Homeಮುಖಪುಟಟಿಕೆಟ್‌ ಕೈತಪ್ಪಿದಕ್ಕೆ 'ಮತದಾನ' ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

- Advertisement -
- Advertisement -

ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದ ಹಾಲಿ ಸಂಸದರಾಗಿರುವ ಜಯಂತ್ ಸಿನ್ಹಾ ಬದಲಿಗೆ ಈ ಬಾರಿ ಮನೀಷ್ ಜೈಸ್ವಾಲ್ ಅವರಿಗೆ ಟಿಕೆಟ್‌ ನೀಡಲಾಗಿತ್ತು. ಇದರಿಂದ ಮುನಿಸಿಕೊಂಡಿದ್ದ ಜಯಂತ್ ಸಿನ್ಹಾ ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಭಾಗವಹಿಸದೆ ದೂರ ಉಳಿದುಕೊಂಡು ಅಸಮಾಧಾನವನ್ನು ಹೊರಹಾಕಿದ್ದರು. ನಿನ್ನೆ ನಡೆದ ಚುನಾವಣೆಯಲ್ಲಿ ಕನಿಷ್ಠ ಪಕ್ಷ ಮತದಾನವನ್ನು ಕೂಡ ಅವರು ಮಾಡಿರಲಿಲ್ಲ. ಇದರಿಂದ ಬಿಜೆಪಿ ಇದೀಗ ಜಯಂತ್ ಸಿನ್ಹಾ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿ ನೊಟೀಸ್‌ ನೀಡಿದೆ.

‘ಹಜಾರಿಬಾಗ್ ಲೋಕಸಭಾ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದಾಗಿನಿಂದ ನೀವು ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿ ವಹಿಸಿಲ್ಲ. ನಿಮ್ಮ ಮತವನ್ನು ಚಲಾಯಿಸಬೇಕು ಎಂದು ನಿಮಗೆ ಅನಿಸಲಿಲ್ಲ. ನಿಮ್ಮ ನಡವಳಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ’ ಎಂದು ಬಿಜೆಪಿ ಜಯಂತ್ ಸಿನ್ಹಾ ಅವರಿಗೆ ಕಳುಹಿಸಿದ ನೋಟಿಸ್‌ನಲ್ಲಿ ಹೇಳಿದೆ. ಈ ಬಗ್ಗೆ ಜಯಂತ್ ಸಿನ್ಹಾ ಅವರು ತಮ್ಮ ನಿಲುವನ್ನು ಎರಡು ದಿನಗಳಲ್ಲಿ ವಿವರಿಸುವಂತೆ ಸೂಚಿಸಲಾಗಿದೆ.

ಮಾರ್ಚ್ 2ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಜಯಂತ್ ಸಿನ್ಹಾ, ಭಾರತ ಮತ್ತು ವಿಶ್ವಾದ್ಯಂತ ಜಾಗತಿಕ ಹವಾಮಾನ ಬದಲಾವಣೆ ವಿರುದ್ಧದ ಹೋರಾಟದ ಬಗ್ಗೆ ಗಮನ ಹರಿಸಲು ಬಯಸಿರುವುದರಿಂದ ತಮ್ಮನ್ನು ಚುನಾವಣೆಗೆ ಸಂಬಂಧಿಸಿದ ನೇರ ಕರ್ತವ್ಯಗಳಿಂದ ಬಿಡುಗಡೆ ಮಾಡಬೇಕು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಆಗ್ರಹಿಸಿದ್ದರು.

ಇದರ ಬೆನ್ನಲ್ಲಿ ಬಿಜೆಪಿ ಜೈಸ್ವಾಲ್ ಅವರನ್ನು ಜಾರ್ಖಂಡ್ ನ ಹಝಾರಿಬಾಗ್ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿತ್ತು. ಯಶ್ವಂತ್ ಸಿನ್ಹಾ ಹಾಗೂ ಅವರ ಪುತ್ರ ಜಯಂತ್ ಸಿನ್ಹಾ ಈ ಕ್ಷೇತ್ರಗಳನ್ನು ಮೊದಲು ಪ್ರತಿನಿಧಿಸಿದ್ದರು.

ನಿನ್ನೆ (ಮೇ 20) ಐದನೇ ಹಂತದ ಲೋಕಸಭಾ ಚುನಾವಣೆಯ ವೇಳೆ ಜಾರ್ಖಂಡ್‌ನ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಹಜಾರಿಬಾಗ್‌ನಲ್ಲಿ ಅತಿ ಹೆಚ್ಚು ಶೇಕಡಾ 64.32 ಮತದಾನವಾಗಿದೆ, ನಂತರ ಚತ್ರಾದಲ್ಲಿ 62.96 ಶೇಕಡಾ ಮತದಾನವಾಗಿದೆ ಮತ್ತು ಕೊಡೆರ್ಮಾದಲ್ಲಿ 61.86 ಶೇಕಡಾ ಮತದಾನವಾಗಿದೆ.

ಇದನ್ನು ಓದಿ: ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...