Homeಮುಖಪುಟಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

ಬಿಜೆಪಿ ಸರ್ಕಾರದ ನೀತಿಗಳು ಅತಿ ಹೆಚ್ಚು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ: ವರದಿ

- Advertisement -
- Advertisement -

ಬಿಜೆಪಿ ಸರ್ಕಾರದ ನೀತಿಗಳು ಭಾರತದಲ್ಲಿ ಹಿಂದೆಂದೂ ಕಾಣದಷ್ಟು ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡಲು ಸಹಾಯ ಮಾಡಿದೆ ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಬಹುತ್ವ ಕರ್ನಾಟಕದ ಜಂಟಿ ವರದಿ ಬಹಿರಂಗಪಡಿಸಿದೆ.

‘ಗ್ಯಾರಂಟಿ ಚೆಕ್: ಕಳೆದ ದಶಕದಲ್ಲಿ ಭಾರತದ ಪರಿಸರದ ಸ್ಥಿತಿ – ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟು’ ಎಂಬ ಶೀರ್ಷಿಕೆಯ ವರದಿಯಲ್ಲಿ, ಕೇಂದ್ರ ಸರ್ಕಾರವು, ಪರಿಸರ ಮೌಲ್ಯಮಾಪನಗಳನ್ನು ತಪ್ಪಿಸಿದೆ ಮತ್ತು ಅಭಿವೃದ್ಧಿಯ ಅಸಮರ್ಥತೆಯನ್ನು ಎತ್ತಿ ತೋರಿಸುವ ಪರಿಸರ ಕಾರ್ಯಕರ್ತರ ಬಾಯಿ ಮುಚ್ಚಿಸಿದೆ ಎಂದು ಹೇಳಿದೆ. ವರದಿಯು ಪರಿಸರ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಭಾರತದ ಸ್ಥಾನವು ಕುಸಿದಿದೆ ಎಂದು ಹೇಳಿದೆ.

ಪರಿಸರ ಸಚಿವಾಲಯವು, ಕರಾವಳಿ ನಿಯಂತ್ರಣ ವಲಯ ಕ್ಲಿಯರೆನ್ಸ್‌, ವನ್ಯಜೀವಿ ಕ್ಲಿಯರೆನ್ಸ್‌, ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್‌ ಸೇರಿದಂತೆ 12,496 ಕ್ಲಿಯರೆನ್ಸ್‌ ನೀಡಿದೆ. ಖಾಸಗಿ ಕೈಗಾರಿಕೋದ್ಯಮಿಗಳಿಗೆ ಲಾಭ ಮಾಡಿಕೊಡಲು ಎನ್ವಿರಾನ್ಮೆಂಟ್ ಇಂಪ್ಯಾಕ್ಟ್ ಅಸೆಸ್ಮೆಂಟ್ (ಇಐಎ) ಅಧಿಸೂಚನೆ-2006, ಗಣಿ ಮತ್ತು ಖನಿಜಗಳ ಕಾಯಿದೆ- 2023 ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆ-1980ರಡಿಯಲ್ಲಿನ ಹಲವಾರು ಕಾನೂನುಗಳು ಮತ್ತು ನೀತಿಗಳನ್ನು ಬದಲಾಯಿಸಲಾಗಿದೆ ಎಂದು ವರದಿ ಹೇಳಿದೆ.

ಎನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್‌ಮೆಂಟ್ (ಇಐಎ) ಅಧಿಸೂಚನೆ-2006ಕ್ಕೆ ತಿದ್ದುಪಡಿ ಮಾಡಲಾಗಿದೆ. ಖಾಸಗಿ ಕೈಗಾರಿಕೆಗಳಿಗೆ ಅನುಕೂಲವಾಗುವ ಅನುಮತಿಗಳನ್ನು ನೀಡುವ ಮೊದಲು ಸಾರ್ವಜನಿಕ ಸಮಾಲೋಚನೆಯ ಬಗ್ಗೆ ವಿನಾಯಿತಿ ಸೇರಿದಂತೆ ಹಲವಾರು ತಿದ್ದುಪಡಿಗಳಿನ್ನು ಮಾಡಲಾಗಿದೆ ಮತ್ತು ಸಮರ್ಥನೀಯವಲ್ಲದ ಅಭಿವೃದ್ಧಿಯನ್ನು ಉತ್ತೇಜಿಸಿದೆ ಎಂದು ವರದಿ ಹೇಳಿದೆ.

ಗಣಿ ಮತ್ತು ಖನಿಜಗಳ ಕಾಯಿದೆ-2023ರ ಮೂಲಕ ಗಣಿಗಾರಿಕೆಗೆ ಖಾಸಗಿ ವಲಯಕ್ಕೆ ಪರವಾನಗಿಗಳನ್ನು ಪಡೆಯುವ ಹಾದಿ ಸರಳಗೊಳಿಸಲಾಯ್ತು. ಪೂರ್ವ ರಾಜ್ಯಗಳಾದ ಒಡಿಶಾ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ಗಳು ಗಣಿಗಾರಿಕೆಯ ಕಾರಣದಿಂದಾಗಿ ಭಾರಿ ಆಕ್ರಮಣಕ್ಕೆ ಸಾಕ್ಷಿಯಾಗಿವೆ, ಅಲ್ಲಿ ವಾಸಿಸುವ ಆದಿವಾಸಿಗಳ ಮೇಲೆ ಪರಿಣಾಮ ಬೀರಿದೆ ಮತ್ತು ನೂರಾರು ವರ್ಷಗಳ ಹಳೆಯ ಕಾಡುಗಳನ್ನು ನಾಶಪಡಿಸಲಾಗಿದೆ. 2023ರಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ-1980ಕ್ಕೆ ಮಾಡಿದ ತಿದ್ದುಪಡಿಯನ್ನು ವರದಿಯು ಉಲ್ಲೇಖಿಸಿದೆ, ಇದು ಅರಣ್ಯಗಳ ವ್ಯಾಖ್ಯಾನವನ್ನು ಬದಲಾಯಿಸಲು ಪ್ರಯತ್ನಿಸಿತು ಮತ್ತು ಈ ಹಿಂದೆ ಕಾನೂನಿನ ಅಡಿಯಲ್ಲಿ ರಕ್ಷಣೆ ನೀಡಲಾದ ಹಲವಾರು ಅರಣ್ಯ ಪ್ರದೇಶಗಳಿಗೆ ಹಾನಿಕಾರಕವಾಗಿದೆ ಎಂದು ವರದಿ ಹೇಳಿದೆ.

2014 ಮತ್ತು 2020ರ ನಡುವೆ ಕೇವಲ ಒಂದು ಶೇಕಡಾಕ್ಕಿಂತ ಕಡಿಮೆ ಅರಣ್ಯ ಕ್ಲಿಯರೆನ್ಸ್‌ನ್ನು ಸರ್ಕಾರ ತಿರಸ್ಕರಿಸಿದೆ. 2014 ಮತ್ತು 2023ರ ನಡುವೆ, ಕೈಗಾರಿಕೆಗಳು ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ 1.5 ಲಕ್ಷ ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸಲಾಗಿದೆ ಎಂದು ವರದಿ ಹೇಳಿದೆ.

ವರದಿಯು 2011ರ ಕರಾವಳಿ ನಿಯಂತ್ರಣ ವಲಯ (CRZ) ಅಧಿಸೂಚನೆಗೆ ಮಾಡಿದ ತಿದ್ದುಪಡಿಗಳನ್ನು ಎತ್ತಿ ತೋರಿಸಿದೆ. ವಿಮಾನ ನಿಲ್ದಾಣದ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ 130 ಚದರ ಕಿಲೋಮೀಟರ್ ಅರಣ್ಯ ಪ್ರದೇಶವನ್ನು ನಿಯೋಜಿಸುವ ಗುರಿಯನ್ನು ಹೊಂದಿರುವ ಗ್ರೇಟ್ ನಿಕೋಬಾರ್ ಐಲ್ಯಾಂಡ್ (ಜಿಎನ್‌ಐ) ಯೋಜನೆಯಂತಹ ಯೋಜನೆಗಳನ್ನು ಆಳುವ ಸರ್ಕಾರವು ವೇಗವಾಗಿ ಮುನ್ನೆಲೆಗೆ ತಂದಿದೆ ಎಂದು ವರದಿಯು ಉಲ್ಲೇಖಿಸಿದೆ.

ಹ್ಯುಮನ್‌ ರೈಟ್ಸ್ ಡಿಫೆಂಡರ್ಸ್ ಅಲರ್ಟ್-ಇಂಡಿಯಾದ ರಾಷ್ಟ್ರೀಯ ಕಾರ್ಯದರ್ಶಿ ಹೆನ್ರಿ ಟಿಫಾಗ್ನೆ ಮಾತನಾಡುತ್ತಾ, ಪರಿಸರ ಕಾರ್ಯಕರ್ತರು ಅಕ್ರಮ ಬಂಧನಗಳನ್ನು ಎದುರಿಸುತ್ತಿದ್ದಾರೆ ಮತ್ತು ಜಾರ್ಖಂಡ್, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಅವರ ಫೋನ್‌ಗಳನ್ನು ಕಿತ್ತುಕೊಂಡು ದೌರ್ಜನ್ಯ ನಡೆಸಲಾಗಿದೆ. ತಮಿಳುನಾಡಿನ ತೂತುಕುಡಿಯಲ್ಲಿ ವೇದಾಂತ ಸ್ಥಾವರ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಆರು ಮಂದಿ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಇದಲ್ಲದೆ 2021ರಲ್ಲಿ ದೆಹಲಿಯಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯನ್ನು ಬೆಂಬಲಿಸಿದ 22 ವರ್ಷದ ಹವಾಮಾನ ಕಾರ್ಯಕರ್ತೆ ದಿಶಾ ರವಿಯ ಬಂಧನವನ್ನು ಕೂಡ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...