Homeಮುಖಪುಟ'ಮಹಾಲಕ್ಷಿ ಮತ್ತು ಮೆಟ್ರೋ': ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

- Advertisement -
- Advertisement -

ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ ‘ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)’ ಕಂಪನಿ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ಹೆಚ್ಚಾದಂತೆ ಕಾಣುತ್ತಿದೆ.

“ಎಲ್‌ & ಟಿ ಹೈದರಾಬಾದ್ ಮೆಟ್ರೋ ನಿರ್ವಹಣೆಯಿಂದ ಹೊರ ಹೋಗಬಹುದು” ಎಂದು ಹೇಳುವ ಮೂಲಕ ಸಿಎಂ ರೇವಂತ್ ರೆಡ್ಡಿ ಕಂಪನಿ ವಿರುದ್ದ ಕಠಿಣ ನಿಲುವು ತಾಳುವ ಸೂಚನೆ ನೀಡಿದ್ದಾರೆ.

ಕರ್ನಾಟಕದ ‘ಶಕ್ತಿ’ ಯೋಜನೆಯಂತೆ ಮಹಿಳೆಯರು ಮತ್ತು ತೃತೀಯ ಲಿಂಗಿಗಳು ಟಿಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ‘ಮಹಾಲಕ್ಷಿ’ ಯೋಜನೆಯನ್ನು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಿಂದ ಮೆಟ್ರೋ ಆದಾಯದ ಮೇಲೆ ಹೊಡೆತ ಬಿದ್ದಿದೆ. ‘ಮಹಾಲಕ್ಷ್ಮಿ’ ಯೋಜನೆ ಜಾರಿಗೆ ಬಂದ ನಂತರ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದೈನಂದಿನ ಪ್ರಯಾಣಿಕರ ಸಂಖ್ಯೆ ನವೆಂಬರ್ 2023ರಲ್ಲಿ 5,50,000 ರಿಂದ 4,80,000ಕ್ಕೆ ಇಳಿದಿದೆ ಎಂದು ಎಲ್‌&ಟಿ ಆರೋಪಿಸಿದೆ. ಯೋಜನೆಯನ್ನು ಮಾರಾಟ ಮಾಡುತ್ತೇವೆ ಎಂದಿದೆ.

ಎಲ್‌&ಟಿ ವಿರುದ್ದ ಗುಡುಗಿದ ಸಿಎಂ ರೇವಂತ್ ರೆಡ್ಡಿ

ಮೇಡಿಗಡ್ಡ ಬ್ಯಾರೇಜ್‌ ವಿಷಯ ಪ್ರಸ್ತಾಪಿಸುವ ಮೂಲಕ ಸರ್ಕಾರದ ಯೋಜನೆಯನ್ನು ಟೀಕಿಸಿರುವ ಎಲ್‌&ಟಿ ಕಂಪನಿ ವಿರುದ್ದ ಸಿಎಂ ರೇವಂತ್ ರೆಡ್ಡಿ ಗುಡುಗಿದ್ದಾರೆ. ರಾಜ್ಯ ಸರ್ಕಾರದ ಬಹುದೊಡ್ಡ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾದ ಮೇಡಿಗಡ್ಡ ಬ್ಯಾರೇಜ್‌, ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮುಳುಗಡೆಯಾಗಿತ್ತು. ಅದರೆ ದುರಸ್ಥಿಗೆ ಗುತ್ತಿಗೆ ಕಂಪನಿ ಎಲ್‌&ಟಿ ನಿರಾಕರಿಸಿದ್ದು, ಇದರ ವಿರುದ್ದ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿ, “ಎಲ್‌&ಟಿ ಹೈದರಾಬಾದ್ ಮೆಟ್ರೋದಿಂದ ನಿರ್ಗಮಿಸಲು ಬಯಸಿರುವುದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತದೆಯೇ ಹೊರತು, ಕಾರ್ಪೋರೇಟ್ ಕಂಪನಿಗಾಗಿ ಅಲ್ಲ. ಎಲ್‌&ಟಿ ಹೊರ ಹೋಗಲು ಬಯಸಿದರೆ ಹೋಗಲಿ, ಹಾಗೆಯೇ ಮಾಡುವುದು ಸ್ವಾಗತಾರ್ಹ” ಎಂದಿದ್ದಾರೆ.

“ಎಲ್‌&ಟಿ ಹೊರ ಹೋದರೆ ಮೆಟ್ರೋ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಇನ್ನೊಬ್ಬರನ್ನು ಹುಡುಕಲಿದೆ. ನಾನು ಮೆಟ್ರೋ ಯೋಜನೆಯ ವಿರೋಧಿಯಲ್ಲ. ಸಾರ್ವಜನಿಕ ಸಾರಿಗೆಯಾಗಿರುವ ಮೆಟ್ರೋವನ್ನು ಎಲ್‌&ಟಿ ಅಲ್ಲದಿದ್ದರೆ ಇನ್ನೊಬ್ಬರು ನಿರ್ವಹಿಸಬಹುದು” ಎಂದು ಸಿಎಂ ಹೇಳಿದ್ದಾರೆ.

“ಕಾರ್ಪೊರೇಟ್‌ ಕಂಪನಿಗಳು ನೋಡುವಂತೆ ಸರ್ಕಾರಗಳು ಬ್ಯಾಲೆನ್ಸ್ ಶೀಟ್‌ಗಳನ್ನು ನೋಡುವುದಿಲ್ಲ. ಸರ್ಕಾರ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ, ಕಾರ್ಪೊರೇಟ್‌ಗಳಂತೆ ಲಾಭದ ಉದ್ದೇಶವಿಲ್ಲ” ಎಂದಿದ್ದಾರೆ.

ಸರ್ಕಾರಗಳು ಮಾಲಿನ್ಯವನ್ನುಂಟುಮಾಡುವ ಬಸ್‌ಗಳ ಪ್ರಯಾಣವನ್ನು ಉತ್ತೇಜಿಸುವ ನೀತಿಗಳನ್ನು ಅಳವಡಿಸಿಕೊಳ್ಳುವುದಕ್ಕಿಂತ, ಶೂನ್ಯ ಮಾಲಿನ್ಯ ಸಾರಿಗೆ ವ್ಯವಸ್ಥೆಗೆ ಬದಲಾಗಬೇಕು ಎಂಬ ಹೈದರಾಬಾದ್ ಮೆಟ್ರೋ ರೈಲಿನ ಮುಖ್ಯ ಹಣಕಾಸು ಅಧಿಕಾರಿ ಆರ್ ಶಂಕರ್ ರಾಮನ್ ಅವರ ಸಲಹೆ ಸಿಎಂ ರೇವಂತ್ ರೆಡ್ಡಿಯನ್ನು ಕೆರಳಿಸಿದೆ.

ಇತ್ತೀಚೆಗಷ್ಟೇ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಾಲಕ್ಷ್ಮಿ ಯೋಜನೆಯನ್ನು ಟೀಕಿಸಿದ್ದರು. “ಚುನಾವಣಾ ಭರವಸೆಯನ್ನು ಈಡೇರಿಸಲು ಸರ್ಕಾರವು ಸಾರ್ವಜನಿಕ ಸಾರಿಗೆ ಸೌಲಭ್ಯದಿಂದ (ಮೆಟ್ರೋ) ಶೇಕಡಾ 50 ರಷ್ಟು ಪ್ರಯಾಣಿಕರನ್ನು ಕೆಳಗಿಳಿಸುವುದು ಸರಿಯಲ್ಲ. ಇಂತಹ ಕ್ರಮಗಳು ರಾಜ್ಯದ ಬೊಕ್ಕಸವನ್ನು ಹೇಗೆ ಖಾಲಿ ಮಾಡುತ್ತದೆ ಮತ್ತು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದನ್ನು ತೋರಿಸುತ್ತದೆ” ಎಂದಿದ್ದರು.

ನವೆಂಬರ್ 28,2017 ರಂದು ಮಿಯಾಪುರ್‌ನಿಂದ ನಾಗೋಲ್‌ವರೆಗಿನ 30 ಕಿ.ಮೀ ದೂರದ ಹೈದರಾಬಾದ್ ಮೆಟ್ರೋ ರೈಲನ್ನು ಉದ್ಘಾಟಿಸಿದ ನರೇಂದ್ರ ಮೋದಿಯವರು, ಆಗಿನ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಮತ್ತು ಆಗಿನ ರಾಜ್ಯಪಾಲರಾದ ಇಎಸ್ಎಲ್ ನರಸಿಂಹನ್ ಅವರೊಂದಿಗೆ ಮೊದಲ ಸವಾರಿ ಮಾಡಿದ್ದರು. ಅಂದಿನಿಂದ ಹೈದರಾಬಾದ್ ಮೆಟ್ರೋ ರೈಲು ವೆಚ್ಚ-ಪರಿಣಾಮಕಾರಿ ಮತ್ತು ಸಮಯವನ್ನು ಉಳಿಸುವ ಮೂಲಕ ಅತ್ಯಂತ ಜನಪ್ರಿಯ ಸಾರಿಗೆ ಸಾಧನವಾಗಿದೆ.

ಹೈದರಾಬಾದ್‌ ಮೆಟ್ರೋ ರೈಲು 2021ರಲ್ಲಿ ನಷ್ಟ ಅನುಭವಿಸಿದ ಬಗ್ಗೆ ಹೇಳಿತ್ತು. ಆ ಬಳಿಕ ಎಲ್‌&ಟಿ ಕೂಡ ಈ ಬಗ್ಗೆ ಧ್ವನಿಯೆತ್ತಿತ್ತು. ಹಾಗಾಗಿ, ಆಗಿನ ಸಿಎಂ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರು ಮೆಟ್ರೋ ರೈಲನ್ನು ನಷ್ಟದಿಂದ ಹೊರ ತರಲು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸಲು ಸಮಿತಿಯನ್ನು ರಚಿಸಿದ್ದರು.

ಜೂನ್ 2023ರಲ್ಲಿ, ತೆಲಂಗಾಣ ಸರ್ಕಾರ ಹೈದರಾಬಾದ್ ಮೆಟ್ರೋ ರೈಲಿಗೆ ರೂ.100 ಕೋಟಿ ಬಡ್ಡಿ ರಹಿತ ಸಾಲ ನೀಡಿತ್ತು. ಕಂಪನಿಯ ಕಾರ್ಯಾಚರಣೆಯ 16ನೇ ವರ್ಷದಲ್ಲಿ ಈ ಸಾಲವನ್ನು ಮರುಪಾವತಿಸಬೇಕಾಗಿತ್ತು ಮತ್ತು 2021-22 ರಲ್ಲಿ 1,745 ಕೋಟಿಗಳಿಂದ 2022-23 ರಲ್ಲಿ ₹ 1,315 ಕೋಟಿಗೆ ನಷ್ಟವನ್ನು ಕಡಿಮೆ ಮಾಡಲು ಸಾಲವನ್ನು ಬಳಸಬೇಕಿತ್ತು.

ಮೂಲಗಳ ಪ್ರಕಾರ, ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ (ಎನ್‌ಡಿಎಸ್‌ಎ) ಸೂಚಿಸಿದಂತೆ ಮೇಡಿಗಡ್ಡ ಬ್ಯಾರೇಜ್‌ ಅನ್ನು ತನ್ನ ಸ್ವಂತ ವೆಚ್ಚದಲ್ಲಿ ದುರಸ್ತಿ ಮಾಡಲು ರಾಜ್ಯ ಸರ್ಕಾರವು ಎಲ್ & ಟಿಗೆ ಸೂಚಿಸಿದೆ. ಒಂದು ವೇಳೆ ಎಲ್‌&ಟಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳದಿದ್ದಲ್ಲಿ ದುರಸ್ತಿಗೆ ತಗುಲುವ ಸಂಪೂರ್ಣ ವೆಚ್ಚವನ್ನು ವಸೂಲಿ ಮಾಡಲು ಸರ್ಕಾರ ಚಿಂತಿಸುತ್ತಿದೆ. ಸಿಎಂ ರೇವಂತ್ ರೆಡ್ಡಿ ಅವರು ಎಲ್ & ಟಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಿರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...