Homeಮುಖಪುಟಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

ಬಿಹಾರ: ಪೊಲೀಸ್‌ ಕಸ್ಟಡಿಯಲ್ಲಿದ್ದ ಇಬ್ಬರು ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಠಾಣೆಗೆ ಬೆಂಕಿ ಹಚ್ಚಿದ ಗುಂಪು

- Advertisement -
- Advertisement -

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಆರೋಪದಲ್ಲಿ ಬಂಧಿತ ಯುವಕ ಮತ್ತು ಆತನ ಅಪ್ರಾಪ್ತ ‘ಪತ್ನಿ’ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬೆನ್ನಲ್ಲಿ ಕೋಪಗೊಂಡ ಗ್ರಾಮಸ್ಥರು ಪೊಲೀಸ್‌ ಠಾಣೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.

ಉದ್ರಿಕ್ತರು, ಅಧಿಕಾರಿಗಳ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ, ಪೊಲೀಸ್ ಠಾಣೆಯನ್ನು ಧ್ವಂಸಗೊಳಿಸಿ ನಂತರ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಇಬ್ಬರು ಗ್ರಾಮಸ್ಥರು ಗಾಯಗೊಂಡಿದ್ದಾರೆ.

ಯುವಕನೋರ್ವ ತನ್ನ ಪತ್ನಿಯ ನಿಧನದ ಹಿನ್ನೆಲೆ ಎರಡು ದಿನಗಳ ಹಿಂದೆ 14 ವರ್ಷದ ಅತ್ತಿಗೆಯನ್ನು ಮದುವೆಯಾಗಿದ್ದಾನೆ. ಅಪ್ರಾಪ್ತ ಬಾಲಕಿಯನ್ನು ಆತ ತನ್ನ ಹೆಂಡತಿಯಂತೆ ತನ್ನ ಮನೆಯಲ್ಲಿ ಇಟ್ಟುಕೊಂಡಿದ್ದಾನೆ ಎಂದು ತಿಳಿದ ನಂತರ ಗುರುವಾರ ಮಧ್ಯಾಹ್ನ ಪೊಲೀಸರು ಆತನನ್ನು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅವರನ್ನು ವಿಚಾರಣೆಗಾಗಿ ಕರೆತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಗುರುವಾರ ಸಂಜೆ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಿತ ಗ್ರಾಮಸ್ಥರು ಪೊಲೀಸರ ವಿರುದ್ಧ ಪ್ರತಿಭಟನೆ ಮಾಡಿದ್ದು, ಪೊಲೀಸರು ಥಳಿಸಿದ ನಂತರ ಇಬ್ಬರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸ್‌ ಠಾಣೆಯನ್ನು ಧ್ವಂಸ ಮಾಡಿ ಬೆಂಕಿ ಹಚ್ಚಿದ್ದಾರೆ.  ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದ ಪೋಲಿಸರು ಬಳಿಕ ಗಾಳಿಯಲ್ಲಿ ಗುಂಡುಗಳನ್ನು ಹಾರಿಸಿದ್ದು, ಈ ವೇಳೆ ಇಬ್ಬರು ಗಾಯಗೊಂಡಿದ್ದಾರೆ. ಕಲ್ಲು ತೂರಾಟದಿಂದ ಅರಾರಿಯಾ ಎಎಸ್‌ಪಿ ಸೇರಿದಂತೆ 6 ಪೋಲಿಸರು ಗಾಯಗೊಂಡಿದ್ದಾರೆ, ಅವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಪೊಲೀಸ್‌ ಠಾಣೆಯೊಳಗಿನ ಸಿಸಿಟಿವಿ ವೀಡಿಯೋ, ಜೈಲಿನ ಸೆಲ್‌ನ ಒಳಗಿನಿಂದ ಯುವಕ ಬಟ್ಟೆಯನ್ನು ಬಳಸಿ ನೇಣು ಬಿಗಿದುಕೊಂಡಿರುವುದನ್ನು ತೋರಿಸಿದೆ. ಸ್ಥಳಕ್ಕೆ ವಿವಿಧ ಠಾಣೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅವ್ಯವಸ್ಥೆಗೆ ಕಾರಣರಾದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದೇ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಘಟನೆಗೆ ಸಂಬಂಧಿಸಿದಂತೆ 17 ಜನರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ನೆರವಿನಿಂದ ಇತರರನ್ನು ಗುರುತಿಸಲಾಗುತ್ತಿದೆ ಎಂದು ಎಸ್‌ಪಿ ಅಮಿತ್ ರಂಜನ್ ತಿಳಿಸಿದ್ದಾರೆ.

ಇದನ್ನು ಓದಿ: ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...