Homeಮುಖಪುಟ'ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ': ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನದಿಂದ ಬಿಡುಗಡೆಗೊಂಡಿದ್ದರೂ, ಇತರ ಪ್ರಕರಣಗಳಲ್ಲಿ ಸಿಲುಕಿಸಲ್ಪಟ್ಟಿರುವ ಹಲವರ ಭವಿಷ್ಯ ಈಗಲೂ ಅನಿಶ್ಚಿತವಾಗಿರುವುದರ ಬಗ್ಗೆ ನನಗೆ ದುಃಖವಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಾಖಾ ಹೇಳಿದ್ದಾರೆ.

ವಿಚಾರಣಾಧೀನ ಕೈದಿಗಳಾಗಿ ನಮ್ಮ ಜೀವನದ ಅಮೂಲ್ಯವಾದ ವರ್ಷಗಳನ್ನು ಕಸಿದುಕೊಳ್ಳಲಾಗಿದೆ, ಈ ವಿಚಾರಣೆಯು ಮುಕ್ತಾಯಗೊಳ್ಳಲು ಹಲವಾರು ವರ್ಷಗಳನ್ನೇ ತೆಗೆದುಕೊಳ್ಳಲಿದೆ ಎಂದು ಬಿಡುಗಡೆ ಕುರಿತು ಬರೆದ ಪತ್ರದಲ್ಲಿ ಗೌತಮ್ ನವಲಾಖಾ ಹೇಳಿದ್ದಾರೆ.

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಮೇ 14ರಂದು ಸುಪ್ರೀಂ ಕೋರ್ಟ್ ಗೌತಮ್ ನವಲಾಖಾಗೆ ಜಾಮೀನು ಮಂಜೂರು ಮಾಡಿದೆ. ಗೃಹಬಂಧನದ ಸಮಯದಲ್ಲಿ ಅವರ ಭದ್ರತೆಯ ವೆಚ್ಚದ 20 ಲಕ್ಷ ರೂ.ಪಾವತಿ ಷರತ್ತಿನ ಬಳಿಕ ಅವರನ್ನು ಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಇದು ದೀರ್ಘ ಕಾಯುವಿಕೆಯಾಗಿತ್ತು ಮತ್ತು ಅನಿವಾರ್ಯವಾಗಿತ್ತು ಎಂದು ನವ್ಲಾಖಾ ಬರೆದಿದ್ದಾರೆ. ವಿಚಾರಣಾಧೀನ ಕೈದಿಗಳ ಕುಟುಂಬಗಳು ತಮ್ಮ ಪ್ರೀತಿಪಾತ್ರರಿಂದ ದೂರವಾಗಿ ನೋವನ್ನು ಅನುಭವಿಸುತ್ತಾರೆ ಮತ್ತು ಅವರ ಬದುಕು ಅಸ್ತವ್ಯಸ್ತಗೊಳುತ್ತದೆ. ಇದು ಅಪರೂಪಕ್ಕೆ ಒಪ್ಪಿಕೊಳ್ಳಲಾಗಿರುವ ಕಟು ವಾಸ್ತವವಾಗಿದೆ. ಪ್ರಜಾಪ್ರಭುತ್ವದ ಹಕ್ಕುಗಳ ಕಾರ್ಯಕರ್ತನಾಗಿ ನನಗೆ ನ್ಯಾಯವು ದೂರದ ಕನಸಾಗಿ ಗೋಚರಿಸುತ್ತದೆ. ಅತಿಯಾದ ಹೊರೆಯು ನ್ಯಾಯಾಂಗದ ತ್ವರಿತ, ನ್ಯಾಯೋಚಿತ ವಿಚಾರಣೆಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ. ಒಂದೇ ದಿನದ ಸ್ವಾತಂತ್ರ್ಯ ಹರಣವೂ ಅತಿ ಹೆಚ್ಚು ಎಂಬ ಉದಾತ್ತ ಹೇಳಿಕೆಯನ್ನು ನ್ಯಾಯಾಂಗವು ನೀಡಬಹುದು ಎಂದು ಓರ್ವ ಕೈದಿಯಾಗಿ ನಾನು ಆಗಾಗ್ಗೆ ಆಶಿಸುತ್ತಿದ್ದೆ. ಏಕೆಂದರೆ ಇಂತಹ ಹೇಳಿಕೆ ವಿಚಾರಣಾಧೀನ ಕೈದಿಗಳಿಗೆ ಭರವಸೆಯ ಆಶಾಕಿರಣವಾಗುತ್ತಿತ್ತು ಎಂದು ಬರೆದಿದ್ದಾರೆ.

ಸ್ವತಂತ್ರವಾಗಲು ಮತ್ತು ಅಂತಿಮವಾಗಿ ನನ್ನ ಕುಟುಂಬವನ್ನು ಮತ್ತು ಆತ್ಮೀಯರನ್ನು ಭೇಟಿಯಾಗಲು ನಾನು ಸಂತೋಷಪಡುತ್ತಿರುವಾಗ, ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ನರಳುತ್ತಿದ್ದಾರೆ ಎಂಬ ದುಃಖವಿದೆ ಎಂದು ಗೌತಮ್ ನವಲಾಖಾ  ಹೇಳಿದ್ದಾರೆ.

ಜನವರಿ 2018ರಲ್ಲಿ ಪುಣೆ ಬಳಿಯ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಆರೋಪ ಹೊರಿಸಿ ಬಂಧಿಸಲಾದ 16 ಶಿಕ್ಷಣ ತಜ್ಞರು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ವಕೀಲರಲ್ಲಿ 70 ವರ್ಷದ ಗೌತಮ್ ನವಲಾಖಾ ಕೂಡ ಸೇರಿದ್ದರು.

ಗೌತಮ್ ನವಲಾಖಾ ಅವರನ್ನು 2018ರಲ್ಲಿ ಬಂಧಿಸಲಾಗಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಕಾರಣದಿಂದ ಅವರನ್ನು ಜೈಲಿನಿಂದ ಸ್ಥಳಾಂತರಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದ ನಂತರ ಅವರನ್ನು ನವೆಂಬರ್ 2022 ರಲ್ಲಿ ಗೃಹಬಂಧನದಲ್ಲಿ ಇರಿಸಲಾಯಿತು.

ಡಿಸೆಂಬರ್‌ನಲ್ಲಿ ಭಯೋತ್ಪಾದನಾ-ವಿರೋಧಿ ಕಾನೂನಿನಿಂದ ವ್ಯಾಖ್ಯಾನಿಸಲಾದ ಭಯೋತ್ಪಾದಕ ಕೃತ್ಯವನ್ನು ಅವರು ಎಸಗಿದ್ದಾರೆ ಎಂಬುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಬಾಂಬೆ ಹೈಕೋರ್ಟ್ ನವಲಾಖಾ ಅವರಿಗೆ ಜಾಮೀನು ನೀಡಿತ್ತು. ಆದರೆ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಜಾಮೀನು ಆದೇಶಕ್ಕೆ ತಡೆ ನೀಡಿತ್ತು.

ಇದನ್ನು ಓದಿ: ಎಲ್ಗಾರ್ ಪರಿಷತ್ ಪ್ರಕರಣ: ಗೌತಮ್ ನವ್ಲಾಖಾ ಬಿಡುಗಡೆ; ಇನ್ನೆಷ್ಟು ಮಂದಿ ಜೈಲಿನಲ್ಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...