Homeಕರ್ನಾಟಕದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

- Advertisement -
- Advertisement -

ದಲಿತ-ಬಂಡಾಯ ಕವಿ, ಸಂಶೋಧಕ, ವಿಮರ್ಶಕ, ಸಂಘಟನಾಕಾರ, ಅನುವಾದಕಾರ ಲಕ್ಕೂರು ಆನಂದ ಅವರು ಮೇ 20ರಂದು ನಿಧನ ಹೊಂದಿದ್ದಾರೆ.

44ರ ಹರೆಯದ ಲಕ್ಕೂರು ಸಿ. ಆನಂದ ಅವರು ಮೂಲತಃ ಕೋಲಾರ ಜಿಲ್ಲೆಯ ಲಕ್ಕೂರಿನವರು. ದಲಿತ- ಬಂಡಾಯ ಕಾವ್ಯ ಮಾರ್ಗದ ಮೂರನೇ ತಲೆಮಾರಿನವರಾಗಿದ್ದಾರೆ. ಕವಿ, ವಿಮರ್ಶಕ, ಅನುವಾದಕರಾಗಿಯೂ ಗುರುತಿಸಿಕೊಂಡಿರುವ ಆನಂದ ಅವರ ಮಾತೃಭಾಷೆ ತೆಲುಗು. ಇವರು ಕೆಂಗೇರಿ ಶೇಷಾದ್ರಿಪುರಂ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ವಿಸಾಜಿ ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದರು.
ಲಕ್ಕೂರು ಆನಂದ ಅವರು ಇದುವರೆಗೆ ಐದು ಕವನ ಸಂಕಲನ, ಐದು ಅನುವಾದಿತ ಕೃತಿಗಳು ಹಾಗೂ ಒಂದು ಸಂಶೋಧನಾ ಗ್ರಂಥವನ್ನು ಹೊರತಂದಿದ್ದಾರೆ. ಮಾತಂಗ ಮಾದಿಗರ ಸಂಸ್ಕೃತಿಯ ಬಗ್ಗೆ ಆನಂದ ಅವರು ಆಳವಾದ ಅಧ್ಯಯನ ನಡೆಸಿದ್ದಾರೆ. ಇತ್ತೀಚೆಗೆ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದವಾದ ರಾಣಿ ಶಿವ ಶಂಕರ ಶರ್ಮರ ‘ಕೊನೆಯ ಬ್ರಾಹ್ಮಣ’ ಕೃತಿ ಇದೀಗ ಅಭಿನವ ಪ್ರಕಾಶನದಿಂದ ಕನ್ನಡದಲ್ಲಿ ಪ್ರಕಟವಾಗಿದೆ. ಲಕ್ಕೂರು ಆನಂದ ಅವರೇ ತೆಲುಗು ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಿದ್ದಾರೆ.

ಲಕ್ಕೂರು ಆನಂದ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ, ಆಂಧ್ರದ ಶ್ರೀ ಶ್ರೀ ಕಾವ್ಯ, ದೆಹಲಿಯ ದಲಿತ ಸಾಹಿತ್ಯ ಪರಿಷತ್ತು ಪ್ರಶಸ್ತಿ, ದು ನಿಂ ಬೆಳಗಲಿ ಪ್ರಶಸ್ತಿ, ವಿಭಾ ಸಾಹಿತ್ಯ ಪ್ರಶಸ್ತಿ, ಕಡೆಂಗೋಡ್ಲು ಶಂಕರಭಟ್ಟ ಪ್ರಶಸ್ತಿ, ಡಾ ತಿಪ್ಪೇರುದ್ರ ಸ್ವಾಮಿ ಪ್ರಶಸ್ತಿ ಲಭಿಸಿದೆ. ತಮಗೆ ಬಂದ ಪ್ರಶಸ್ತಿಗಳನ್ನು ಅವರು, ‘ರಾಜ್ಯದ ಎಲ್ಲಾ ದಮನಿತ ಸಮುದಾಯಗಳಿಗೆ’ ಅರ್ಪಿಸಿದ್ದಾರೆ.

ಊರಿಂದ ಊರಿಗೆ, ಇಪ್ಪತ್ತರ ಕಲ್ಲಿನ ಮೇಲೆ, ಬಟವಾಡೆಯಾಗದ ರಸೀತಿ, ಇತಿ ನಿನ್ನ ವಿಧೇಯನು, ಉರಿವ ಏಕಾಂತ ದೀಪ ಇವರ ಕವನ ಸಂಕಲನಗಳು. ಸ್ಮೃತಿ ಕಿಣಾನ್ತಂ, ಕೊನೆ ಬ್ರಾಹ್ಮಣ, ಆಕಾಶ ದೇವರ, ನಗ್ನ ಮುನಿಯ ಸಮಗ್ರ ಕಥೆಗಳು, ಅರುದ್ರ ಇವರ ಅನುವಾದಿತ ಕೃತಿಗಳು.

ಗುಲ್ಬರ್ಗ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕ ವಿಕ್ರಮ್‌ ವಿಸಾಜಿ ಘಟನೆ ಬಗ್ಗೆ ದುಃಖವನ್ನು ವ್ಯಕ್ತಪಡಿಸಿ ನಾನುಗೌರಿ.ಕಾಂ ಜೊತೆ ಮಾತನಾಡಿದ್ದು, ಲಕ್ಕೂರು ಆನಂದ ಅವರು ಗುಲ್ಬರ್ಗ ವಿವಿಯಲ್ಲಿ ಡಾ. ವಿಜಯ್‌ ಕುಮಾರ್‌ ಅವರ ಅಧೀನದಲ್ಲಿ ಪಿಹೆಚ್‌ಡಿ ಮಾಡುತ್ತಿದ್ದರು. ನಾವು ಘಟನಾ ಸ್ಥಳಕ್ಕೆ ತೆರಳಿದ್ದೆವು, ಮೃತದೇಹವನ್ನು ಇದೀಗ ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ. ಅವರು ಉತ್ತಮ ಕವಿ, ಉತ್ತಮ ಅನುವಾದಕ ಮತ್ತು ಅಮೋಘ ಪ್ರತಿಭೆಯನ್ನು ಹೊಂದಿದ್ದರು. ತೆಲಗು ಕವಿ ಚಲಂ ಅವರ ಪತ್ರಗಳನ್ನು ಉತ್ತಮವಾಗಿ ಅನುವಾದ ಮಾಡಿದ್ದರು, ಬಹಳ ಆತ್ಮೀಯರಾಗಿದ್ದರು, ಅವರ ಅಗಲಿಕೆಯಿಂದ ಅಪಾರ ನೋವು ಉಂಟಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಇತರರು ಇನ್ನೂ ಅನಿಶ್ಚಿತತೆಯ ಜೀವನದಲ್ಲಿ ಬಳಲುತ್ತಿದ್ದಾರೆ’: ಬಿಡುಗಡೆ ಬಳಿಕ ದುಃಖ ವ್ಯಕ್ತಪಡಿಸಿದ ಗೌತಮ್ ನವಲಾಖಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...