂಧಿಸಿತ್ತು. ಇದಿನಬ್ಬ ಅವರ ಮಗ ಅನಸ್ ಅಬ್ದುಲ್ ಅವರನ್ನು ವಿವಾಹವಾದ ನಂತರ ಇಸ್ಲಾಂಗೆ ಮತಾಂತರಗೊಂಡ ದೀಪ್ತಿ ಮಾರ್ಲಾ, ಅಮ್ಮಾರ್ ನಿರ್ದೇಶನದ ಮೇರೆಗೆ ಐಸಿಸ್‌ಗಾಗಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಎನ್‌ಐಎ ಮಾರ್ಚ್ 5,2021ರಂದು ದೆಹಲಿಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿದೆ. ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಅಮ್ಮಾರ್ ಅಬ್ದುಲ್ ರೆಹಮಾನ್ ಅವರಿಗೆ ಜಾಮೀನು ದೊರೆತರೆ, ದೀಪ್ತಿ ಮಾರ್ಲಾ ಇನ್ನೂ ಎನ್‌ಐಎ ಕಸ್ಟಡಿಯಲ್ಲೇ ಇದ್ದಾರೆ.

ಇದನ್ನೂ ಓದಿ : ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...