Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದ್ದು, ಇದನ್ನು ಖಂಡಿಸಿ ಅಮೆರಿಕದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರನ್ನು ಥಳಿಸಿ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಅಲ್‌ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಲು ಅಮೆರಿಕ ಇಸ್ರೇಲ್‌ಗೆ ಬೆನ್ನಿಗೆ ನಿಂತಿತ್ತು. ಇದನ್ನು ಅಮೆರಿಕದ ನಾಗರಿಕರು ವಿರೋಧಿಸುತ್ತಲೇ ಬಂದಿದ್ದರು, ಇಸ್ರೇಲ್‌ಗೆ ಯಾವುದೇ ಯುದ್ಧ ನೆರವನ್ನು ನೀಡದಂತೆ ಆಗ್ರಹಿಸಿದ್ದರು. ಆದರೆ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳ ಸಾಗಣೆಯನ್ನು ಅಮೆರಿಕ ನಿಲ್ಲಿಸಿಲ್ಲ. ಅಂತರಾಷ್ಟ್ರೀಯ ಖಂಡನೆಗಳ ಹೊರತಾಗಿಯೂ ಟ್ಯಾಂಕ್ ಶೆಲ್‌ಗಳನ್ನು ಒಳಗೊಂಡಂತೆ ಹೊಸ 1 ಬಿಲಿಯನ್ ಪ್ಯಾಕೇಜ್‌ನ್ನು ಅಮೆರಿಕ ಮುಂದುವರಿಸಿದೆ.

ಅಮೆರಿಕದ ನೈರುತ್ಯ ಬ್ರೂಕ್ಲಿನ್‌ನ ಬೇ ರಿಡ್ಜ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು. ನೈರುತ್ಯ ಬ್ರೂಕ್ಲಿನ್‌ ಪ್ಯಾಲೆಸ್ತೀನಿಯನ್ನರು ಮತ್ತು ಯೆಮೆನ್ ಮೂಲದ ಜನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು ವಾಸಿಸುವ ನೆಲೆಯಾಗಿದೆ. ಪ್ರತಿಭಟನಕಾರರು ಬೀದಿಯಲ್ಲಿ ಮೆರವಣಿಗೆ ಮಾಡಿದ್ದು, ಈ ವೇಳೆ ನ್ಯೂಯಾರ್ಕ್ ಪೊಲೀಸರು ಬಂದು ಪ್ರತಿಭಟನಾಕಾರರನ್ನು ಥಳಿಸಿ ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನೆಲಕ್ಕೆ ತಳ್ಳಿ ತಲೆಗೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಸ್ವತಂತ್ರ ಪತ್ರಕರ್ತರಾದ ಕೇಟೀ ಸ್ಮಿತ್ ತಿಳಿಸಿದ್ದಾರೆ.

ಸ್ಮಿತ್ ಸ್ಥಳೀಯ ಸಮುದಾಯದ ಪ್ರತಿಕ್ರಿಯೆಯನ್ನು “ಆಕ್ರೋಶ’ ಎಂದು ಬಣ್ಣಿಸಿದ್ದಾರೆ. ಬೇ ರಿಡ್ಜ್ ಪ್ರದೇಶ ಒಂದು ದಶಕದಿಂದ ಪ್ಯಾಲೆಸ್ತೀನ್‌ ಪರ ಮೆರವಣಿಗೆಗಳನ್ನು ನೋಡಿದೆ, ಆದರೆ ಪೊಲೀಸ್ ಈ ರೀತಿ ಎಂದಿಗೂ ಕ್ರೂರವಾಗಿ ನಡೆದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ನೂರಾರು ಜನರ ಗುಂಪಿನಿಂದ ಕನಿಷ್ಠ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಈ ಕುರಿತ ವೈರಲ್‌ ವಿಡಿಯೋಗಳು  ಪ್ರತಿಭಟನಾಕಾರರನ್ನು ಪೊಲೀಸರು ಎಳೆದುಕೊಂಡು ಹೋಗುವುದನ್ನು ತೋರಿಸಿದೆ. ಅವರಿಗೆ ಕೈಗೆ ಸಂಕೋಲೆಗಳನ್ನು ಹಾಕಲಾಗಿದೆ ಎನ್ನುವುದನ್ನು ತೋರಿಸಿದೆ.

ಮೇ ತಿಂಗಳ ಆರಂಭದಲ್ಲಿ ಕೊಲಂಬಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ದಾಳಿ ಸೇರಿದಂತೆ ಗಾಝಾದ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ನಡೆದ ಪ್ರತಿಭಟನೆಗಳಲ್ಲಿ ಅಮೆರಿಕದ ಪೊಲೀಸರು ನೂರಾರು ಮಂದಿಯನ್ನು ಬಂಧಿಸಿದ್ದಾರೆ.

ಶನಿವಾರ ನೂರಾರು ಜನರ ಗುಂಪು ವಾಷಿಂಗ್ಟನ್‌ನಲ್ಲಿ ಮಳೆಯ ಮಧ್ಯೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಅಮೇರಿಕನ್ನರು ಮತ್ತು ಅವರು ಬೆಂಬಲಿಗರಾಗಿದ್ದರು. ಅವರು ‘ಫ್ರೀ ಪ್ಯಾಲೆಸ್ತೀನ್‌’ ಎಂದು ಘೋಷಣೆ ಕೂಗುತ್ತಿದ್ದರು ಮತ್ತು ಯುಎಸ್ ಅಧ್ಯಕ್ಷ ಜೋ ಬಿಡೆನ್ ನರಮೇಧದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಘೋಷಣೆ ಕೂಗಿದ್ದಾರೆ.

ಅಮೆರಿಕನ್ ಮುಸ್ಲಿಂ ಫಾರ್ ಪ್ಯಾಲೆಸ್ತೀನ್‌ (AMP) ಸಂಘಟನೆಯ ಸದಸ್ಯ ಮೊಹಮದ್ ಹಬೆಹ್ ಮಾತನಾಡಿ, ನಾವು ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಜನರಿಗೆ ಅರಿವು ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಕಳೆದ 8 ತಿಂಗಳಿನಿಂದ ಗಾಝಾ ಮೇಲೆ ಆಕ್ರಮಣವನ್ನು ನಡೆಸುತ್ತಿದೆ. 35,000ಕ್ಕೂ ಅಧಿಕ ಮಂದಿ ಈ ವೇಳೆ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿ ರಫಾದ ನಿರಾಶ್ರಿತರ ಶಿಬಿರದಲ್ಲಿ ದಿನದೂಡುತ್ತಿದ್ದರು. ಆದರೆ ಇದೀಗ ಇಸ್ರೇಲ್‌ ರಫಾದ ಮೇಲೆ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಕಳೆದ ವಾರ ಇಸ್ರೇಲ್ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ ಸುಮಾರು 8,00,000 ಪ್ಯಾಲೆಸ್ತೀನಿಯನ್ನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ನಿರಾಶ್ರಿತರಿಗಾಗಿ ನೆರವು ನೀಡುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

ಶನಿವಾರ ಗಾಝಾದಾದ್ಯಂತ ಇಸ್ರೇಲ್‌ ತನ್ನ ಆಕ್ರಮಣವನ್ನು ತೀವ್ರವಾಗಿ ಮುಂದುವರಿಸಿತ್ತು. ರಫಾ ಸೇರಿದಂತೆ ವಿವಿಧೆಡೆ ಇಸ್ರೇಲ್‌ ನಡೆಸಿದ ದಾಳಿಗೆ 12ಕ್ಕೂ ಅಧಿಕ ನಾಗರಿಕರ ಹತ್ಯೆ ನಡೆದಿದೆ. ಕಳೆದ 24 ಗಂಟೆಗಳಲ್ಲಿ 83 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...