Homeಮುಖಪುಟತೆರಿಗೆ ಹೆಚ್ಚಳದ ಕುರಿತ ಪ್ರಶ್ನೆಗೆ ಉತ್ತರಿಸದೆ ತಮಾಷೆಯಾಗಿ ನಕ್ಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ತೆರಿಗೆ ಹೆಚ್ಚಳದ ಕುರಿತ ಪ್ರಶ್ನೆಗೆ ಉತ್ತರಿಸದೆ ತಮಾಷೆಯಾಗಿ ನಕ್ಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

- Advertisement -
- Advertisement -

ತೆರಿಗೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸ್ಟಾಕ್ ಬ್ರೋಕರ್ ಒಬ್ಬರು ಕೇಳಿದ ಪ್ರಶ್ನೆಗೆ ಸೂಕ್ತವಾದ ಉತ್ತರ ನೀಡದೆ ನಗಾಡುವ ಮೂಲಕ ತಮಾಷೆಯಾಗಿ ಪರಿಗಣಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಪ್ರತಿಪಕ್ಷ ನಾಯಕರು ಮತ್ತು ಸಾರ್ವಜನಿಕರು ಕಿಡಿಕಾರಿದ್ದಾರೆ.

ಮಂಗಳವಾರ ನಡೆದ ಬಿಎಸ್‌ಇಯ ‘ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಸ್ಟಾಕ್‌ ಮಾರ್ಕೆಟ್‌ ಬ್ರೋಕರ್‌ಗಳ ಮೇಲೆ ಹಾಗೂ ರಿಯಲ್‌ ಎಸ್ಟೇಟ್‌ ವ್ಯವಹಾರಗಳ ಮೇಲೆ ಭಾರತ ಸರ್ಕಾರ ವಿಧಿಸುತ್ತಿರುವ ಹಲವು ತೆರಿಗೆಗಳ ಬಗ್ಗೆ ಮುಂಬೈ ಸ್ಟಾಕ್‌ ಎಕ್ಸ್‌ಚೇಂಜ್‌ ಬ್ರೋಕರ್‌ ಪ್ರಶ್ನಿಸಿದ್ದರು. “ನಾನು ಎಲ್ಲಾ ಹೂಡಿಕೆ ಮಾಡುತ್ತೇನೆ, ಎಲ್ಲಾ ಸಂಕಷ್ಟಗಳನ್ನು ಎದುರಿಸುತ್ತೇನೆ. ಆದರೆ, ನನ್ನ ಸಂಪೂರ್ಣ ಲಾಭವನ್ನು ಭಾರತ ಸರ್ಕಾರ ಪಡೆಯುತ್ತಿದ್ದೆ. ಇಷ್ಟೊಂದು ತೆರಿಗೆಗಳೊಂದಿಗೆ ಬ್ರೋಕರ್‌ ಒಬ್ಬರು ಹೇಗೆ ಕಾರ್ಯಾಚರಿಸಬಹುದು? ಇಲ್ಲಿ ‘ಸರ್ಕಾರ ನನ್ನ ಸ್ಲೀಪಿಂಗ್‌ ಪಾರ್ಟ್‌ನರ್‌ ಮತ್ತು ನಾನು ಯಾವುದೇ ಆದಾಯವಿಲ್ಲದ ವರ್ಕಿಂಗ್‌ ಪಾರ್ಟ್‌ನರ್‌’ ರೀತಿ ಆಗಿದ್ದೇನೆ” ಎಂದಿದ್ದರು.

ನಂತರ ಎರಡನೇ ಪ್ರಶ್ನೆಯನ್ನು ಮುಂದುವರಿಸಿದ ಅವರು, “ಇಂದು, ಯಾರಾದರೂ ಮುಂಬೈನಲ್ಲಿ ಮನೆ ಖರೀದಿಸಲು ಬಯಸಿದರೆ ಅದು ದುಃಸ್ವಪ್ನವಾಗಿದೆ. ಏಕೆಂದರೆ ನನ್ನ ಬಳಿ ಬಿಳಿ ಹಣವಿದೆ ಎಂದು ನಾನು ತೆರಿಗೆ ಪಾವತಿಸುತ್ತಿದ್ದೇನೆ. ಈಗ ನಾವು ಎಲ್ಲವನ್ನೂ ಚೆಕ್ ಮೂಲಕ ಪಾವತಿಸಬೇಕಾಗಿದೆ. ಭಾರತ ಸರ್ಕಾರಕ್ಕೆ ಎಲ್ಲಾ ತೆರಿಗೆಗಳನ್ನು ಪಾವತಿಸಿದ ನಂತರ ಉಳಿದ್ದದ್ದು ನನ್ನ ಬ್ಯಾಂಕ್ ಬ್ಯಾಲೆನ್ಸ್ ಆಗಿದೆ. ಮನೆಯನ್ನು ಖರೀದಿಸುವಾಗ ಭಾರತ ಸರ್ಕಾರಕ್ಕೆ ಎಲ್ಲಾ ತೆರಿಗೆಗಳನ್ನು ಪಾವತಿಸಿದ ನಂತರವೂ, ನಾನು ಸ್ಟ್ಯಾಂಪ್ ಡ್ಯೂಟಿ, ಜಿಎಸ್‌ಟಿ ಪಾವತಿಸಬೇಕು. ಮನೆ ಖರೀದಿಸುವಾಗ ಸುಮಾರು 11 ಶೇಖಡಾ ನನ್ನ ಜೇಬಿನಿಂದ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ಸಣ್ಣ ಸಂಪನ್ಮೂಲ ಹೊಂದಿರುವ ವ್ಯಕ್ತಿಗೆ ಮನೆ ಖರೀದಿಸಲು ಹೇಗೆ ಸಹಾಯ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದರು.

ವಿತ್ತ ಸಚಿವರು ಆರಂಭದಲ್ಲಿ “ಈ ಪ್ರಶ್ನೆಗೆ ನನ್ನ ಬಳಿ ಉತ್ತರವಿಲ್ಲ” ಎಂದು ಹೇಳಿ ಜಾರಿಕೊಂಡಿದ್ದರು. ಬಳಿಕ “ನಾನು ಸ್ಲೀಪಿಂಗ್ ಪಾರ್ನರ್ ಆದರೆ ಇಲ್ಲಿ ಕುಳಿತು ಉತ್ತರಿಸಲು ಸಾಧ್ಯವಿಲ್ಲ” ಎಂದು ತಮಾಷೆಯಾಗಿ ನಕ್ಕಿದ್ದಾರೆ. ಈ ಮೂಲಕ ಗಂಭೀರ ಪ್ರಶ್ನೆಯೊಂದಕ್ಕೆ ಉತ್ತರಿಸಬೇಕಿದ್ದ ವಿತ್ತ ಸಚಿವರು ವರ್ತಿಸಿದ ರೀತಿಗೆ ಭಾರೀ ಟೀಕೆ ವ್ಯಕ್ತವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ “ಸಾರ್ವಜನಿಕರಿಗೆ ತೆರಿಗೆಯಿಂದ ತೊಂದರೆಯಾಗಿದೆ. ಮೋದಿ ಸರ್ಕಾರದ ಮಂತ್ರಿಗಳು ನಗುತ್ತಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ : ಕಾಂಗ್ರೆಸ್-ಎಸ್‌ಪಿ ಅಧಿಕಾರಕ್ಕೆ ಬಂದರೆ ರಾಮ್ ಲಲ್ಲಾನನ್ನು ಟೆಂಟ್‌ನಲ್ಲಿ ಹಾಕುತ್ತಾರೆ: ಹಳೆ ಹೇಳಿಕೆ ಪುನರುಚ್ಛರಿಸಿದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...