Homeಮುಖಪುಟಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

- Advertisement -
- Advertisement -

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ನವಿ ಮುಂಬೈನಲ್ಲಿ ಗೃಹಬಂಧನದಲ್ಲಿದ್ದ ಗೌತಮ್ ನವ್ಲಾಖಾ ಅವರನ್ನು ಶನಿವಾರ ತಡರಾತ್ರಿ 8:30ರ ಸುಮಾರಿಗೆ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ನೀಡಲಾಗಿದ್ದ ಜಾಮೀನಿನ ಮೇಲಿನ ತಡೆಯನ್ನು ಸುಪ್ರೀಂ ಕೋರ್ಟ್ ಮೇ 14 ರಂದು ತೆರವುಗೊಳಿಸಿತ್ತು. ಇದರ ಬೆನ್ನಲ್ಲಿ ಗೃಹ ಬಂಧನದಿಂದ ಬಿಡುಗಡೆಯಾಗಿ ಗೌತಮ್ ನವ್ಲಾಖಾ ಕುಟುಂಬ ವರ್ಗವನ್ನು ಸೇರಿಕೊಂಡಿದ್ದಾರೆ.

ನವ್ಲಾಖಾ ಪರ ಹಿರಿಯ ವಕೀಲ ನಿತ್ಯಾ ರಾಮಕೃಷ್ಣನ್ ವಾದ ಮಂಡಿಸಿದರೆ, ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ರಾಷ್ಟ್ರೀಯ ತನಿಖಾ ಸಂಸ್ಥೆ ಪರವಾಗಿ ಕೋರ್ಟ್‌ನಲ್ಲಿ ವಾದವನ್ನು ಮಂಡಿಸಿದ್ದಾರೆ.

ಬಾಂಬೆ ಹೈಕೋರ್ಟ್ ಕಳೆದ ವರ್ಷ ಡಿಸೆಂಬರ್ 19ರಂದು ನವ್ಲಾಖಾಗೆ ಜಾಮೀನು ನೀಡಿತ್ತು, ಆದರೆ ರಾಷ್ಟ್ರೀಯ ತನಿಖಾ ಸಂಸ್ಥೆ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ತನ್ನ ತೀರ್ಪಿಗೆ ಮೂರು ವಾರ ತಡೆಯಾಜ್ಞೆ ನೀಡಿತ್ತು. ಗೌತಮ್ ನವ್ಲಾಖಾ ಅವರನ್ನು 2020ರ ಏಪ್ರಿಲ್ 14ರಂದು ಬಂಧಿಸಲಾಗಿದೆ. 2022ರ ನ.19ರಿಂದ ಅವರು ಮುಂಬೈನಲ್ಲಿ ಗೃಹಬಂಧನದಲ್ಲಿದ್ದರು.

ಎಲ್ಗರ್ ಪರಿಷತ್ ಪ್ರಕರಣದಲ್ಲಿ 16 ಮಾನವ ಹಕ್ಕುಗಳ ಕಾರ್ಯಕರ್ತರು, ವಕೀಲರು, ಬರಹಗಾರರು ಮತ್ತು ಶಿಕ್ಷಣ ತಜ್ಞರನ್ನು ಬಂಧಿಸಲಾಗಿತ್ತು. ಇದು ತೀವ್ರ ಟೀಕೆಗೆ ಒಳಗಾಗಿತ್ತು. ಆರೋಪಿಗಳ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಪುರಾವೆಗಳನ್ನು ಹಾಕಲು ಹ್ಯಾಕರ್‌ಗಳನ್ನು ಬಳಸಲಾಗುತ್ತಿದೆ ಎಂದು ಆರೋಪ ಕೇಳಿ ಬಂದಿತ್ತು.

ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದ ತೆಲುಗು ಕವಿ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಫೆಬ್ರವರಿ 2021ರಲ್ಲಿ ಆರು ತಿಂಗಳ ಕಾಲ ಜಾಮೀನು ನೀಡಲಾಗಿದೆ. ಜಾಮೀನು ವಿಸ್ತರಿಸಿದಾಗ, ಬಾಂಬೆ ಹೈಕೋರ್ಟ್ ಏಪ್ರಿಲ್ 2022ರಲ್ಲಿ ಶಾಶ್ವತ ಜಾಮೀನಿಗಾಗಿ ಅವರ ಮನವಿಯನ್ನು ತಿರಸ್ಕರಿಸಿದೆ. ಆದರೆ ಆಗಸ್ಟ್ 2022ರಲ್ಲಿ ಸುಪ್ರೀಂ ಕೋರ್ಟ್ ರಾವ್ ಅವರ ಆರೋಗ್ಯದ ಸ್ಥಿತಿ ಆಧಾರದ ಮೇಲೆ ಜಾಮೀನು ನೀಡಿದೆ.

ಏಪ್ರಿಲ್‌ನಲ್ಲಿ ಶೋಮಾ ಸೇನ್‌ಗೆ ಈ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. 2021 ರಲ್ಲಿ ವಕೀಲೆ ಸುಧಾ ಭಾರದ್ವಾಜ್ ಅವರು ಡೀಫಾಲ್ಟ್ ಜಾಮೀನು ಪಡೆದಿದ್ದರು. 2022ರಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. 2023ರಲ್ಲಿ ಪ್ರಕರಣಕ್ಕೆ ಸಂಬಂಧಿಸಿ ವೆರ್ನಾನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೇರಾ ಜಾಮೀನು ಪಡೆದಿದ್ದಾರೆ. ಇದಲ್ಲದೆ ಮಹೇಶ್ ರಾವುತ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿತ್ತು.

ಇನ್ನೂ ಯಾರು ಕಂಬಿಗಳ ಹಿಂದೆ ಇದ್ದಾರೆ?

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಪತ್ರಕರ್ತ ಸುಧೀರ್ ಧಾವಳೆ, ಹೋರಾಟಗಾರ ರೋನಾ ವಿಲ್ಸನ್, ವಕೀಲ ಸುರೇಂದ್ರ ಗಡ್ಲಿಂಗ್, ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನಿ ಬಾಬು ಮತ್ತು ಸಾಂಸ್ಕೃತಿಕ ಕಲಾವಿದರು ಮತ್ತು ಕಾರ್ಯಕರ್ತರಾದ ಸಾಗರ್ ಗೋರ್ಖೆ, ರಮೇಶ್ ಗೈಚೋರ್ ಮತ್ತು ಜ್ಯೋತಿ ಜಗತಾಪ್ ಅವರು ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ವಿಲ್ಸನ್, ಗ್ಯಾಡ್ಲಿಂಗ್ ಮತ್ತು ಧವಳೆ ಅವರ ಮೇಲ್ಮನವಿಗಳು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿವೆ, ಈ ಹಿಂದೆ ವಿಶೇಷ ನ್ಯಾಯಾಲಯವು ಅವರ ಮನವಿಗಳನ್ನು ತಿರಸ್ಕರಿಸಿತ್ತು. ಇದಲ್ಲದೆ ಬಾಬು ಅವರ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಮುಸ್ಲಿಂ ಸಮುದಾಯಕ್ಕೆ ಕಡಿಮೆ ಪ್ರಾತನಿಧ್ಯ ನೀಡಿದ ರಾಜಕೀಯ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...