Homeಕರ್ನಾಟಕಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕೊನೆಕ್ಷಣದಲ್ಲಿ ಕನ್ಹಯ್ಯ ಕುಮಾರ್ ಭಾಷಣಕ್ಕೆ ಅನುಮತಿ ರದ್ದು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

- Advertisement -
- Advertisement -

ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ, ಪ್ರಖರ ಭಾಷಣಕಾರ, ಎಐಎಸ್‌ಎಫ್‌ನ ಕನ್ಹಯ್ಯ ಕುಮಾರ್‌ರವರು ನಿಗದಿತ ಯೋಜನೆಯಂತೆ ಇಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಬೇಕಿತ್ತು. “ತಮಗೆ ವಹಿಸಿದ ವಿಷಯದ ಕುರಿತು ಮಾತ್ರ ಮಾತನಾಡಬೇಕು. ಯಾವುದೇ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಬಾರದು.” ಎಂಬ ಷರತ್ತಿನೊಂದಿಗೆ ಅನುಮತಿಯನ್ನು ಸಹ ನೀಡಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾರವರು ಅನುಮತಿ ನಿರಾಕರಿಸುವ ಮೂಲಕ ಕಾರ್ಯಕ್ರಮಕ್ಕೆ ಅಡ್ಡಿಯುಂಟು ಮಾಡಿದ್ದಾರೆ.

ಕೂಡಲೇ ಕಾರ್ಯಕ್ರಮದ ಸ್ಥಳ ಬದಲಾವಣೆ ಮಾಡಿದ ಆಯೋಜಕರು ಇಂದು ಮಧ್ಯಾಹ್ನ 12 ಗಂಟೆಗೆ ಕಲಬುರ್ಗಿಯ ತಿಮ್ಮಾಪುರ ಸರ್ಕಲ್ ಬಳಿ ಇರುವ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಕನ್ಹಯಕುಮಾರ ಭಾಷಣಕ್ಕೆ ಏರ್ಪಾಟು ಮಾಡಿದ್ದಾರೆ. ಕನ್ಹಯ್ಯ ಭಾಷಣ ಕೇಳಲು ಸಾವಿರಾರು ಜನ ಜಮಾಯಿಸಿದ್ದಾರೆ.

ಏಕಾಏಕಿ ಕಾರ್ಯಕ್ರಮ ರದ್ದುಪಡಿಸಿದ್ದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿರೋಧ ಭುಗಿಲೆದ್ದಿದ್ದು ನೂರಾರು ಜನ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಗರು, ಅವರ ಸರ್ಕಾರ, ಅವರ ರಾಜ್ಯಪಾಲ ಎಂಥ ಹೇಡಿಗಳು ಎಂಬುದು ಮತ್ತೊಮ್ಮೆ ಸಾಬೀತಾಯಿತು. ಕನ್ಹಯ್ಯ ಕುಮಾರ್ ಎತ್ತಬಹುದಾದ ಪ್ರಶ್ನೆಗಳಿಗೆ ಹೆದರಿ‌ ಗುಲ್ಬರ್ಗ ವಿವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ನಡುರಾತ್ರಿ ಕಾರ್ಯಾಚರಣೆಯಲ್ಲಿ‌ ರದ್ದುಪಡಿಸಲಾಗಿದೆ. ವಿಚಾರಗಳಿಗೆ ಹೆದರುವವರ ತಲೆಯಲ್ಲಿ ಕತ್ತೆ ಲದ್ದಿಯಷ್ಟೆ ಇರಲು ಸಾಧ್ಯ. ಇವರೆಲ್ಲ ಈ ಲದ್ದಿ ಇಟ್ಟುಕೊಂಡೇ ಬದುಕು ಕಳೆದುಬಿಡುತ್ತಾರಲ್ಲ ಎಂದು ಅನುಕಂಪವಾಗುತ್ತದೆ‌ ಎಂದು ಪತ್ರಕರ್ತ ದಿನೇಶ್ ಕುಮಾರ್‌ ದಿನೂರವರು ತಿಳಿಸಿದ್ದಾರೆ.

ಮುಂದುವರೆದು ಗುಲ್ಬರ್ಗದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದೆ. ವಿವಿಯಲ್ಲಿ ಹೆಚ್ಚು ಸದ್ದುಗದ್ದಲವಿಲ್ಲದೆ ನಡೆದುಹೋಗುತ್ತಿದ್ದ ಉಪನ್ಯಾಸ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಆಯಾಮ ನೀಡಿದ ಘನತೆವೆತ್ತ ರಾಜ್ಯಪಾಲರಿಗೆ ಅಭಿನಂದನೆಗಳು ಎಂದು ವ್ಯಂಗ್ಯವಾಡಿದ್ದಾರೆ.

“ಕನ್ಹಯ್ಯ ಎಂಬ ಸಣ್ಣ ಪ್ರಾಯದ ಯುವಕನನ್ನು ಕಂಡರೆ “ವಿಶ್ವಗುರು” “56 ಇಂಚಿನ” ಎದೆಯ ನಾಯಕನ ಅನುಯಾಯಿಗಳಿಗೆ ಇಷ್ಟೊಂದು ಭಯ ಯಾಕೆ ?

ಆತನ ಗುಲ್ಬರ್ಗ ವಿ ವಿ ಭಾಷಣದ ಅನುಮತಿ ರದ್ದತಿಗೆ ರಾಜ್ಯಪಾಲರ ಮೂಲಕ ಅಮಿತ್ ಷಾ ನೇರ ಕಾರ್ಯಾಚರಣೆ ನಡೆಸಿದರಂತೆ!” ಎಂದು ಡಿವೈಎಫ್‌ಐನ ರಾಜ್ಯಾಧ್ಯಕ್ಷರಾದ ಅಬ್ದುಲ್ ಮುನೀರ್‌ ಪ್ರಶ್ನಿಸಿದ್ದಾರೆ.

ನಿನ್ನೆ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟು ರಾತ್ರೋರಾತ್ರಿ ಕಾರ್ಯಕ್ರಮ ರದ್ದುಗೊಳಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಆಡಳಿತ ಮಂಡಳಿಗೆ ಹೇಳಿ ದಿಕ್ಕಾರ ದಿಕ್ಕಾರ …!

ಗುಲಬರ್ಗಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಕೂಗು ಇಡೀ ರಾಷ್ಟ್ರದ ದ್ವನಿಯಾಗಿ ಪ್ರಜ್ವಲಿಸಬೇಕು….! ಎಂದು ಸಾಮಾಜಿಕ ಕಾರ್ಯಕರ್ತೆ ಲಕ್ಷ್ಮಿ ಬಾವ್ಗೆ ತಿಳಿಸಿದ್ದಾರೆ.

ಹಿಂದುತ್ವ ಉಗ್ರರ ಬೆದರಿಕೆಗೆ ಕನ್ನಡಿಗರು ಬಗ್ಗಬಾರದು.. ಭಾಷಣ ಇಷ್ಟ ಇಲ್ವಾ ಕೇಳಬೇಡಿ..ವ್ಯಕ್ತಿ ಇಷ್ಟ ಇಲ್ವಾ ಮೆಚ್ಚಬೇಡಿ…. ಭಾಷಣ ಮಾಡಲೇಬಾರದು ಅನ್ನೋದು ಅಕ್ಷಮ್ಯ..

ಉಗ್ರರು ಬೀದಿ ಬೀದಿಯಲ್ಲಿ ಹಿಂಸೆ ಪ್ರಚೋದನೆ ಮಾಡುತ್ತಾ ದೊಂಬಿಗೆ ಪ್ರಚೋದನೆ ಮಾಡೋರಿಗೆ ಆರಾಮಾಗಿ ಅನುಮತಿ ಸಿಗತ್ತೆ. ಅಂತಹ ಯಾವುದೇ ಮನೆ ಮುರಿಯುವ ಕೆಲಸ ಮಾಡದ ಒಬ್ಬರಿಗೆ ಮಾತನಾಡಲು ತಡೆ.. ಏಕೆ ಎಂದು ಕೃಷಿಕ್‌ ಎ.ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ನೆರೆಯ ಸಂಕಷ್ಟಕ್ಕೆ ಕರಗದ ಜಡಮನಸ್ಸುಗಳು, ಉತ್ತರ ಕರ್ನಾಟಕದಲ್ಲಿ ಕನ್ಹಯ್ಯ ಕುಮಾರ್ ಉಪನ್ಯಾಸಕ್ಕೆ ಬೆಚ್ಚಿ ಬೀಳುವುದ್ಯಾಕೆ ? ಎಂದು ಆನಂದ್‌ ಕುಮಾರ್ ಕೆ.ಎನ್‌ ಪ್ರಶ್ನಿಸಿದ್ದಾರೆ.

ಇಂದು ಸಂಜೆ ೫ ಗಂಟೆಗೆ ಕಲಬುರ್ಗಿಯ ಅಂಬೇಡ್ಕರ್‌ ಮೈದಾನದಲ್ಲಿ ಕನ್ಹಯ್ಯಕುಮಾರ್‌ರವರ ಬಹಿರಂಗ ಭಾಷಣ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...