Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಮೇಲೆ ಅಮೆರಿಕ ಪೊಲೀಸರಿಂದ ದೌರ್ಜನ್ಯ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಹತ್ಯಾಕಾಂಡವನ್ನು ಮುಂದುವರಿಸಿದ್ದು, ಇದನ್ನು ಖಂಡಿಸಿ ಅಮೆರಿಕದಲ್ಲಿ ಹಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರನ್ನು ಥಳಿಸಿ ಪೊಲೀಸರು ದೌರ್ಜನ್ಯ ನಡೆಸಿರುವ ಬಗ್ಗೆ ಅಲ್‌ಜಝೀರಾ ವರದಿ ಮಾಡಿದೆ.

ಗಾಝಾದಲ್ಲಿ ಹತ್ಯಾಕಾಂಡವನ್ನು ನಡೆಸಲು ಅಮೆರಿಕ ಇಸ್ರೇಲ್‌ಗೆ ಬೆನ್ನಿಗೆ ನಿಂತಿತ್ತು. ಇದನ್ನು ಅಮೆರಿಕದ ನಾಗರಿಕರು ವಿರೋಧಿಸುತ್ತಲೇ ಬಂದಿದ್ದರು, ಇಸ್ರೇಲ್‌ಗೆ ಯಾವುದೇ ಯುದ್ಧ ನೆರವನ್ನು ನೀಡದಂತೆ ಆಗ್ರಹಿಸಿದ್ದರು. ಆದರೆ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳ ಸಾಗಣೆಯನ್ನು ಅಮೆರಿಕ ನಿಲ್ಲಿಸಿಲ್ಲ. ಅಂತರಾಷ್ಟ್ರೀಯ ಖಂಡನೆಗಳ ಹೊರತಾಗಿಯೂ ಟ್ಯಾಂಕ್ ಶೆಲ್‌ಗಳನ್ನು ಒಳಗೊಂಡಂತೆ ಹೊಸ 1 ಬಿಲಿಯನ್ ಪ್ಯಾಕೇಜ್‌ನ್ನು ಅಮೆರಿಕ ಮುಂದುವರಿಸಿದೆ.

ಅಮೆರಿಕದ ನೈರುತ್ಯ ಬ್ರೂಕ್ಲಿನ್‌ನ ಬೇ ರಿಡ್ಜ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದರು. ನೈರುತ್ಯ ಬ್ರೂಕ್ಲಿನ್‌ ಪ್ಯಾಲೆಸ್ತೀನಿಯನ್ನರು ಮತ್ತು ಯೆಮೆನ್ ಮೂಲದ ಜನರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು ವಾಸಿಸುವ ನೆಲೆಯಾಗಿದೆ. ಪ್ರತಿಭಟನಕಾರರು ಬೀದಿಯಲ್ಲಿ ಮೆರವಣಿಗೆ ಮಾಡಿದ್ದು, ಈ ವೇಳೆ ನ್ಯೂಯಾರ್ಕ್ ಪೊಲೀಸರು ಬಂದು ಪ್ರತಿಭಟನಾಕಾರರನ್ನು ಥಳಿಸಿ ಬಂಧಿಸಿದ್ದಾರೆ. ಪ್ರತಿಭಟನಾಕಾರರನ್ನು ನೆಲಕ್ಕೆ ತಳ್ಳಿ ತಲೆಗೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಸ್ವತಂತ್ರ ಪತ್ರಕರ್ತರಾದ ಕೇಟೀ ಸ್ಮಿತ್ ತಿಳಿಸಿದ್ದಾರೆ.

ಸ್ಮಿತ್ ಸ್ಥಳೀಯ ಸಮುದಾಯದ ಪ್ರತಿಕ್ರಿಯೆಯನ್ನು “ಆಕ್ರೋಶ’ ಎಂದು ಬಣ್ಣಿಸಿದ್ದಾರೆ. ಬೇ ರಿಡ್ಜ್ ಪ್ರದೇಶ ಒಂದು ದಶಕದಿಂದ ಪ್ಯಾಲೆಸ್ತೀನ್‌ ಪರ ಮೆರವಣಿಗೆಗಳನ್ನು ನೋಡಿದೆ, ಆದರೆ ಪೊಲೀಸ್ ಈ ರೀತಿ ಎಂದಿಗೂ ಕ್ರೂರವಾಗಿ ನಡೆದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.

ನೂರಾರು ಜನರ ಗುಂಪಿನಿಂದ ಕನಿಷ್ಠ ಹನ್ನೆರಡು ಮಂದಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಈ ಕುರಿತ ವೈರಲ್‌ ವಿಡಿಯೋಗಳು  ಪ್ರತಿಭಟನಾಕಾರರನ್ನು ಪೊಲೀಸರು ಎಳೆದುಕೊಂಡು ಹೋಗುವುದನ್ನು ತೋರಿಸಿದೆ. ಅವರಿಗೆ ಕೈಗೆ ಸಂಕೋಲೆಗಳನ್ನು ಹಾಕಲಾಗಿದೆ ಎನ್ನುವುದನ್ನು ತೋರಿಸಿದೆ.

ಮೇ ತಿಂಗಳ ಆರಂಭದಲ್ಲಿ ಕೊಲಂಬಿಯಾ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ದಾಳಿ ಸೇರಿದಂತೆ ಗಾಝಾದ ಮೇಲಿನ ಯುದ್ಧವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿ ನಡೆದ ಪ್ರತಿಭಟನೆಗಳಲ್ಲಿ ಅಮೆರಿಕದ ಪೊಲೀಸರು ನೂರಾರು ಮಂದಿಯನ್ನು ಬಂಧಿಸಿದ್ದಾರೆ.

ಶನಿವಾರ ನೂರಾರು ಜನರ ಗುಂಪು ವಾಷಿಂಗ್ಟನ್‌ನಲ್ಲಿ ಮಳೆಯ ಮಧ್ಯೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಅಮೇರಿಕನ್ನರು ಮತ್ತು ಅವರು ಬೆಂಬಲಿಗರಾಗಿದ್ದರು. ಅವರು ‘ಫ್ರೀ ಪ್ಯಾಲೆಸ್ತೀನ್‌’ ಎಂದು ಘೋಷಣೆ ಕೂಗುತ್ತಿದ್ದರು ಮತ್ತು ಯುಎಸ್ ಅಧ್ಯಕ್ಷ ಜೋ ಬಿಡೆನ್ ನರಮೇಧದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಘೋಷಣೆ ಕೂಗಿದ್ದಾರೆ.

ಅಮೆರಿಕನ್ ಮುಸ್ಲಿಂ ಫಾರ್ ಪ್ಯಾಲೆಸ್ತೀನ್‌ (AMP) ಸಂಘಟನೆಯ ಸದಸ್ಯ ಮೊಹಮದ್ ಹಬೆಹ್ ಮಾತನಾಡಿ, ನಾವು ಇಸ್ರೇಲ್-ಪ್ಯಾಲೆಸ್ತೀನ್‌ ಸಂಘರ್ಷದ ಬಗ್ಗೆ ಜನರಿಗೆ ಅರಿವು ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಇಸ್ರೇಲ್‌ ಕಳೆದ 8 ತಿಂಗಳಿನಿಂದ ಗಾಝಾ ಮೇಲೆ ಆಕ್ರಮಣವನ್ನು ನಡೆಸುತ್ತಿದೆ. 35,000ಕ್ಕೂ ಅಧಿಕ ಮಂದಿ ಈ ವೇಳೆ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿ ರಫಾದ ನಿರಾಶ್ರಿತರ ಶಿಬಿರದಲ್ಲಿ ದಿನದೂಡುತ್ತಿದ್ದರು. ಆದರೆ ಇದೀಗ ಇಸ್ರೇಲ್‌ ರಫಾದ ಮೇಲೆ ತನ್ನ ಆಕ್ರಮಣವನ್ನು ಮುಂದುವರಿಸಿದೆ. ಕಳೆದ ವಾರ ಇಸ್ರೇಲ್ ದಕ್ಷಿಣ ಗಾಝಾ ನಗರವಾದ ರಫಾ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ ಸುಮಾರು 8,00,000 ಪ್ಯಾಲೆಸ್ತೀನಿಯನ್ನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಪ್ಯಾಲೆಸ್ತೀನಿಯನ್ ನಿರಾಶ್ರಿತರಿಗಾಗಿ ನೆರವು ನೀಡುತ್ತಿರುವ ವಿಶ್ವಸಂಸ್ಥೆಯ ಏಜೆನ್ಸಿಯ ಮುಖ್ಯಸ್ಥ ಫಿಲಿಪ್ ಲಝಾರಿನಿ ಹೇಳಿದ್ದಾರೆ.

ಶನಿವಾರ ಗಾಝಾದಾದ್ಯಂತ ಇಸ್ರೇಲ್‌ ತನ್ನ ಆಕ್ರಮಣವನ್ನು ತೀವ್ರವಾಗಿ ಮುಂದುವರಿಸಿತ್ತು. ರಫಾ ಸೇರಿದಂತೆ ವಿವಿಧೆಡೆ ಇಸ್ರೇಲ್‌ ನಡೆಸಿದ ದಾಳಿಗೆ 12ಕ್ಕೂ ಅಧಿಕ ನಾಗರಿಕರ ಹತ್ಯೆ ನಡೆದಿದೆ. ಕಳೆದ 24 ಗಂಟೆಗಳಲ್ಲಿ 83 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ ಎಂದು ಗಾಝಾದ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...