Homeಅಂತರಾಷ್ಟ್ರೀಯJNU ವಿದ್ಯಾರ್ಥಿ, ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಗೆ ನೊಬೆಲ್ ಪ್ರಶಸ್ತಿ

JNU ವಿದ್ಯಾರ್ಥಿ, ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಗೆ ನೊಬೆಲ್ ಪ್ರಶಸ್ತಿ

- Advertisement -
- Advertisement -

2019ನೇ ಸಾಲಿನ ಅರ್ಥಶಾಸ್ತ್ರಜ್ಞ ಕ್ಷೇತ್ರದಲ್ಲಿನ ಸಾಧನೆಗೆ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಸೇರಿ ಮೂವರು ಅರ್ಥಶಾಸ್ತ್ರಜ್ಞರು ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಫೆಂಚ್-ಅಮೆರಿಕನ್ ಅರ್ಥಶಾಸ್ತ್ರಜ್ಞ ಎಸ್ತಾರ್ ಡೂಪ್ಲೋ ಮತ್ತು Iಅಮೆರಿಕದ ಮೈಕೆಲ್ ಕ್ರೆಮರ್ ಅವರಿಗೆ ಪ್ರಶಸ್ತಿ ದೊರೆತಿದೆ. ಜಾಗತಿಕ ಬಡತನ ನಿವಾರಣೆಗೆ ಕೈಗೊಂಡ ಪ್ರಾಯೋಗಿಕ ಅಧ್ಯಯನ ಪರಿಗಣಿಸಿ, ಮೂವರಿಗೆ ಸ್ವಿಡೀಶ್ ಅಕಾಡೆಮಿ ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಇನ್ನು ನೊಬೆಲ್ ಪ್ರಶಸ್ತಿಯ ಮೊತ್ತವನ್ನು ಮೂವರು ಹಂಚಿಕೊಳ್ಳಲಿದ್ದಾರೆ.

58 ವರ್ಷದ ಅಭಿಜಿತ್ ಬ್ಯಾನರ್ಜಿ ಕೋಲ್ಕತ್ತಾ ಮೂಲದವರು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಪಡೆದಿದ್ದರು. ನಂತರ ಅಮೆರಿಕದ ಎಂಐಟಿಯಲ್ಲಿ ಅರ್ಥಶಾಸ್ತ್ರಜ್ಞ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೊಬ್ಬ ಪ್ರಶಸ್ತಿ ಪುರಸ್ಕೃತ 57 ವರ್ಷದ ಎಸ್ತಾರ್ ಡೂಪ್ಲೋ ಎಂಐಟಿಯಲ್ಲಿ ಪಿ.ಎಚ್.ಡಿ ಪಡೆದಿದ್ದು, ಅರ್ಥಶಾಸ್ತ್ರ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನು 55 ವರ್ಷದ ಮೈಕೆಲ್ ಕ್ರೆಮರ್ ಕೂಡ ಎಂಐಟಿಯಲ್ಲಿ ಪಿ.ಎಚ್.ಡಿ ಪಡೆದಿದ್ದು, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನು ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿಗೆ ಸಂದಿರುವ ನೊಬೆಲ್ ಪ್ರಶಸ್ತಿಗೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಯುವ ನೇತಾರ ಜಿಗ್ನೇಶ್ ಮೇವಾನಿ, ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿ, ಅಭಿಜಿತ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.

ಇನ್ನು ರಾಜಾರಾಂ ತಲ್ಲೂರ್ ಅವರು, ‘ಇವರಿಗ್ಯಾರು ನೊಬೆಲ್ ಕೊಟ್ರು ಮಾರಾಯ್ರೆ’..?!!!
ಇವರು ಜೆ.ಎನ್.ಯು ಪ್ರಾಡಕ್ಟ್. ಜತೆಗೆ ಹಾರ್ವರ್ಡೂ ಹೌದು;ಹಾರ್ಡ್ ವರ್ಕೂ ಹೌದು. ಮೇಲಾಗಿ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ NYAY ಯೋಜನೆ ಇವರದೇ ಸಲಹೆಯಂತೆ. ಡಿಮಾನಿಟೈಸೇಷನ್ ಲಾಜಿಕ್ಕೇ ಅವರಿಗೆ ಇನ್ನೂ ಅರ್ಥ ಆಗಿಲ್ಲವಂತೆ. ಎಂಥದು ಮಾರಾಯ್ರೆ, ಭಕ್ತರಿಗೆ ಅಷ್ಟು ಚೆನ್ನಾಗಿ ಅರ್ಥ ಆದದ್ದು, ಅರೆದು ಕುಡಿದದ್ದು – ತಜ್ಞರಾಗಿ ಇವರಿಗೆ ಅರ್ಥ ಆಗ್ಲಿಲ್ಲ ಅಂದ್ರೆ ಎಂಥಾ ತಜ್ಞರಿವರು..! ಎಂದು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಇನ್ನು ಬಡವರ ಪರವಾಗಿ ಇವರ ಚಿಂತನೆಗಳಿರುವ ಇವರು ನರೇಗಾ ಯೋಜನೆ ಜಾರಿಯಲ್ಲಿಯೂ ಪ್ರಧಾನ ಪಾತ್ರವಹಿಸಿದ್ದರು. ಹಾಗಾಗಿ ಇವರನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ “ಅರ್ಬನ್‌ ನಕ್ಸಲ್‌” ಎಂದು ಹಲವರು ಕರೆದುದ್ದಲ್ಲದೇ ಅವರಿಗೆ ನೊಬೆಲ್ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳಿಂದ ‘ನಗರದ ನಕ್ಸಲ್’ ಎಂದು ಬಿರುದಾಂಕಿತರಾಗಿದ್ದ, JNU ವಿದ್ಯಾರ್ಥಿಯಾಗಿದ್ದ ಅಭಿಜಿತ್ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ದೊರಕಿರುವುದು ಭಾರತದ ಜಾತ್ಯತೀತವಾದಿಗಳಿಗೆ ಹೆಮ್ಮೆಯ ಸಂಗತಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...