Homeಅಂತರಾಷ್ಟ್ರೀಯಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮೊಖ್ಬರ್ ಯಾರು?

ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮೊಖ್ಬರ್ ಯಾರು?

- Advertisement -
- Advertisement -

ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತಪಟ್ಟ ಬೆನ್ನಲ್ಲಿ ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ 68 ವರ್ಷದ ಮೊಹಮ್ಮದ್ ಮೊಖ್ಬರ್ ಅವರನ್ನು ನೇಮಿಸಲಾಗಿದೆ. ಮೊಖ್ಬರ್, ಇರಾನ್‌ನ ಮೊದಲ ಉಪಾಧ್ಯಕ್ಷರಾಗಿದ್ದಾರೆ. ಇವರು ಈಗ 50 ದಿನಗಳಲ್ಲಿ ಹೊಸ ಅಧ್ಯಕ್ಷೀಯ ಚುನಾವಣೆಯನ್ನು ಆಯೋಜಿಸುವ ಜವಾಬ್ದಾರಿಯನ್ನು ಹೊಂದಿರುವ ಮೂವರ ಮಂಡಳಿಯನ್ನು ಮುನ್ನಡೆಸುತ್ತಿದ್ದಾರೆ.

ಇರಾನ್‌ನ ಹಂಗಾಮಿ ಅಧ್ಯಕ್ಷ ಮೊಹಮ್ಮದ್ ಮೊಖ್ಬರ್, ಸಂಸತ್ತಿನ ಸ್ಪೀಕರ್ ಮತ್ತು ನ್ಯಾಯಾಂಗದ ಮುಖ್ಯಸ್ಥರು ಮೂವರು ವ್ಯಕ್ತಿಗಳ ಸದಸ್ಯತ್ವದ ಮಂಡಳಿಯ ಭಾಗವಾಗಿದ್ದಾರೆ. ಸಮಿತಿಯು ಅಧ್ಯಕ್ಷರ ಮರಣದ 50 ದಿನಗಳಲ್ಲಿ ಹೊಸ ಅಧ್ಯಕ್ಷೀಯ ಚುನಾವಣೆಯನ್ನು ಆಯೋಜಿಸಲಿದೆ.

1955ರ ಸೆ.1ರಂದು ಜನಿಸಿದ ಮೋಖ್ಬರ್, ರೈಸಿಯಂತೆಯೇ ಇರಾನ್‌ನ ಸುಪ್ರೀಂ ಲೀಡರ್ ಅಲಿ ಖಮೇನಿ ಅವರ ನಿಕಟವರ್ತಿಯಾಗಿದ್ದಾರೆ. 2021ರಲ್ಲಿ ರೈಸಿ ಇರಾನ್‌ನ ಅಧ್ಯಕ್ಷರಾಗಿ ಆಯ್ಕೆಯಾದಾಗ ಮೊಖ್ಬರ್ ಮೊದಲ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಮೊಖ್ಬರ್ ಅಕ್ಟೋಬರ್‌ನಲ್ಲಿ ಮಾಸ್ಕೋಗೆ ಭೇಟಿ ನೀಡಿದ ಇರಾನ್ ಅಧಿಕಾರಿಗಳ ತಂಡದ ಭಾಗವಾಗಿದ್ದರು ಮತ್ತು ರಷ್ಯಾದ ಮಿಲಿಟರಿಗೆ ಕ್ಷಿಪಣಿಗಳು ಮತ್ತು ಹೆಚ್ಚಿನ ಡ್ರೋನ್‌ಗಳನ್ನು ಪೂರೈಸಲು ಒಪ್ಪಿಕೊಂಡ ಸಮಿತಿಯ ಭಾಗವಾಗಿದ್ದರು. ತಂಡದಲ್ಲಿ ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್‌ನ ಇಬ್ಬರು ಹಿರಿಯ ಅಧಿಕಾರಿಗಳು ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ ಅಧಿಕಾರಿಯೂ ಇದ್ದರು.

ಮೊಖ್ಬರ್ ಈ ಹಿಂದೆ ಸರ್ವೋಚ್ಚ ನಾಯಕನಿಗೆ ಸಂಬಂಧಿಸಿರುವ ಹೂಡಿಕೆ ನಿಧಿಯಾದ ಸೆಟಾಡ್‌ನ ಮುಖ್ಯಸ್ಥರಾಗಿದ್ದರು. 2010ರಲ್ಲಿ ಯುರೋಪಿಯನ್ ಒಕ್ಕೂಟವು “ಪರಮಾಣು ಅಥವಾ ಬ್ಯಾಲಿಸ್ಟಿಕ್ ಕ್ಷಿಪಣಿ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿದ್ದಕ್ಕಾಗಿ ಮೊಖ್ಬರ್‌ನ್ನು ತನ್ನ ಪಟ್ಟಿಯಲ್ಲಿ ಸೇರಿಸಿತ್ತು. ಇದಾದ ಎರಡು ವರ್ಷಗಳ ನಂತರ ಅವರನ್ನು ಪಟ್ಟಿಯಿಂದ ಕೈಬಿಡಲಾಗಿತ್ತು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ನಿನ್ನೆ ಪತನವಾಗಿತ್ತು. ಆದರೆ ಹೆಲಿಕಾಪ್ಟರ್‌ನಲ್ಲಿದ್ದವರ ಸ್ಥಿತಿ ಏನಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ದುರಂತದಲ್ಲಿ ಮೃತಪಟ್ಟಿರುವ ಆಘಾತಕಾರಿ ಸುದ್ದಿಯನ್ನು ಇರಾನ್‌ನ ಅಧಿಕಾರಿಗಳು ಇಂದು ಬಹಿರಂಗಗೊಳಿಸಿದ್ದಾರೆ.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ತಿಳಿಸಿದ್ದಾರೆ.

ಇರಾನ್‌ನ ಮೆಹರ್ ಸುದ್ದಿ ಸಂಸ್ಥೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಸಾವನ್ನು ದೃಢಪಡಿಸಿದೆ. ಇರಾನ್ ಅಧ್ಯಕ್ಷ ಮತ್ತು ವಿದೇಶಾಂಗ ಸಚಿವರನ್ನು ಹೊತ್ತ ಹೆಲಿಕಾಪ್ಟರ್‌ನ ಎಲ್ಲಾ ಪ್ರಯಾಣಿಕರು ಹುತಾತ್ಮರಾಗಿದ್ದಾರೆ ಎಂದು ವರದಿ ಮಾಡಿದೆ.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿದೆ. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ಇದನ್ನು ಓದಿ: ದಲಿತ-ಬಂಡಾಯ ಕವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಲಕ್ಕೂರು ಆನಂದ ನಿಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...