Homeಎಕಾನಮಿ'ಭಾರತದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ': ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

‘ಭಾರತದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ’: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಭಾರತದ ಆರ್ಥಿಕ ಪರಿಸ್ಥಿತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದೆ ಎಂಬುದು ಅರ್ಥಶಾಸ್ತ್ರಜ್ಞ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ಪಡೆದಿರುವ ಭಾರತೀಯ ಮೂಲದ ಅಮೆರಿಕ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿಯವರು ಹೊರಹಾಕಿರುವ ಆತಂಕ.

ಅಕ್ಟೋಬರ್ 9ರಂದು ಬ್ರೌನ್ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಭಾರತದ ಆರ್ಥಿಕತೆ ಕುಸಿತ ಅಪಾಯದ ಮಟ್ಟ ತಲುಪಿದೆ. ಅಲ್ಲದೇ ಸರಕು ಮತ್ತು ಸೇವಾ ತೆರಿಗೆ, ನೋಟು ಅಮಾನ್ಯೀಕರಣ ನೀತಿಗಳು ಹೆಚ್ಚು ಸಮಸ್ಯೆ ತಂದೊಡ್ಡಿವೆ. ಬೇಡಿಕೆಯ ಮಟ್ಟ ಕುಸಿದಿದೆ. ನನ್ನ ಸಹವರ್ತಿಗಳೊಂದಿಗೆ ಹೂಡಿಕೆ ಬಗ್ಗೆ ಮಾತನಾಡಿದಾಗ ಹೂಡಿಕೆ ಮಾಡುವುದು ಅಸಾಧ್ಯ. ಇದರಿಂದ ಸಾಕಷ್ಟು ತೊಂದರೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದ್ದಾರೆ.

ಯಾರೂ ಸಹ ಹೆಚ್ಚು ದಿನಗಳವರೆಗೆ ಕಾಯುವುದಿಲ್ಲ. ಒಂದೇ ವಿಷಯಕ್ಕೆ ಅಂಟಿಕೊಂಡು ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ. ಪಿಎಂಒ ಜತೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಏನೂ ಆಗುವುದಿಲ್ಲ ಎಂದು ಅಭಿಜಿತ್ ಟೀಕಿಸಿದ್ದಾರೆ. ನಾಲ್ಕು ವರ್ಷಗಳಲ್ಲಿ ಸರಾಸರಿ ಬಳಕೆ ಕಡಿಮೆಯಾಗಿದೆ. ಹಣದುಬ್ಬರ ಸಮಸ್ಯೆ ಸರಿಪಡಿಸಿದ ನಂತರವೂ ಸಮಸ್ಯೆ ಕಡಿಮೆಯಾಗಿಲ್ಲ. 70ರ ದಶಕಕ್ಕಿಂತಲೂ ಈ ಬಾರಿಯ ಆರ್ಥಿಕ ಕುಸಿತ ಹೆಚ್ಚು ಗಂಭೀರವಾಗಿದೆ ಎಂದು ಟೀಕಿಸಿದ್ದಾರೆ.

ಇನ್ನು ಶೇ.75ರಷ್ಟು ಹೂಡಿಕೆಯ ಪ್ರಮಾಣ ಸಂಪೂರ್ಣವಾಗಿ ಕುಸಿದಿದೆ. ರಫ್ತು ಪ್ರಕ್ರಿಯೆಯಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಇದು ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎಂದು ಹೇಳಬಹುದು. ಆದರೆ ನಾವೇ ಬಿಕ್ಕಟ್ಟಿನಲ್ಲಿದ್ದೇವೆ. ಚಟುವಟಿಕೆಯಿಂದಿದ್ದ ಸಂಸ್ಥೆಗಳು ಈಗ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಪ್ರಮುಖವಾಗಿ 2016ರಲ್ಲಿ ನಡೆದ ನೋಟು ನಿಷೇಧ ಮತ್ತು ಜಿಎಸ್ ಟಿ ಅನುಷ್ಠಾನ ಆರ್ಥಿಕತೆಯ ಕುಸಿತಕ್ಕೆ ಕಾರಣ. ಇದರಿಂದ ಬೇಡಿಕೆ ಮತ್ತು ಹೂಡಿಕೆ ಸಮಸ್ಯೆ ಹೆಚ್ಚಿದೆ. ಹಣದುಬ್ಬರ ತಗ್ಗಿಸಲು ಸಾಕಷ್ಟು ಪ್ರಯತ್ನಿಸಲಾಗುತ್ತಿದೆಯಾದ್ರೂ ಇದು ಋಣಾತ್ಮಕ ಪರಿಣಾಮ ಬೀರುತ್ತಿದೆ. ಹೀಗಾಗಿಯೇ ಆರ್ ಬಿಐ ಮಾಜಿ ಗವರ್ನರ್ ಕೂಡ ಭಾರತದ ಆರ್ಥಿಕತೆಯ ಅಸ್ವಸ್ಥತೆಯ ಲಕ್ಷಣಗಳ ಬಗ್ಗೆ ಹೇಳಿದ್ದರು. ಭಾರತ ತನ್ನ ಆರ್ಥಿಕ ಮಾರ್ಗವನ್ನು ಕಳೆದುಕೊಳ್ಳುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...