Homeಮುಖಪುಟ'ಮಹಾಲಕ್ಷಿ ಮತ್ತು ಮೆಟ್ರೋ': ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

- Advertisement -
- Advertisement -

ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ ‘ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)’ ಕಂಪನಿ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ಹೆಚ್ಚಾದಂತೆ ಕಾಣುತ್ತಿದೆ.

“ಎಲ್‌ & ಟಿ ಹೈದರಾಬಾದ್ ಮೆಟ್ರೋ ನಿರ್ವಹಣೆಯಿಂದ ಹೊರ ಹೋಗಬಹುದು” ಎಂದು ಹೇಳುವ ಮೂಲಕ ಸಿಎಂ ರೇವಂತ್ ರೆಡ್ಡಿ ಕಂಪನಿ ವಿರುದ್ದ ಕಠಿಣ ನಿಲುವು ತಾಳುವ ಸೂಚನೆ ನೀಡಿದ್ದಾರೆ.

ಕರ್ನಾಟಕದ ‘ಶಕ್ತಿ’ ಯೋಜನೆಯಂತೆ ಮಹಿಳೆಯರು ಮತ್ತು ತೃತೀಯ ಲಿಂಗಿಗಳು ಟಿಎಸ್‌ಆರ್‌ಟಿಸಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡುವ ‘ಮಹಾಲಕ್ಷಿ’ ಯೋಜನೆಯನ್ನು ತೆಲಂಗಾಣದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ಯೋಜನೆಯಿಂದ ಮೆಟ್ರೋ ಆದಾಯದ ಮೇಲೆ ಹೊಡೆತ ಬಿದ್ದಿದೆ. ‘ಮಹಾಲಕ್ಷ್ಮಿ’ ಯೋಜನೆ ಜಾರಿಗೆ ಬಂದ ನಂತರ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ದೈನಂದಿನ ಪ್ರಯಾಣಿಕರ ಸಂಖ್ಯೆ ನವೆಂಬರ್ 2023ರಲ್ಲಿ 5,50,000 ರಿಂದ 4,80,000ಕ್ಕೆ ಇಳಿದಿದೆ ಎಂದು ಎಲ್‌&ಟಿ ಆರೋಪಿಸಿದೆ. ಯೋಜನೆಯನ್ನು ಮಾರಾಟ ಮಾಡುತ್ತೇವೆ ಎಂದಿದೆ.

ಎಲ್‌&ಟಿ ವಿರುದ್ದ ಗುಡುಗಿದ ಸಿಎಂ ರೇವಂತ್ ರೆಡ್ಡಿ

ಮೇಡಿಗಡ್ಡ ಬ್ಯಾರೇಜ್‌ ವಿಷಯ ಪ್ರಸ್ತಾಪಿಸುವ ಮೂಲಕ ಸರ್ಕಾರದ ಯೋಜನೆಯನ್ನು ಟೀಕಿಸಿರುವ ಎಲ್‌&ಟಿ ಕಂಪನಿ ವಿರುದ್ದ ಸಿಎಂ ರೇವಂತ್ ರೆಡ್ಡಿ ಗುಡುಗಿದ್ದಾರೆ. ರಾಜ್ಯ ಸರ್ಕಾರದ ಬಹುದೊಡ್ಡ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಭಾಗವಾದ ಮೇಡಿಗಡ್ಡ ಬ್ಯಾರೇಜ್‌, ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮುಳುಗಡೆಯಾಗಿತ್ತು. ಅದರೆ ದುರಸ್ಥಿಗೆ ಗುತ್ತಿಗೆ ಕಂಪನಿ ಎಲ್‌&ಟಿ ನಿರಾಕರಿಸಿದ್ದು, ಇದರ ವಿರುದ್ದ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ರೇವಂತ್ ರೆಡ್ಡಿ, “ಎಲ್‌&ಟಿ ಹೈದರಾಬಾದ್ ಮೆಟ್ರೋದಿಂದ ನಿರ್ಗಮಿಸಲು ಬಯಸಿರುವುದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಸರ್ಕಾರ ಜನರಿಗಾಗಿ ಕೆಲಸ ಮಾಡುತ್ತದೆಯೇ ಹೊರತು, ಕಾರ್ಪೋರೇಟ್ ಕಂಪನಿಗಾಗಿ ಅಲ್ಲ. ಎಲ್‌&ಟಿ ಹೊರ ಹೋಗಲು ಬಯಸಿದರೆ ಹೋಗಲಿ, ಹಾಗೆಯೇ ಮಾಡುವುದು ಸ್ವಾಗತಾರ್ಹ” ಎಂದಿದ್ದಾರೆ.

“ಎಲ್‌&ಟಿ ಹೊರ ಹೋದರೆ ಮೆಟ್ರೋ ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಇನ್ನೊಬ್ಬರನ್ನು ಹುಡುಕಲಿದೆ. ನಾನು ಮೆಟ್ರೋ ಯೋಜನೆಯ ವಿರೋಧಿಯಲ್ಲ. ಸಾರ್ವಜನಿಕ ಸಾರಿಗೆಯಾಗಿರುವ ಮೆಟ್ರೋವನ್ನು ಎಲ್‌&ಟಿ ಅಲ್ಲದಿದ್ದರೆ ಇನ್ನೊಬ್ಬರು ನಿರ್ವಹಿಸಬಹುದು” ಎಂದು ಸಿಎಂ ಹೇಳಿದ್ದಾರೆ.

“ಕಾರ್ಪೊರೇಟ್‌ ಕಂಪನಿಗಳು ನೋಡುವಂತೆ ಸರ್ಕಾರಗಳು ಬ್ಯಾಲೆನ್ಸ್ ಶೀಟ್‌ಗಳನ್ನು ನೋಡುವುದಿಲ್ಲ. ಸರ್ಕಾರ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ, ಕಾರ್ಪೊರೇಟ್‌ಗಳಂತೆ ಲಾಭದ ಉದ್ದೇಶವಿಲ್ಲ” ಎಂದಿದ್ದಾರೆ.

ಸರ್ಕಾರಗಳು ಮಾಲಿನ್ಯವನ್ನುಂಟುಮಾಡುವ ಬಸ್‌ಗಳ ಪ್ರಯಾಣವನ್ನು ಉತ್ತೇಜಿಸುವ ನೀತಿಗಳನ್ನು ಅಳವಡಿಸಿಕೊಳ್ಳುವುದಕ್ಕಿಂತ, ಶೂನ್ಯ ಮಾಲಿನ್ಯ ಸಾರಿಗೆ ವ್ಯವಸ್ಥೆಗೆ ಬದಲಾಗಬೇಕು ಎಂಬ ಹೈದರಾಬಾದ್ ಮೆಟ್ರೋ ರೈಲಿನ ಮುಖ್ಯ ಹಣಕಾಸು ಅಧಿಕಾರಿ ಆರ್ ಶಂಕರ್ ರಾಮನ್ ಅವರ ಸಲಹೆ ಸಿಎಂ ರೇವಂತ್ ರೆಡ್ಡಿಯನ್ನು ಕೆರಳಿಸಿದೆ.

ಇತ್ತೀಚೆಗಷ್ಟೇ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘ಮಹಾಲಕ್ಷ್ಮಿ ಯೋಜನೆಯನ್ನು ಟೀಕಿಸಿದ್ದರು. “ಚುನಾವಣಾ ಭರವಸೆಯನ್ನು ಈಡೇರಿಸಲು ಸರ್ಕಾರವು ಸಾರ್ವಜನಿಕ ಸಾರಿಗೆ ಸೌಲಭ್ಯದಿಂದ (ಮೆಟ್ರೋ) ಶೇಕಡಾ 50 ರಷ್ಟು ಪ್ರಯಾಣಿಕರನ್ನು ಕೆಳಗಿಳಿಸುವುದು ಸರಿಯಲ್ಲ. ಇಂತಹ ಕ್ರಮಗಳು ರಾಜ್ಯದ ಬೊಕ್ಕಸವನ್ನು ಹೇಗೆ ಖಾಲಿ ಮಾಡುತ್ತದೆ ಮತ್ತು ಪರಿಸರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂಬುವುದನ್ನು ತೋರಿಸುತ್ತದೆ” ಎಂದಿದ್ದರು.

ನವೆಂಬರ್ 28,2017 ರಂದು ಮಿಯಾಪುರ್‌ನಿಂದ ನಾಗೋಲ್‌ವರೆಗಿನ 30 ಕಿ.ಮೀ ದೂರದ ಹೈದರಾಬಾದ್ ಮೆಟ್ರೋ ರೈಲನ್ನು ಉದ್ಘಾಟಿಸಿದ ನರೇಂದ್ರ ಮೋದಿಯವರು, ಆಗಿನ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಮತ್ತು ಆಗಿನ ರಾಜ್ಯಪಾಲರಾದ ಇಎಸ್ಎಲ್ ನರಸಿಂಹನ್ ಅವರೊಂದಿಗೆ ಮೊದಲ ಸವಾರಿ ಮಾಡಿದ್ದರು. ಅಂದಿನಿಂದ ಹೈದರಾಬಾದ್ ಮೆಟ್ರೋ ರೈಲು ವೆಚ್ಚ-ಪರಿಣಾಮಕಾರಿ ಮತ್ತು ಸಮಯವನ್ನು ಉಳಿಸುವ ಮೂಲಕ ಅತ್ಯಂತ ಜನಪ್ರಿಯ ಸಾರಿಗೆ ಸಾಧನವಾಗಿದೆ.

ಹೈದರಾಬಾದ್‌ ಮೆಟ್ರೋ ರೈಲು 2021ರಲ್ಲಿ ನಷ್ಟ ಅನುಭವಿಸಿದ ಬಗ್ಗೆ ಹೇಳಿತ್ತು. ಆ ಬಳಿಕ ಎಲ್‌&ಟಿ ಕೂಡ ಈ ಬಗ್ಗೆ ಧ್ವನಿಯೆತ್ತಿತ್ತು. ಹಾಗಾಗಿ, ಆಗಿನ ಸಿಎಂ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರು ಮೆಟ್ರೋ ರೈಲನ್ನು ನಷ್ಟದಿಂದ ಹೊರ ತರಲು ಪರ್ಯಾಯ ಮಾರ್ಗಗಳನ್ನು ಅನ್ವೇಷಿಸಲು ಸಮಿತಿಯನ್ನು ರಚಿಸಿದ್ದರು.

ಜೂನ್ 2023ರಲ್ಲಿ, ತೆಲಂಗಾಣ ಸರ್ಕಾರ ಹೈದರಾಬಾದ್ ಮೆಟ್ರೋ ರೈಲಿಗೆ ರೂ.100 ಕೋಟಿ ಬಡ್ಡಿ ರಹಿತ ಸಾಲ ನೀಡಿತ್ತು. ಕಂಪನಿಯ ಕಾರ್ಯಾಚರಣೆಯ 16ನೇ ವರ್ಷದಲ್ಲಿ ಈ ಸಾಲವನ್ನು ಮರುಪಾವತಿಸಬೇಕಾಗಿತ್ತು ಮತ್ತು 2021-22 ರಲ್ಲಿ 1,745 ಕೋಟಿಗಳಿಂದ 2022-23 ರಲ್ಲಿ ₹ 1,315 ಕೋಟಿಗೆ ನಷ್ಟವನ್ನು ಕಡಿಮೆ ಮಾಡಲು ಸಾಲವನ್ನು ಬಳಸಬೇಕಿತ್ತು.

ಮೂಲಗಳ ಪ್ರಕಾರ, ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ (ಎನ್‌ಡಿಎಸ್‌ಎ) ಸೂಚಿಸಿದಂತೆ ಮೇಡಿಗಡ್ಡ ಬ್ಯಾರೇಜ್‌ ಅನ್ನು ತನ್ನ ಸ್ವಂತ ವೆಚ್ಚದಲ್ಲಿ ದುರಸ್ತಿ ಮಾಡಲು ರಾಜ್ಯ ಸರ್ಕಾರವು ಎಲ್ & ಟಿಗೆ ಸೂಚಿಸಿದೆ. ಒಂದು ವೇಳೆ ಎಲ್‌&ಟಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳದಿದ್ದಲ್ಲಿ ದುರಸ್ತಿಗೆ ತಗುಲುವ ಸಂಪೂರ್ಣ ವೆಚ್ಚವನ್ನು ವಸೂಲಿ ಮಾಡಲು ಸರ್ಕಾರ ಚಿಂತಿಸುತ್ತಿದೆ. ಸಿಎಂ ರೇವಂತ್ ರೆಡ್ಡಿ ಅವರು ಎಲ್ & ಟಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಒಂದೆರಡು ದಿನಗಳಲ್ಲಿ ನಿರ್ಧಿರಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಚುನಾವಣಾ ಆಯೋಗ ನವೀಕರಿಸಿದ ಅಂಕಿ ಅಂಶ: 4 ಹಂತಗಳಲ್ಲಿ 1.07 ಕೋಟಿ ಮತಗಳಲ್ಲಿ ವ್ಯತ್ಯಾಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...