Homeಮುಖಪುಟಯೆಚೂರಿ, ದೇವರಾಜನ್ ಭಾಷಣದ 'ಸರ್ವಾಧಿಕಾರಿ-ಮುಸ್ಲಿಂ' ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

ಯೆಚೂರಿ, ದೇವರಾಜನ್ ಭಾಷಣದ ‘ಸರ್ವಾಧಿಕಾರಿ-ಮುಸ್ಲಿಂ’ ಪದ ಸೆನ್ಸಾರ್ ಮಾಡಿದ ರೇಡಿಯೋ, ದೂರದರ್ಶನ

- Advertisement -
- Advertisement -

ಆಲ್ ಇಂಡಿಯಾ ರೇಡಿಯೋ (ಎಐಆರ್) ಮತ್ತು ದೂರದರ್ಶನ (ಡಿಡಿ) ವಿರೋಧ ಪಕ್ಷದ ನಾಯಕರ ಭಾಷಣಗಳನ್ನು ಪ್ರಸಾರಕ್ಕೂ ಮುನ್ನ ಸೆನ್ಸಾರ್ ಮಾಡಿವೆ ಎಂದು ವರದಿಯಾಗಿದೆ.

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ತಮ್ಮ ಭಾಷಣದಲ್ಲಿ ಬಳಸಿದ್ದ “ಕೋಮುವಾದ, ಸರ್ವಾಧಿಕಾರಿ ಆಡಳಿತ”, “ಕಠಿಣ ಕಾನೂನುಗಳು” ಎಂಬ ಪದಗುಚ್ಛಗಳನ್ನು ಮತ್ತು ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ (ಎಐಎಫ್‌ಬಿ) ನಾಯಕ ಜಿ ದೇವರಾಜನ್ ಅವರು ಬಳಸಿದ್ದ “ಮುಸ್ಲಿಮರು” ಎಂಬ ಪದವನ್ನು ಸೆನ್ಸಾರ್ ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಶುಕ್ರವಾರ ವರದಿ ಮಾಡಿದೆ.

ಚುನಾವಣಾ ಚಿಹ್ನೆಗಳ (ಮೀಸಲು ಮತ್ತು ಹಂಚಿಕೆ) ನಿಬಂಧನೆಗಳ ಆದೇಶ 1968ರಡಿ 6 ರಾಷ್ಟ್ರೀಯ ಪಕ್ಷಗಳು ಹಾಗೂ 59 ರಾಜ್ಯ ಪಕ್ಷಗಳು ಚುನಾವಣಾ ಪ್ರಚಾರದ ಸುದ್ದಿ ಪ್ರಸಾರದ ಅರ್ಹತೆ ಹೊಂದಿವೆ. ಈ ಪಕ್ಷಗಳ ರಾಷ್ಟ್ರ ಹಾಗೂ ರಾಜ್ಯ ಪ್ರತಿನಿಧಿಗಳ ಚುನಾವಣಾ ಪ್ರಚಾರದ ಭಾಷಣವನ್ನು ಪ್ರಸಾರ ಮಾಡಲು ಅನುಮತಿಸಲಾಗಿರುವುದನ್ನು ಏಪ್ರಿಲ್‌ನಲ್ಲಿ ಹೊರಡಿಸಿರುವ ಚುನಾವಣಾ ಆಯೋಗದ ಆದೇಶದಲ್ಲಿ ತಿಳಿಸಲಾಗಿತ್ತು.

ಪ್ರಸಾರ ಭಾರತಿಯ ಅಧಿಕಾರಿಯೊಬ್ಬರು ಸೆನ್ಸಾರ್ ಆದೇಶವನ್ನು ಸಮರ್ಥಿಸಿಕೊಂಡಿದ್ದು, ಎಐಆರ್ ಮತ್ತು ಡಿಡಿ ಎರಡೂ ಸಂಸ್ಥೆಗಳು ಚುನಾವಣಾ ಆಯೋಗ ನಿಗದಿಪಡಿಸಿದ ‘ನಡವಳಿಕೆ ನಿಯಮಗಳನ್ನು’ ಅನುಸರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಇದು ರಾಜಕೀಯ ನಾಯಕರ ಭಾಷಣದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ ಎಂದು ಅವರು ಹೇಳಿದ್ದು, ಮುಖ್ಯಮಂತ್ರಿಗಳ ಪಠ್ಯಗಳನ್ನು ಸಹ ಸರಿಪಡಿಸಿದ ನಿದರ್ಶನಗಳಿವೆ ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸೀತಾರಾಮ್ ಯೆಚೂರಿ, “ನನ್ನ ಭಾಷಣದ ಹಿಂದಿ ಆವೃತ್ತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಆದರೆ, ಇಂಗ್ಲಿಷ್ ತರ್ಜುಮೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದಿದ್ದಾರೆ.

ಜಿ ದೇವರಾಜನ್‌ ಮಾತನಾಡಿ, “ನಾನು ನನ್ನ ಭಾಷಣದಲ್ಲಿ ಸಿಎಎಯಿಂದ ಮುಸ್ಲಿಮರಿಗೆ ಆಗುತ್ತಿರುವ ತಾರತಮ್ಯಗಳ ಬಗ್ಗೆ ಉಲ್ಲೇಖಿಸಿದ್ದೆ. ಅವರು ‘ಮುಸ್ಲಿಂ’ ಪದವನ್ನು ತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ನಾನು ಸಿಎಎ ಕಾನೂನಿನಲ್ಲಿ ಮುಸ್ಲಿಮರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಸರ್ಕಾರದ ಮಾಧ್ಯಮಗಳಿಗೆ ಮನವರಿಕೆ ಮಾಡಿದರೂ, ಅವರು ಆ ಪದವನ್ನು ಉಳಿಸಿಕೊಳ್ಳದೆ ಅಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ದೂರದರ್ಶನದ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಸೀತಾರಾಮ್ ಯೆಚೂರಿ ಅವರು ಸೆನ್ಸಾರ್ ಅನ್ನು ಪ್ರತಿಭಟಿಸಿದ್ದಾರೆ. ಭಾಷಣದಿಂದ ನಿರ್ದಿಷ್ಟ ಪದಗಳನ್ನು ಅಳಿಸುವುದು ಭಿನ್ನಾಭಿಪ್ರಾಯದ ಹಕ್ಕಿನ ನಿರಾಕರಣೆಯಾಗಿದೆ ಎಂದು ಯೆಚೂರಿ ಹೇಳಿದ್ದಾರೆ. ಎಐಅಆರ್‌ಗೂ ಅವರು ಪತ್ರ ಬರೆದಿದ್ದಾರೆ ಎಂದು ವರದಿ ಹೇಳಿದೆ.

ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭಾಷಣಗಳ ಉಚಿತ ಪ್ರಸಾರ ಯೋಜನೆಯನ್ನು ಜನವರಿ 1998ರಲ್ಲಿ ಪರಿಚಯಿಸಲಾಗಿದೆ. ಈ ಮೂಲಕ ಚುನಾವಣೆಯ ಸಂದರ್ಭದಲ್ಲಿ ಮಾನ್ಯತೆ ಪಡೆದ ಎಲ್ಲಾ ರಾಜಕೀಯ ಪಕ್ಷಗಳು ಸರ್ಕಾರಿ ಸ್ವಾಮ್ಯದ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಸಮಾನವಾಗಿ ಬಳಸುವ ಅವಕಾಶ ನೀಡಲಾಗಿದೆ.

ಇದನ್ನೂ ಓದಿ : ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...