Homeಮುಖಪುಟಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

- Advertisement -
- Advertisement -

ಉತ್ತರಪ್ರದೇಶದ ಇಟಾಹ್ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನೋರ್ವನ ಹದಿಹರೆಯದ ಪುತ್ರನೋರ್ವ 8 ಬಾರಿ ಬಿಜೆಪಿಗೆ ಮತ ಹಾಕಿದ್ದು, ಆತನನ್ನು ವಿಡಿಯೋ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಖಿರಿಯಾ ಪಮರನ್‌ ಗ್ರಾಮದ ಅನಿಲ್‌ ಸಿಂಗ್‌ ಎಂಬವರ ಪುತ್ರ ರಾಜನ್‌ ಸಿಂಗ್‌ ಎಂದು ಗುರುತಿಸಲಾಗಿದೆ ಎಂದು ಬಂಧನದ ಕುರಿತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ನವದೀಪ್‌ ರಿನ್ವಾ ಮಾಹಿತಿ ನೀಡಿದ್ದಾರೆ. ಆರೋಪಿ ಯುವಕನ ತಂದೆ ಅನಿಲ್‌ ಸಿಂಗ್‌ ಖಿರಿ ಪಮರನ್‌ ಗ್ರಾಮ ಪ್ರಧಾನರಾಗಿದ್ದು ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದಾನೆ.

ವಿಡಿಯೋ ಆಧಾರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಇತರ ಅಪರಾಧದ ಆರೋಪದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ವಿಡಿಯೋದಲ್ಲಿ ಹದಿಹರೆಯದ ಯುವಕನೋರ್ವ ಬಿಜೆಪಿಗೆ ಎಂಟು ಬಾರಿ ಮತ ಹಾಕುವುದು ಸೆರೆಯಾಗಿತ್ತು.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪಿ ತ್ರಿಪಾಠಿ ನೀಡಿದ ದೂರಿನ ಆಧಾರದ ಮೇಲೆ ಹದಿಹರೆಯದ ಯುವಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ವೀಡಿಯೊದಲ್ಲಿ ಕಂಡುಬರುವ ಅಪ್ರಾಪ್ತ ವಯಸ್ಕನಂತೆ ಕಾಣುವ ವ್ಯಕ್ತಿಯನ್ನು ಪತ್ತೆಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ನಯಾ ಗಾಂವ್ ಎಸ್‌ಎಚ್‌ಒ ರಿತೇಶ್ ಠಾಕೂರ್ ಈ ಮೊದಲು ಹೇಳಿದ್ದರು.

ಒಬ್ಬ ವ್ಯಕ್ತಿ ಬಿಜೆಪಿಗೆ 8 ಬಾರಿ ಮತದಾನ ಮಾಡಿದ್ದಾನೆ ಎನ್ನಲಾದ ವಿಡಿಯೊವನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಈ ವಿಡಿಯೊ ನೋಡಿದರೆ ತಮ್ಮ ಸೋಲಿನಿಂದ ತಪ್ಪಿಸಿಕೊಳ್ಳಲು ಬಿಜೆಪಿ, ಜನರ ನಿರ್ಣಯವನ್ನು ಬದಿಗೊತ್ತಿ ಆಡಳಿತ ಯಂತ್ರದ ಮೇಲೆ ಒತ್ತಡ ಹಾಕಿ ಪ್ರಜಾಪ್ರಭುತ್ವದ ಲೂಟಿಗೆ ಮುಂದಾಗಿದೆ ಎಂದು ಹೇಳಿದ್ದರು.

ಆಡಳಿತದಲ್ಲಿರುವವರ ಒತ್ತಡಕ್ಕೆ ಮಣಿಯದೆ ಚುನಾವಣೆ ಸಿಬ್ಬಂದಿ ತಮ್ಮ ಸಾಂವಿಧಾನಿಕ ಕರ್ತವ್ಯ ಅರಿತು ಕೆಲಸ ಮಾಡುತ್ತಾರೆ ಎಂದು ಕಾಂಗ್ರೆಸ್ ನಂಬಿದೆ. ಇಲ್ಲವಾದರೆ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ಕೂಡಲೇ ಕರ್ತವ್ಯ ಲೋಪ ಎಸಗಿದವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಸಾಂವಿಧಾನಿಕ ಪ್ರತಿಜ್ಞೆ ಉಲ್ಲಂಘಿಸುವ ಮುನ್ನ 10 ಬಾರಿ ಯೋಚಿಸಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಫರೂಕಾಬಾದ್‌ ಕ್ಷೇತ್ರದಿದ ಬಿಜೆಪಿಯಿಂದ ಮುಕೇಶ್‌ ರಾಜಪುತ್‌ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ನಾಲ್ಕನೇ ಹಂತದಲ್ಲಿ ಮೇ 13ರಂದು ಮತದಾನ ನಡೆದಿತ್ತು. ಘಟನೆ ಬಯಲಾಗುತ್ತಿದ್ದಂತೆ ಈ ನಿರ್ದಿಷ್ಟ ಮತಗಟ್ಟೆಯಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ವಜಾಗೊಳಿಸಲು ಹಾಗೂ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಮತಗಟ್ಟೆಯಲ್ಲಿ ಮರುಮತದಾನಕ್ಕೂ ಶಿಫಾರಸು ಮಾಡಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.

ಇದನ್ನು ಓದಿ: ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮೊಖ್ಬರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...