Homeಮುಖಪುಟದೆಹಲಿ ಮೆಟ್ರೋದಲ್ಲಿ ಕೇಜ್ರಿವಾಲ್‌ಗೆ ಜೀವ ಬೆದರಿಕೆ ಬರಹ; 'ಪ್ರಧಾನಿ ಕಚೇರಿಯಲ್ಲಿ ಸಂಚು ರೂಪಿಸಲಾಗಿದೆ' ಎಂದ ಆಪ್

ದೆಹಲಿ ಮೆಟ್ರೋದಲ್ಲಿ ಕೇಜ್ರಿವಾಲ್‌ಗೆ ಜೀವ ಬೆದರಿಕೆ ಬರಹ; ‘ಪ್ರಧಾನಿ ಕಚೇರಿಯಲ್ಲಿ ಸಂಚು ರೂಪಿಸಲಾಗಿದೆ’ ಎಂದ ಆಪ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜೀವ ಬೆದರಿಕೆ ಹಾಕುವ ಬರಹವು ರಾಷ್ಟ್ರ ರಾಜಧಾನಿಯ ರಾಜೀವ್ ಚೌಕ್ ಮತ್ತು ಪಟೇಲ್ ನಗರ ಮೆಟ್ರೋ ನಿಲ್ದಾಣಗಳಲ್ಲಿ ಕಾಣಿಸಿಕೊಂಡಿದ್ದು, ಬಿಜೆಪಿ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಆರೋಪ ಹೊರಿಸಿದೆ. ‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯು ಮುಖ್ಯಮಂತ್ರಿಯ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ’ ಎಂದು ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿಯ ಸಂಚು ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ರೂಪಿಸಲಾಗಿದೆ” ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಹೊರಬಂದಾಗಿನಿಂದ ಬಿಜೆಪಿ ಭಯಭೀತವಾಗಿದೆ. ಇದೀಗ ಅರವಿಂದ್ ಕೇಜ್ರಿವಾಲ್ ಮೇಲೆ ಮಾರಣಾಂತಿಕ ದಾಳಿ ನಡೆಸಲು ಬಿಜೆಪಿ ಮುಂದಾಗಿದೆ. ಈ ಷಡ್ಯಂತ್ರವನ್ನು ನೇರವಾಗಿ ಪ್ರಧಾನ ಮಂತ್ರಿ ಕಚೇರಿಯಿಂದಲೇ ನಡೆಸಲಾಗುತ್ತಿದೆ. ರಾಜೀವ್ ಚೌಕ್ ಮತ್ತು ಪಟೇಲ್ ನಗರ್ ಮೆಟ್ರೋ ನಿಲ್ದಾಣಗಳಲ್ಲಿ ಕೇಜ್ರಿವಾಲ್ ಮೇಲೆ ದಾಳಿಯ ಬೆದರಿಕೆ ಬರೆಯಲಾಗಿದೆ” ಎಂದು ಸಂಜಯ್ ಸಿಂಗ್ ಇಂದು ಹೇಳಿದ್ದಾರೆ.

“ದೆಹಲಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯದ ಸೋಲಿನಿಂದ ಕಂಗೆಟ್ಟಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಬಿಜೆಪಿ ಸ್ವಾತಿ ಮಲಿವಾಲ್ ಅವರನ್ನು ಬಳಸಿಕೊಂಡಿದೆ” ಎಂದು ಅವರು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಜೀವಕ್ಕೆ ಅಪಾಯವಿದೆ; ರಾಜೀವ್ ಚೌಕ್, ಪಟೇಲ್ ಚೌಕ್ ಮತ್ತು ಪಟೇಲ್ ನಗರ ಎಂಬ ಮೂರು ಮೆಟ್ರೋ ನಿಲ್ದಾಣಗಳ ಗೋಡೆಗಳ ಮೇಲೆ ವ್ಯಕ್ತಿಯೊಬ್ಬ ಬರಹ ಬರೆದಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಬರಹದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಲಾಗಿದೆ. ಈ ಠಾಣೆಗಳು ಸಿಸಿಟಿವಿಗಳ ಅಡಿಯಲ್ಲಿವೆ ಮತ್ತು ಭದ್ರತಾ ಸಿಬ್ಬಂದಿಯನ್ನು ದಿನದ 24 ಗಂಟೆಗಳ ಕಾಲ ನಿಯೋಜಿಸಲಾಗಿದೆ. ಪೊಲೀಸರು ಅದರ ಬಗ್ಗೆ ಏಕೆ ಕಾರ್ಯನಿರ್ವಹಿಸುತ್ತಿಲ್ಲ? ಸೈಬರ್ ಸೆಲ್ ಎಲ್ಲಿದೆ? ಇದು ತೋರಿಸುತ್ತದೆ ಬಿಜೆಪಿಯಿಂದ ಸಂಚು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಪ್ರಧಾನಿ ಮೋದಿ ಮತ್ತು ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರನ್ನು ದ್ವೇಷಿಸುತ್ತಿದೆ, ಅವರನ್ನು ಕೊಲ್ಲಲು ಸಂಚು ನಡೆಸುತ್ತಿದೆ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ದ್ವೇಷ ಮತ್ತು ಸೇಡಿನಲ್ಲಿ ಮುಳುಗಿದ್ದಾರೆ, ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ಮಾಡುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ಕಚೇರಿ, ಬಿಜೆಪಿ ಮತ್ತು ನರೇಂದ್ರ ಮೋದಿ ಅವರಿಂದ ಏನಾದರೂ ಸಂಭವಿಸಿದರೆ ಚುನಾವಣಾ ಆಯೋಗ ಜವಾಬ್ದಾರರಾಗಿರುತ್ತಾರೆ ಎಂದು ನಾನು ಹೇಳುತ್ತೇನೆ” ಎಂದರು.

ಈ ತಿಂಗಳ ಆರಂಭದಲ್ಲಿ, ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿತು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಪಾತ್ರಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಅವರನ್ನು ಬಂಧಿಸಲಾಯಿತು.

ಕಳೆದ ವಾರ ಸ್ವಾತಿ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ; ಇವಿಎಂಗೆ ಹಾನಿ ಪ್ರಕರಣ: ಜೆಡಿಎಸ್ ಮುಖಂಡನ ವಿರುದ್ದದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...