Homeಮುಖಪುಟಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

- Advertisement -
- Advertisement -

ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ? ಹೌದು ಈಗೊಂದು ಆರೋಪವನ್ನು ಸ್ಪರ್ಧೆಯ ಆಕಾಂಕ್ಷಿಗಳಾಗಿದ್ದ ಹಲವು ಅಭ್ಯರ್ಥಿಗಳು ಮಾಡಿದ್ದಾರೆ. ವಾರಾಣಾಸಿಯಲ್ಲಿ ಚುನಾವಣಾಧಿಕಾರಿಗಳು ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದ ಅಭ್ಯರ್ಥಿಗಳು ಇತರ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ವಾರಣಾಸಿಯಲ್ಲಿ ಜಿಲ್ಲಾಧಿಕಾರಿ ಎಸ್ ರಾಜಲಿಂಗಂ ಚುನಾವಣಾಧಿಕಾರಿಯಾಗಿದ್ದರು. ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿದ್ದ ಸುನೀಲ್ ಕುಮಾರ್ ಬಿಂದ್(37) ವಾರಣಾಸಿಯ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಎಸ್ ರಾಜಲಿಂಗಂ ಅವರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ 6 ದಿನಗಳ ಕಾಲ ಅಳೆದಾಡಿರುವುದಾಗಿ ಹೇಳಿದ್ದಾರೆ. ಅದರೂ ಕೊನೆಗೆ ಸಲ್ಲಿಸಿದ ನಾಮಪತ್ರವನ್ನು ಚುನಾವಣಾಧಿಕಾರಿ ರಾಜಲಿಂಗಂ, ತಿರಸ್ಕರಿಸಿದ್ದಾರೆ. ಸುನೀಲ್ ಕುಮಾರ್ ಬಿಂದ್ ಮಾತ್ರವಲ್ಲದೆ ಮೋದಿ ವಿರುದ್ಧ ಸ್ಪರ್ಧೆಗೆ ನಾಮಪತ್ರ ಸಲ್ಲಿಸಿದ್ದ 41 ಜನರಲ್ಲಿ 33 ಮಂದಿ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ. ವಾರಣಾಸಿಯಲ್ಲಿ ದಶಕಗಳಲ್ಲಿ ಅತ್ಯಂತ ಕಡಿಮೆ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಮೋದಿ ಪ್ರತಿನಿಧಿಸುವ ಈ ಕ್ಷೇತ್ರದಲ್ಲಿ 2019ರಲ್ಲಿ 26 ಹಾಗೂ 2014ರಲ್ಲಿ 42 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಆದರೆ ಈ ಬಾರಿ ಬರೀ 7 ಅಭ್ಯರ್ಥಿಗಳು ಮಾತ್ರ ಸ್ಪರ್ಧೆಯಲ್ಲಿದ್ದಾರೆ.

ಆರಂಭದಲ್ಲಿ ರಾಜಲಿಂಗಂ ಮತ್ತು ಅವರ ಸಹಾಯಕ ಚುನಾವಣಾಧಿಕಾರಿ ವೇಗದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ನಂತರ ಅವರು ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಸೇರಿದ ಕನಿಷ್ಠ 14 ಸ್ವತಂತ್ರ ಅಭ್ಯರ್ಥಿಗಳು ಸಲ್ಲಿಸಿದ ಅಫಿಡವಿಟ್‌ಗಳನ್ನು ಪರಿಶೀಲಿಸಲು ಹಲವು ಗಂಟೆಗಳನ್ನು ತೆಗೆದುಕೊಂಡಿದ್ದಾರೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮೇ.14ರಂದು ಚುನಾವಣಾಧಿಕಾರಿ 27 ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಆದರೆ ಸಂಜೆಯ ಹೊತ್ತಿಗೆ, ಅವರ ಕಚೇರಿಯು ಅರ್ಜಿದಾರರಿಗೆ ಅಫಿಡವಿಟ್‌ಗಳಲ್ಲಿ ಸಮಸ್ಯೆಗಳಿವೆ ಎಂದು ತಿಳಿಸಿದೆ. ಪ್ರಮಾಣವಚನ ಸ್ವೀಕರಿಸಲಿಲ್ಲ ಎಂಬ ಕಾರಣಗಳನ್ನು ಈ ವೇಳೆ ನೀಡಲಾಗಿತ್ತು. ರಾಮಲಿಂಗಂ ಅಥವಾ ಅವರ ಸಹಾಯಕ ಚುನಾವಣಾಧಿಕಾರಿ ಅಭ್ಯರ್ಥಿಗಳಿಗೆ ಪ್ರಮಾಣ ವಚನ ಬೋಧಿಸಬೇಕಿತ್ತು. ಚುನಾವಣಾ ಆಯೋಗದ  ಕೈಪಿಡಿಯಲ್ಲಿ ಅಭ್ಯರ್ಥಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ ತಕ್ಷಣ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಸಲಹೆ ನೀಡುವಂತೆ ಸೂಚಿಸಲಾಗಿದೆ. ಭಾರತೀಯ ಚುನಾವಣಾ ಆಯೋಗವು ನಿಗದಿಪಡಿಸಿದ ಮಾರ್ಗಸೂಚಿಗಳ ಪ್ರಕಾರ ಪ್ರಮಾಣವಚನ ಸ್ವೀಕರಿಸಲು ಚುನಾವಣಾಧಿಕಾರಿ ಸಲಹೆ ನೀಡಲಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಅರ್ಜಿದಾರರಲ್ಲಿ ಒಬ್ಬರಾದ ಹರ್‌ಪ್ರೀತ್ ಸಿಂಗ್ ಅವರು ಪ್ರಮಾಣ ವಚನ ಬೋಧಿಸುವಂತೆ ಚುನಾವಣಾಧಿಕಾರಿಗಳನ್ನು ಕೇಳಿಕೊಂಡಿದ್ದರು. ನಾನು ಚುನಾವಣಾ ಅಧಿಕಾರಿಗೆ ಮೂರು ಬಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗೆ ಮೂರು ಬಾರಿ ಈ ಬಗ್ಗೆ ವಿನಂತಿಯನ್ನು ಮಾಡಿದ್ದೇನೆ. ಆದರೆ ಅವರು ನನ್ನ ಮನವಿಯನ್ನು ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಮೇ 15 ರಂದು ಅರ್ಜಿಗಳ ಪರಿಶೀಲನೆಯ ಸಂದರ್ಭದಲ್ಲಿ, ವಾರಣಾಸಿಯ 33 ಅರ್ಜಿದಾರರ ಅಫಿಡವಿಟ್‌ಗಳನ್ನು ತಿರಸ್ಕರಿಸಲು ಅಧಿಕಾರಿಗಳು ಈ ಕಾರಣಗಳನ್ನು ಉಲ್ಲೇಖಿಸಿದ್ದಾರೆ.

ಮೇ.7ರಿಂದ ಮೇ.10ರ ನಡುವೆ 8 ನಾಮಪತ್ರವನ್ನು ಸಲ್ಲಿಕೆ ಮಾಡಲಾಗಿದೆ. ವಾರಣಾಸಿಯಲ್ಲಿ ಸ್ಪರ್ಧಿಸಲು ಬಯಸಿದ್ದ ವಾರಣಾಸಿಯ ವಕೀಲ ವಿನಯ್ ತ್ರಿಪಾಠಿ ಅವರು ಈ ಬಗ್ಗೆ ಮಾತನಾಡುತ್ತಾ, ನಾನು ಚುನಾವಣಾಧಿಕಾರಿ ಕಚೇರಿಗೆ ನಡಿಗೆ ಮೂಲಕ ತೆರಳಿದೆ. ನಾಮಪತ್ರವನ್ನು ಭರ್ತಿ ಮಾಡಲು ಖಜಾನೆ ಚಲನ್, ಸೇರಿ ಅರ್ಜಿ ನಮೂನೆ ಪಡೆಯಲು ಬಯಸಿದ್ದೆ. ಆದರೆ ನನಗೆ ಈ ಪ್ರಕ್ರಿಯೆ ಹೇಗಿತ್ತೆಂದರೆ  ಪಾಕಿಸ್ತಾನಕ್ಕೆ ಹೋಗಿ ಕಮಾಂಡರ್-ಇನ್-ಚೀಫ್ ಅವರನ್ನು ಭೇಟಿ ಮಾಡಿ ಬಂದಷ್ಟು ತ್ರಾಸದಾಯಕವಾಗಿತ್ತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಉದ್ದನೆಯ ಸರತಿ ಸಾಲು ಇತ್ತು. ಅಲ್ಲಿದ್ದ ಬಹುತೇಕರು ಬಿಜೆಪಿಯ ಸ್ಥಳೀಯ ಕಾರ್ಯಕರ್ತರೇ ಆಗಿದ್ದರು. ಅವರು ಇಡೀ ಪ್ರಕ್ರಿಯೆಯನ್ನು ಅಡ್ಡಿಗೊಳಿಸಿದರು ಎಂದು ಹೇಳಿದ್ದಾರೆ.

‘ಮಾನವೀಯ ಭಾರತ್ ಪಕ್ಷ’ದಿಂದ ಸ್ಪರ್ಧೆ ಬಯಸಿದ್ದ ಶಿಕ್ಷಣ ತಜ್ಞ ಹೇಮಂತ್ ಯಾದವ್ ಮಾತನಾಡುತ್ತಾ, ಮೇ 7ರಂದು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಲ ಕಳೆದ ನಂತರ ಖಜಾನೆ ಚಲನ್ ಪಡೆಯುವಲ್ಲಿ ಯಶಸ್ವಿಯಾದೆ. ಆದರೆ ನಾನು ಫಾರ್ಮ್‌ನ್ನು ಕೇಳಿದಾಗ, ಮರುದಿನ ಬರಲು ಅಧಿಕಾರಿಗಳು ನನಗೆ ಹೇಳಿದ್ದಾರೆ. ಖಜಾನೆ ಚಲನ್ ಮತ್ತು ಫಾರ್ಮ್ ಒಟ್ಟಿಗೆ ನೀಡಬೇಕಿದೆ, ಆದರೆ ನನಗೆ ನೀಡಿಲ್ಲ ಎಂದು ಹೇಳಿದ್ದಾರೆ.

ತ್ರಿಪಾಠಿ ಮತ್ತು ಯಾದವ್ ಅವರು ವಾರಣಾಸಿಯಲ್ಲಿ ಸ್ಪರ್ಧಿಸಲು ನೂರಕ್ಕೂ ಹೆಚ್ಚು ಜನರು ಸರದಿಯಲ್ಲಿದ್ದಾರೆ ಎಂದು ಅಂದಾಜಿಸಿದ್ದಾರೆ. ಆದರೆ ಮೇ 7ರಿಂದ ಮೇ 10 ರವರೆಗೆ ನಾಲ್ಕು ದಿನಗಳಲ್ಲಿ ಚುನಾವಣಾಧಿಕಾರಿ ಕೇವಲ ಎಂಟು ಅಫಿಡವಿಟ್‌ಗಳನ್ನು ಮಾತ್ರ ಸ್ವೀಕರಿಸಿದ್ದಾರೆ ಎಂದು ಭಾರತೀಯ ಚುನಾವಣಾ ಆಯೋಗದ ವೆಬ್‌ಸೈಟ್ ತೋರಿಸುತ್ತದೆ. ಈ ವೇಳೆ ಇಷ್ಟೊಂದು ಸರತಿ ಸಾಲಿನಲ್ಲಿ ನಿಂತುಕೊಂಡು ಅರ್ಜಿ ಸಲ್ಲಿಕೆ ಮಾಡಿದವರ ಬಗ್ಗೆ ಸಂಶಯ ಮೂಡಿದೆ.

ಮೇ.13ರಂದು 6 ನಾಮಪತ್ರಗಳ ಸಲ್ಲಿಕೆ ಕಾರ್ಯ ನಡೆದಿದೆ. ಸಂಜಯ್ ಕುಮಾರ್ ತಿವಾರಿ ಅವರು ಮೇ 10ರಂದು ಚುನಾವಣಾಧಿಕಾರಿಗೆ ಅಫಿಡವಿಟ್ ಸಲ್ಲಿಸಿದ್ದು, ಕೆಲವು ತಪ್ಪುಗಳನ್ನು ಸರಿಪಡಿಸಿಕೊಂಡು ಮೇ 13ರಂದು ಮತ್ತೊಮ್ಮೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ನನ್ನನ್ನು ಬ್ಯಾರಿಕೇಡ್‌ನಲ್ಲಿ ನಿಲ್ಲಿಸಲಾಯಿತು ಮತ್ತು ಆರು ಗಂಟೆಗಳ ಕಾಲ ಅಲ್ಲಿ ಕಾಯುವಂತೆ ಮಾಡಲಾಯಿತು ಎಂದು ತಿವಾರಿ ಆರೋಪಿಸಿದ್ದಾರೆ. ವಾರಣಾಸಿಯಿಂದ ಸ್ಪರ್ಧಿಸುವ ಇಂಗಿತವನ್ನು ಪ್ರಕಟಿಸಿದ್ದ ಹಾಸ್ಯನಟ ಶ್ಯಾಮ್ ರಂಗೀಲಾ, ಆ ದಿನ ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಇದೇ ರೀತಿಯ ಆರೋಪವನ್ನು ಮಾಡಿದ್ದಾರೆ.

ಮೇ.13ರಂದು ನಾಮಪತ್ರ ಸಲ್ಲಿಸಿದ ಆರು ಅಭ್ಯರ್ಥಿಗಳಲ್ಲಿ ಕನಿಷ್ಠ ಐವರು ಸ್ವತಂತ್ರ ಅಭ್ಯರ್ಥಿಗಳು ಅಂದರೆ – ವಿಕಾಸ್ ಕುಮಾರ್ ಸಿಂಗ್, ನೀರಜ್ ಸಿಂಗ್, ಸಚಿನ್ ಕುಮಾರ್ ಸೋಂಕರ್, ಅಮಿತ್ ಕುಮಾರ್ ಸಿಂಗ್ ಮತ್ತು ಶಿವಂ ಸಿಂಗ್  ವಾರಣಾಸಿಯಲ್ಲಿ ಬಿಜೆಪಿ ಪದಾಧಿಕಾರಿಗಳು ಎಂಬುವುದನ್ನು ಅವರ ಸಾಮಾಜಿಕ ಮಾಧ್ಯಮ ಚಟುವಟಿಕೆ ತೋರಿಸುತ್ತದೆ ಎನ್ನುವುದನ್ನು ಸ್ಕ್ರಾಲ್‌ ಪತ್ತೆ ಹಚ್ಚಿದೆ.

ನಾಮಪತ್ರ ಸಲ್ಲಿಸಿದ್ದ ಶಿವಂ ಸಿಂಗ್ ಅವರ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಅವರು ವಾರಣಾಸಿಯ ಬಾಗೇಶ್ವರಿ ಮಂಡಲದ ಬಿಜೆಪಿ ಉಪಾಧ್ಯಕ್ಷ ಎಂದು ಹೇಳುತ್ತದೆ. ವಿಕಾಸ್ ಕುಮಾರ್ ಸಿಂಗ್ ರಾಜರ್ಷಿ ಮಂಡಲದ ಬಿಜೆಪಿ ಸದಸ್ಯ, ಸಚಿನ್ ಕುಮಾರ್ ಸೋಂಕರ್ ಅವರು ಸ್ಥಳೀಯ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದಲ್ಲಿ ಪದಾಧಿಕಾರಿಯಾಗಿದ್ದಾರೆ.  ನೀರಜ್ ಸಿಂಗ್ ಅವರು ಕಳೆದ ವರ್ಷದ ಪುರಸಭೆ ಚುನಾವಣೆಯಲ್ಲಿ ನಗರದ ದಿಥೋರಿ ಮಹಲ್ ವಾರ್ಡ್‌ನಲ್ಲಿ ಬಿಜೆಪಿ ಸ್ಪರ್ಧಿಯಾಗಿದ್ದರು. 30 ವರ್ಷದ ಅಮಿತ್ ಕುಮಾರ್ ಸಿಂಗ್ ಅವರು ಸ್ಥಳೀಯ ಭಾರತೀಯ ಜನತಾ ಯುವ ಮೋರ್ಚಾದ ಸದಸ್ಯ ಎಂದು ಮಾಹಿತಿ ಇದೆ. ಇವರು ಸಲ್ಲಿಸಿದ ಅಫಿಡವಿಟ್‌ಗಳು ಬಹುತೇಕ ಅಪೂರ್ಣವಾಗಿವೆ. ಸೋಂಕರ್ ಅವರ ಅಫಿಡವಿಟ್, ಉದಾಹರಣೆಗೆ ಅವರ ವಯಸ್ಸು ಅಥವಾ ಫೋನ್ ಸಂಖ್ಯೆಯನ್ನು ಸಹ ಉಲ್ಲೇಖಿಸಿಲ್ಲ. ಅವರೆಲ್ಲರಿಗೂ ವಕೀಲ ಕಮಲೇಶ್ ಸಿಂಗ್ ನೋಟರೈಸ್ ನೀಡಿದ್ದಾರೆ. ಅವರ ಅಫಿಡವಿಟ್ ಕೂಡ ಕಳಪೆಯಾಗಿ ಭರ್ತಿ ಮಾಡಲಾಗಿದೆ.

ಅಮಿತ್ ಕುಮಾರ್ ಸಿಂಗ್ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವುದನ್ನು ನಿರಾಕರಿಸಿದ್ದಾರೆ. ಆದರೆ ಅವರ ಫೇಸ್‌ಬುಕ್‌ನಲ್ಲಿ ಈ ತಿಂಗಳು ಕನಿಷ್ಠ ಎರಡು ಬಿಜೆಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವುದು ಕಂಡು ಬಂದಿದೆ. ವಿಕಾಸ್ ಮತ್ತು ಸಚಿನ್ ಅವರು ನಮಗೆ ಸ್ಪರ್ಧಿಸುವ ಹಕ್ಕಿದೆ ಎಂದು ಹೇಳಿದ್ದಾರೆ. ಶಿವಂ ಎಂಬವರು ಮಾತನಾಡುತ್ತಾ ಡಿಸಿ ಯಾವಾಗಲು ಬ್ಯುಸಿ ಇರುತ್ತಾರಲ್ಲ,ನಾನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ಭೇಟಿಯಾಗಲು ಬಯಸಿದ್ದರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಜೊತೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಮೇ.14 ಕೊನೆಯ ದಿನಾಂಕವಾಗಿತ್ತು. ಆ ದಿನ ತಮ್ಮ ಪತ್ರಗಳನ್ನು ಸಲ್ಲಿಸಿದ ಮೊದಲ ಇಬ್ಬರು ವ್ಯಕ್ತಿಗಳು ನರೇಂದ್ರ ಮೋದಿ ಮತ್ತು ಬಿಜೆಪಿಯ ಬದಲಿ ಅಭ್ಯರ್ಥಿ ಸುರೇಂದ್ರ ನಾರಾಯಣ್ ಸಿಂಗ್. ಮೋದಿ ನಾಮಪತ್ರ ಸಲ್ಲಿಸುವ ವೇಳೆಗೆ ಮಧ್ಯಾಹ್ನವಾಗಿತ್ತು. ಚುನಾವಣಾ ಮಾರ್ಗಸೂಚಿಯಂತೆ ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಲಿದೆ.

ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ಸಂಬಂಧಿಸಿರುವ ಸ್ವತಂತ್ರ ಅಭ್ಯರ್ಥಿಗಳ ಹೊಸ ದಂಡೇ ಈ ದಿನ ಕೂಡ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕಾಣಿಸಿಕೊಂಡಿದೆ ಎಂದು ಹಲವಾರು ಅರ್ಜಿದಾರರು ತಿಳಿಸಿದ್ದಾರೆ. ಬಿಜೆಪಿ- ಆರೆಸ್ಸೆಸ್‌ಗೆ ಸಂಬಂಧಿಸಿದ ಅಶೋಕ್ ಕುಮಾರ್, ದಿನೇಶ್ ಕುಮಾರ್ ಯಾದವ್, ನೇಹಾ ಜೈಸ್ವಾಲ್, ಅಜಿತ್ ಕುಮಾರ್ ಜೈಸ್ವಾಲ್, ಸಂದೀಪ್ ತ್ರಿಪಾಠಿ, ಅಮಿತ್ ಕುಮಾರ್, ನಿತ್ಯಾನಂದ ಪಾಂಡೆ ಮತ್ತು ವಿಕ್ರಮ್ ಕುಮಾರ್ ವರ್ಮಾ ಇದ್ದರು ಎನ್ನಲಾಗಿದೆ.

ನೇಹಾ ಜೈಸ್ವಾಲ್ ಅವರ ಫೇಸ್‌ಬುಕ್‌ನಲ್ಲಿ ವಾರಣಾಸಿಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯೆ ಎಂದು ವಿವರಿಸುತ್ತದೆ. ಅಜಿತ್ ಕುಮಾರ್ ಜೈಸ್ವಾಲ್ ವಾರಣಾಸಿಯ ಖಜೂರಿ ಪ್ರದೇಶದಲ್ಲಿ ಬಿಜೆಪಿ ವಲಯದ ಮುಖ್ಯಸ್ಥರಾಗಿದ್ದರು ಎಂದು ಸೆಪ್ಟೆಂಬರ್ 2020ರಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಹಂಚಿಕೊಂಡ ಪಕ್ಷದ ಪೋಸ್ಟ್‌ ಪ್ರಕಾರ ತಿಳಿದು ಬರುತ್ತದೆ.

ಅಮಿತ್ ಕುಮಾರ್ ಅವರ ಫೇಸ್‌ಬುಕ್ ಪ್ರೊಫೈಲ್ ಅವರು ಉತ್ತರ ವಾರಣಾಸಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಸಾಂಸ್ಕೃತಿಕ ವಿಭಾಗದ ಸಂಯೋಜಕ ಎಂದು ಹೇಳುತ್ತದೆ. ವಿಕ್ರಮ್ ಕುಮಾರ್ ವರ್ಮಾ ರೊಹನಿಯಾ ಮಂಡಲದ ಬಿಜೆಪಿ ಅಧ್ಯಕ್ಷ ಎಂದು ಹೇಳುತ್ತದೆ. ಸಂದೀಪ್ ತ್ರಿಪಾಠಿ ಅವರು ಬಿಜೆಪಿಯೊಂದಿಗೆ ಸಂಬಂಧ ಹೊಂದಿದವರಾಗಿದ್ದಾರೆ. ಅಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಯಲ್ಲಿದ್ದ ಅಖಿಲ ಭಾರತೀಯ ಪರಿವಾರ ಪಕ್ಷದ ಹರ್‌ಪ್ರೀತ್ ಸಿಂಗ್ ಅವರು  ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಬಿಜೆಪಿಗರು ಹೈಜಾಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ದಿನೇಶ್ ಕುಮಾರ್ ಯಾದವ್ ಮತ್ತು ಅಶೋಕ್ ಕುಮಾರ್ ಸೇರಿ ಕೆಲ ಅಭ್ಯರ್ಥಿಗಳು ಆವರಣದ ಹಿಂಬಾಗಿಲ ಮೂಲಕ ಪ್ರವೇಶಿಸಿದರು. ನೇಹಾ ಜೈಸ್ವಾಲ್ ಮತ್ತು ಅಜಿತ್ ಕುಮಾರ್ ಜೈಸ್ವಾಲ್ ಅವರು ಚುನಾವಣಾಧಿಕಾರಿಗಳ ಕಚೇರಿಯ ಬಾಗಿಲಿನ ಹೊರಗೆ ನಿಂತರು ಮತ್ತು ಇತರರಿಗೆ ಸರತಿ ಸಾಲನ್ನು ಮೀರಿ ಒಳಗೆ ಹೋಗಲು ಬಿಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಅಂದು ಮಧ್ಯಾಹ್ನ ಡಿಸಿ ಕಚೇರಿಯೊಳಗೆ ಹರ್‌ಪ್ರೀತ್‌ ಸಿಂಗ್‌ ಕೋಪಗೊಂಡು  ಮಧ್ಯಪ್ರವೇಶಿಸಿದವರನ್ನು ಸರತಿ ಸಾಲಿನಲ್ಲಿ ಬಂದು ನಾಮಪತ್ರ ಸಲ್ಲಿಕೆಗೆ ಆಗ್ರಹಿಸಿದ್ದಾರೆ. ಮೋದಿ ಮತ್ತು ಅವರ ಬದಲಿ ಅಭ್ಯರ್ಥಿ ಹೊರತುಪಡಿಸಿ, ರಾಜಲಿಂಗಂ ಅವರು ನಾಮಪತ್ರಗಳ ಕೊನೆಯ ದಿನದಂದು 27 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ಪರಿಶೀಲಿಸಿದರು. ಈ ಪ್ರಕ್ರಿಯೆಯು ಚುನಾವಣಾ ಆಯೋಗದ ಗಡುವು ಮಧ್ಯಾಹ್ನ 3 ಗಂಟೆಗೆ ಮೀರಿದೆ. ಇದರಿಂದಾಗಿ ನಾಮಪತ್ರ ಸಲ್ಲಿಕೆಗೆ ನೂಕುನುಗ್ಗಲು ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಅತ್ಯಂತ ನಿರ್ಣಾಯಕ ಲೋಪವೆಂದರೆ ಅಭ್ಯರ್ಥಿಗಳಿಗೆ ಕಡ್ಡಾಯ ಪ್ರಮಾಣವಚನ ಬೋಧಿಸಬೇಕಾಗಿತ್ತು. ಮಧ್ಯಪ್ರದೇಶದ ಜಬಲ್‌ಪುರದಿಂದ ಬಂದಿದ್ದ ಸ್ವತಂತ್ರ ಅಭ್ಯರ್ಥಿ ರಾಮ್‌ ಕುಮಾರ್‌ ಜೈಸ್ವಾಲ್‌ ಮಾತನಾಡಿ, ಚುನಾವಣಾಧಿಕಾರಿ ಯಾರಿಗೂ ಪ್ರಮಾಣ ವಚನ ಬೋಧಿಸಿಲ್ಲ. ಇದು ಉದ್ದೇಶಪೂರ್ವಕವಾಗಿತ್ತು ಮತ್ತು ಅದು ಅವರು ಮಾಡಿದ ತಪ್ಪು ಎಂದು ಹೇಳಿದ್ದಾರೆ.

ನಾಮ ಪತ್ರಗಳ ಪರಿಶೀಲನೆಯ ಸಮಯದಲ್ಲಿ, ಚುನಾವಣಾಧಿಕಾರಿಯೊಬ್ಬರು ಅರ್ಜಿದಾರರ ನಮೂನೆಗಳು ಪ್ರಜಾಪ್ರತಿನಿಧಿ ಕಾಯ್ದೆ, 1951 ಮತ್ತು ಚುನಾವಣಾ ನಿಯಮಗಳ ನಡವಳಿಕೆ, 1961ರ ನಿಬಂಧನೆಗಳನ್ನು ಅನುಸರಿಸುತ್ತವೆಯೇ ಎಂದು ಪರಿಶೀಲಿಸುತ್ತಾರೆ. ಸಂಜೆಯ ವೇಳೆಗೆ, ವಾರಣಾಸಿಯ 41 ಅಭ್ಯರ್ಥಿಗಳ ಪೈಕಿ 33 ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್ ಘೋಷಿಸಿದೆ. ನಾಮಪತ್ರ ತಿರಸ್ಕೃತ ಪಟ್ಟಿಯಲ್ಲಿ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಅಭ್ಯರ್ಥಿಗಳಿದ್ದರು. ಈ ಪಟ್ಟಿಯಲ್ಲಿ ಹರ್‌ಪ್ರೀತ್ ಸಿಂಗ್, ಸುನಿಲ್ ಬಿಂದ್, ಹೇಮಂತ್ ಯಾದವ್ ಮತ್ತು ಸ್ವತಂತ್ರ ಅಭ್ಯರ್ಥಿ ರಾಮ್ ಕುಮಾರ್ ಜೈಸ್ವಾಲ್ ಸೇರಿದಂತೆ ಇತರರು ಇದ್ದರು.

ಹರ್‌ಪ್ರೀತ್ ಸಿಂಗ್ ಅವರು ಈ ಕುರಿತು ಮೇ 16ರಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ನಮ್ಮ ಫಾರ್ಮ್‌ಗಳನ್ನು ತಿರಸ್ಕರಿಸಲು ಮೋಸ ನಡೆದಿದೆ. ಕೆಲವು ಸಮಾಜವಿರೋಧಿ ಶಕ್ತಿಗಳು ಒಳಗೆ ಇದ್ದುದರಿಂದ ಅವರು ಈ ರೀತಿ ಫಾರ್ಮ್‌ಗಳನ್ನು ತಿರಸ್ಕರಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಕೊಲ್ಲಲಾಯಿತು ಮತ್ತು ನಮ್ಮ ಕಣ್ಣುಗಳ ಮುಂದೆ ಸಂವಿಧಾನಕ್ಕೆ ಧಕ್ಕೆ ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಈ ಕುರಿತ ಸುದ್ದಿಯನ್ನು ಹಂಚಿಕೊಂಡ ಯೋಗೇಂದ್ರ ಯಾದವ್‌, ಇಷ್ಟೊಂದು ನಾಮಪತ್ರ ತಿರಸ್ಕೃತಗೊಂಡ ಕ್ಷೇತ್ರವನ್ನು ನೆನಪಿಸಿಕೊಳ್ಳಲು ಸಾಧ್ಯವಿಲ್ಲ. ದಯವಿಟ್ಟು ಯಾರಾದರೂ ಇದನ್ನು ಸಂಶೋಧಿಸಬಹುದೇ ಎಂದು ಕೇಳಿದ್ದಾರೆ.

ಇದನ್ನು ಓದಿ: ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...