Homeಮುಖಪುಟಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

ಅಕ್ರಮ ಕಲ್ಲುಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಮುಖಂಡನ ಬಂಧನ; ಪೊಲೀಸರಿಗೆ ಧಮಕಿ ಹಾಕಿದ ಶಾಸಕ ಪೂಂಜಾ?

- Advertisement -
- Advertisement -

ಅಕ್ರಮ ಕಲ್ಲು ಗಣಿಕಾರಿಕೆ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಸೇರಿದಂತೆ, ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದು, ಶಾಸಕ ಹರೀಶ್ ಪೂಂಜಾ ತಮ್ಮ ಬೆಂಬಲಿಗರೊಂದಿಗೆ ಶನಿವಾರ ರಾತ್ರಿ ಬೆಳ್ತಂಗಡಿ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕಿದ್ದು, ಆ ವಿಡಿಯಿವನ್ನು ಕಾಂಗ್ರೆಸ್‌ ಹಂಚಿಕೊಂಡಿದೆ.

“ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಲು ಬಿಜೆಪಿ ಹಲವು ಪ್ರಯತ್ನಗಳನ್ನು ನಡೆಸುತ್ತಿದೆ.
ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸ್ ಅಧಿಕಾರಿಗಳಿಗೆ ಧಮಕಿ ಹಾಕುವ ಮೂಲಕ ಬಿಜೆಪಿಗರು ಎಂದಿಗೂ ಕ್ರಿಮಿನಲ್ ಗಳ ರಕ್ಷಕರು ಎಂಬುದನ್ನು ಸಾಬೀತು ಮಾಡಿದ್ದಾರೆ.
ಪೊಲೀಸರ ನೈತಿಕ ಸ್ಥೈರ್ಯವನ್ನು ಕಸಿಯುತ್ತ, ಕ್ರಿಮಿನಲ್ ಗಳಿಗೆ ಬೆಂಬಲ ನೀಡುತ್ತ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಬಿಜೆಪಿ ಕೆಲಸಗಳಿಗೆ ಕಡಿವಾಣ ಹಾಕುವುದಕ್ಕೆ ನಮ್ಮ ಸರ್ಕಾರ ಸಮರ್ಥವಾಗಿದೆ” ಎಂದು ಕಾಂಗ್ರೆಸ್ ತನ್ನ ಸಾಮಾಜಿಕ ಜಾಲತಾಣ ಖಾತೆಗಳನ್ನು ಪೋಸ್ಟ್‌ ಮಾಡಿದೆ.

ತಾಲ್ಲೂಕಿನ ಮೆಲಂತಬೆಟ್ಟು ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರೆಗೆ ಶನಿವಾರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಪೊಲೀಸರ ತಂಡ ಜಂಟಿ ದಾಳಿ ನಡೆಸಿ, ಕಲ್ಲು ಕ್ವಾರಿಯಲ್ಲಿನ ಸ್ಫೋಟಕಗಳು ವಶಪಡಿಕೊಂಡಿದ್ದರು. ಜೊತೆಗೆ, ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದರು. ಬಿಜೆಪಿ ತಾಲ್ಲೂಕು ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಈ ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ತಮ್ಮ ಪಕ್ಷದ ಕಾರ್ಯಕರ್ತನನ್ನು ಬಂಧಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ, ಠಾಣೆಗೆ ಧಾವಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತಮ್ಮ ಬೆಂಬಲಿಗರೊಂದಿಗೆ ಪೊಲೀಸ್ ಠಾಣೆಯಲ್ಲೇ ಪ್ರತಿಭಟನೆ ನಡೆಸುವ ನೆಪದಲ್ಲಿ ಪೊಲೀಸರು ಧಮಕಿ ಹಾಕಿದ್ದಾರೆ. ಅಕ್ರಮ ಕಲ್ಲು ಕ್ವಾರಿ ನಡೆಸುತ್ತಿದ್ದ ಆರೋಪ ಹೊತ್ತಿರುವ ಬಂಧಿತ ಶಶಿರಾಜ್ ಶೆಟ್ಟಿಯನ್ನು ಬಿಡುಗಡೆ ಮಾಡುವಂತೆ ಧಮಕಿ ಹಾಕಿದ್ದಾರೆ ಎನ್ನಲಾಗಿದೆ.

ಮೇಲಂತಬೆಟ್ಟು ಮೂಡಲ ನಿವಾಸಿ ಸೂರಪ್ಪ ಪೂಜಾರಿ ಎಂಬವರ ಜಾಗದಲ್ಲಿ ಈ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಬಿಜೆಪಿ ಮುಖಂಡ ಪ್ರಮೋದ್ ದಿಡುಪೆ ಹಾಗೂ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಇಬ್ಬರೂ ನಡೆಸುತ್ತಿದ್ದರೆಂದು ಹೇಳಲಾಗಿದೆ. ಈ ಕ್ವಾರಿಯನ್ನು ಯಾವುದೇ ಸೂಕ್ತ ದಾಖಲೆಗಳಿಲ್ಲದೇ ನಡೆಸಲಾಗುತ್ತಿತ್ತು ಎಂಬ ದೂರುಗಳ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು ಎನ್ನಲಾಗಿದ್ದು, ಸ್ಥಳದಲ್ಲಿದ್ದ ಶಶಿರಾಜ್‌ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ಹಿಟಾಚಿ, ಒಂದು ಕಂಪ್ರೆಸರ್ ಮೆಷಿನ್, ಒಂದು ಕಾರು ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಬೆಂಬಲಕ್ಕೆ ನಿಂತ ಸಿಟಿ ರವಿ:

ಅಕ್ರಮ ಕಲ್ಲು ಗಣಿಗಾರಿಕೆ ಆರೋಪದಲ್ಲಿ ಬಂಧಿತರಾಗಿರುವ ಆರೋಪಿ ಶಶಿರಾಜ್ ಬೆಂಬಲಿಸಿ ಮಾಜಿ ಶಾಸಕ ಸಿಟಿ ರವಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸಿನ ಆಧಾರದ ನಿನ್ನೆ ಮಧ್ಯರಾತ್ರಿ ಉಗ್ರಗಾಮಿಯನ್ನು ನಡೆಸಿಕೊಳ್ಳುವಂತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಅವರನ್ನು ಬಂಧಿಸಿದೆ. ಆಡಳಿತ ಯಂತ್ರವನ್ನು ಉಪಯೋಗಿಸಿ, ಪೊಲೀಸ್ ದೌರ್ಜನ್ಯದಿಂದ, ನಿಮ್ಮ ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ನಮ್ಮ ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ; ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ ನೈರುತ್ಯ ಮಾನ್ಸೂನ್; ಮೇ 31ರ ವೇಳೆಗೆ ಕೇರಳ ತಲುಪುವ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...