Homeಮುಖಪುಟಪ್ರತಿದಿನ ಹೊಸ ಸುಳ್ಳು, ಪ್ರತಿ ಗಂಟೆಗೆ ದ್ವೇಷ ಬಿತ್ತುವ ಮೋದಿ ಬಗ್ಗೆ ಚು.ಆಯೋಗ ಮೌನವಾಗಿದೆ: ಸ್ಟ್ಯಾಲಿನ್‌...

ಪ್ರತಿದಿನ ಹೊಸ ಸುಳ್ಳು, ಪ್ರತಿ ಗಂಟೆಗೆ ದ್ವೇಷ ಬಿತ್ತುವ ಮೋದಿ ಬಗ್ಗೆ ಚು.ಆಯೋಗ ಮೌನವಾಗಿದೆ: ಸ್ಟ್ಯಾಲಿನ್‌ ತರಾಟೆ

- Advertisement -
- Advertisement -

ರಾಜ್ಯಗಳ ನಡುವೆ ಘರ್ಷಣೆಯನ್ನು ಉಂಟುಮಾಡಲು ಪ್ರಧಾನಿ ನರೇಂದ್ರ ಮೋದಿ ಕೆಳಮಟ್ಟದ ತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿಯವರ ಬೇಜವಾಬ್ದಾರಿ ಭಾಷಣಗಳು ಮತ್ತು ಅವುಗಳನ್ನು ತಡೆಯುವಲ್ಲಿ ಚುನಾವಣಾ ಆಯೋಗದ ಮೌನವನ್ನು ದೇಶದ ನಾಗರಿಕರು ಆಘಾತ ಮತ್ತು ನಿರಾಶೆಯಿಂದ ನೋಡುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ದಕ್ಷಿಣದ ರಾಜ್ಯಗಳ ನಾಯಕರು ಉತ್ತರ ಪ್ರದೇಶದ ಜನರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂಬ ಪ್ರಧಾನಿಯ ಆರೋಪಗಳನ್ನು ಪ್ರಸ್ತಾಪಿಸಿದ ಸ್ಟ್ಯಾಲಿನ್‌ ಇದು ಮೋದಿಯ ಕಾಲ್ಪನಿಕ ಕಥೆ ಮತ್ತು ಸುಳ್ಳಿನ ಚೀಲ ಎಂದು ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿ ಕಚೇರಿಯ ಘನತೆಯನ್ನು ಮರೆತಿದ್ದಾರೆ. ಪ್ರತಿದಿನ ಹೊಸ ಸುಳ್ಳು ಮತ್ತು ಪ್ರತಿ ಗಂಟೆಗೆ ದ್ವೇಷದ ಬೀಜಗಳನ್ನು ಬಿತ್ತುತ್ತಿದ್ದಾರೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ನಡೆದ ರ್ಯಾಲಿಯಲ್ಲಿ, ಎಸ್‌ಪಿ ಮತ್ತು ಕಾಂಗ್ರೆಸ್‌ನ ದಕ್ಷಿಣ ರಾಜ್ಯಗಳ ಮಿತ್ರಪಕ್ಷಗಳು ಉತ್ತರಪ್ರದೇಶ ಮತ್ತು ಸನಾತನ ಧರ್ಮವನ್ನು ಅವಮಾನಿಸಿದೆ ಎಂದು ಮೋದಿ ಆರೋಪಿಸಿದ್ದರು.

ಉತ್ತರಪ್ರದೇಶದ ಜನರಿಗೆ ಪ್ರಯೋಜನಕಾರಿಯಾಗಿರುವ ವಿಷಯದ ಬಗ್ಗೆ ಪ್ರಧಾನಿ ಮೋದಿ ಎಂದಾದರೂ ಮಾತನಾಡಿದ್ದಾರೆಯೇ ಅಥವಾ ಯಾವುದೇ ಭರವಸೆ ನೀಡಿದ್ದಾರೆಯೇ? ಇಲ್ಲ. ಆದರೆ ಅವರು ದ್ವೇಷವನ್ನು ಹರಡುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿಯು ನಕಲಿ ಸುದ್ದಿಗಳನ್ನು ಬೆಂಬಲಿಸುತ್ತಿದೆ ಮತ್ತು ಪ್ರೋತ್ಸಾಹಿಸುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದು, ಯೂಟ್ಯೂಬರ್ ಮನೀಶ್ ಕಶ್ಯಪ್ ಅವರ ಉದಾಹರಣೆಯನ್ನು ಉಲ್ಲೇಖಿಸಿದ್ದಾರೆ. ಬಿಹಾರದ ಕಾರ್ಮಿಕರ ಮೇಲೆ ದಾಳಿ ನಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿ ತಮಿಳುನಾಡು ಪೊಲೀಸರಿಂದ ಬಂಧಿತರಾಗಿದ್ದ ಕಶ್ಯಪ್ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಮೋದಿಯವರ ದ್ವೇಷಪೂರಿತ ಪ್ರಚಾರ ವಿಫಲವಾಗಿದೆ ಮತ್ತು ಅವರ ಸರ್ಕಾರ ಕಳೆದ 10 ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಸಾಧನೆ ಏನು ಮಾಡಿಲ್ಲ, ಪ್ರಧಾನಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಲ್ಲಿ ಜಾರಿಗೆ ತಂದ ಕಲ್ಯಾಣ ಯೋಜನೆಗಳನ್ನು ಕಡಿಮೆ ಮಾಡಲು ಮುಂದಾಗಿ ತನ್ನನ್ನು ತಾನು ಮೋದಿ ಬಡವರ ಶತ್ರು ಎಂದು ಬಹಿರಂಗಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಮೋದಿ ತನ್ನ ಬಲಪಂಥೀಯ, ಪ್ರತಿಗಾಮಿ ಸಿದ್ಧಾಂತದಿಂದ ಮಹಿಳಾ ಕೇಂದ್ರಿತ ಯೋಜನೆಗಳನ್ನು ಬೆಂಬಲಿಸಲು ಹಿಂಜರಿಯುತ್ತಾರೆ. ಅವರು ಮಹಿಳೆಯರ ಪ್ರಗತಿ ಮತ್ತು ಸಾಮಾಜಿಕ ಬೆಳವಣಿಗೆಗೆ ಹೆದರುತ್ತಾರೆ. ಬಿಜೆಪಿಯ ವಿಭಜಕ ಕನಸುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ, ಸುಳ್ಳನ್ನು ಛಿದ್ರಗೊಳಿಸಲಾಗುತ್ತದೆ ಮತ್ತು ದ್ವೇಷವನ್ನು ಹೊರಹಾಕಲಾಗುತ್ತದೆ. ಇಂಡಿಯಾ ಮೈತ್ರಿಕೂಟವು ಮೇಲುಗೈ ಸಾಧಿಸುತ್ತದೆ ಎಂದು ಸ್ಟ್ಯಾಲಿನ್‌ ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...