Homeಕರ್ನಾಟಕಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸಲು ರಾಜ್ಯ ಸರ್ಕಾರದಿಂದ ಆದೇಶ

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸಲು ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವಂತೆ ಸೂಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಚತಾ ಸಿಬ್ಬಂದಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಡಿಸೆಂಬರ್ 21, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಅಳವಡಿಸುವ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

ಮೀಸಲಾತಿ ನಿಯಮಗಳು ಹೀಗಿವೆ..

  • ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
  • ಪ್ರತಿವರ್ಷ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿ ಸಿಬ್ಬಂದಿಯನ್ನು ಪಡೆಯಲು ಷರತ್ತುಗಳನ್ನು ನಮೂದಿಸಬೇಕು.
  • ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇ.33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಬೇಕು.
  • ಟೆಂಡರ್ ಅಂಗೀಕರಿಸುವ ಪ್ರಾಧಿಕಾರ ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಯ ಪಟ್ಟಿ ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಹೊರ ಸಂಪನ್ಮೂಲ ಏಜೆನ್ಸಿ ಪಡೆದು ನಿರ್ವಹಿಸಬೇಕು. ಟೆಂಡರ್‌ ಅಂಗೀಕರಿಸುವ ಪ್ರಾಧಿಕಾರ ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡ0ಲು ಕ್ರಮವಹಿಸಬೇಕು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)

  • ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪ್ರವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿ ಕ್ರಮ ಕೈಗೊಳ್ಳಬೇಕು.
  • ಯಾವುದೇ ಇಲಾಖೆ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸಬೇಕು.
  • ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರಬೇಕು.
  • ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗವಕಾಶಗಳನ್ನು ಒದಗಿಸುವ ದೃಷ್ಠಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸುವಂತಿಲ್ಲ.

ಈ ಮೇಲಿನ ನಿಯಮಗಳು ಸರ್ಕಾರದ ಎಲ್ಲಾ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಮಂಡಳಿಗಳು ಮತ್ತು ವಿಶ್ವವಿದ್ಯಾನಿಲಯಗಳಿಗೆ ಅನ್ವಯಿಸಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್ ಡಿ ಅವರು ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...