Homeಮುಖಪುಟಪ್ರತಿದಿನ ಹೊಸ ಸುಳ್ಳು, ಪ್ರತಿ ಗಂಟೆಗೆ ದ್ವೇಷ ಬಿತ್ತುವ ಮೋದಿ ಬಗ್ಗೆ ಚು.ಆಯೋಗ ಮೌನವಾಗಿದೆ: ಸ್ಟ್ಯಾಲಿನ್‌...

ಪ್ರತಿದಿನ ಹೊಸ ಸುಳ್ಳು, ಪ್ರತಿ ಗಂಟೆಗೆ ದ್ವೇಷ ಬಿತ್ತುವ ಮೋದಿ ಬಗ್ಗೆ ಚು.ಆಯೋಗ ಮೌನವಾಗಿದೆ: ಸ್ಟ್ಯಾಲಿನ್‌ ತರಾಟೆ

- Advertisement -
- Advertisement -

ರಾಜ್ಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಲು ಪ್ರಧಾನಿ ನರೇಂದ್ರ ಮೋದಿ ಕೆಳಮಟ್ಟದ ತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿಯವರ ಬೇಜವಾಬ್ದಾರಿ ಭಾಷಣಗಳು ಮತ್ತು ಅವುಗಳನ್ನು ತಡೆಯುವಲ್ಲಿ ಚುನಾವಣಾ ಆಯೋಗದ ಮೌನವನ್ನು ದೇಶದ ನಾಗರಿಕರು ಆಘಾತ ಮತ್ತು ನಿರಾಶೆಯಿಂದ ನೋಡುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ದಕ್ಷಿಣದ ರಾಜ್ಯಗಳ ನಾಯಕರು ಉತ್ತರ ಪ್ರದೇಶದ ಜನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂಬ ಪ್ರಧಾನಿಯ ಆರೋಪಗಳನ್ನು ಪ್ರಸ್ತಾಪಿಸಿದ ಸ್ಟ್ಯಾಲಿನ್‌ ಇದು ಮೋದಿಯ ಕಾಲ್ಪನಿಕ ಕಥೆ ಮತ್ತು ಸುಳ್ಳಿನ ಚೀಲ ಎಂದು ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿ ಕಚೇರಿಯ ಘನತೆಯನ್ನು ಮರೆತಿದ್ದಾರೆ. ಪ್ರತಿದಿನ ಹೊಸ ಸುಳ್ಳು ಮತ್ತು ಪ್ರತಿ ಗಂಟೆಗೆ ದ್ವೇಷದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ, ಎಸ್‌ಪಿ ಮತ್ತು ಕಾಂಗ್ರೆಸ್‌ನ ದಕ್ಷಿಣ ರಾಜ್ಯಗಳ ಮಿತ್ರಪಕ್ಷಗಳು ಉತ್ತರಪ್ರದೇಶ ಮತ್ತು ಸನಾತನ ಧರ್ಮವನ್ನು ಅವಮಾನಿಸಿದೆ ಎಂದು ಮೋದಿ ಆರೋಪಿಸಿದ್ದರು.

ಉತ್ತರಪ್ರದೇಶದ ಜನರಿಗೆ ಪ್ರಯೋಜನಕಾರಿಯಾಗಿರುವ ವಿಷಯದ ಬಗ್ಗೆ ಪ್ರಧಾನಿ ಮೋದಿ ಎಂದಾದರೂ ಮಾತನಾಡಿದ್ದಾರೆಯೇ ಅಥವಾ ಯಾವುದೇ ಭರವಸೆ ನೀಡಿದ್ದಾರೆಯೇ? ಇಲ್ಲ. ಆದರೆ ಅವರು ದ್ವೇಷವನ್ನು ಹರಡುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿಯು ನಕಲಿ ಸುದ್ದಿಗಳನ್ನು ಬೆಂಬಲಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದು, ಯೂಟ್ಯೂಬರ್ ಮನೀಶ್ ಕಶ್ಯಪ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ. ಬಿಹಾರದ ಕಾರ್ಮಿಕರ ಮೇಲೆ ದಾಳಿ ನಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿ ತಮಿಳುನಾಡು ಪೊಲೀಸರಿಂದ ಬಂಧಿತರಾಗಿದ್ದ ಕಶ್ಯಪ್ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಮೋದಿಯವರ ದ್ವೇಷಪೂರಿತ ಪ್ರಚಾರ ವಿಫಲವಾಗಿದೆ ಮತ್ತು ಅವರ ಸರ್ಕಾರ ಕಳೆದ 10 ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಸಾಧನೆ ಏನು ಮಾಡಿಲ್ಲ, ಪ್ರಧಾನಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಜಾರಿಗೆ ತಂದ ಕಲ್ಯಾಣ ಯೋಜನೆಗಳನ್ನು ಕಡಿಮೆ ಮಾಡಲು ಮುಂದಾಗಿ ತನ್ನನ್ನು ತಾನು ಮೋದಿ ಬಡವರ ಶತ್ರು ಎಂದು ಬಹಿರಂಗಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಮೋದಿ ತನ್ನ ಬಲಪಂಥೀಯ, ಪ್ರತಿಗಾಮಿ ಸಿದ್ಧಾಂತದಿಂದ ಮಹಿಳಾ ಕೇಂದ್ರಿತ ಯೋಜನೆಗಳನ್ನು ಬೆಂಬಲಿಸಲು ಹಿಂಜರಿಯುತ್ತಾರೆ. ಅವರು ಮಹಿಳೆಯರ ಪ್ರಗತಿ ಮತ್ತು ಸಾಮಾಜಿಕ ಬೆಳವಣಿಗೆಗೆ ಹೆದರುತ್ತಾರೆ. ಬಿಜೆಪಿಯ ವಿಭಜಕ ಕನಸುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ, ಸುಳ್ಳನ್ನು ಛಿದ್ರಗೊಳಿಸಲಾಗುತ್ತದೆ ಮತ್ತು ದ್ವೇಷವನ್ನು ಹೊರಹಾಕಲಾಗುತ್ತದೆ. ಇಂಡಿಯಾ ಮೈತ್ರಿಕೂಟವು ಮೇಲುಗೈ ಸಾಧಿಸುತ್ತದೆ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...