Homeಎಕಾನಮಿ'ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು': ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

‘ನೋಟು ನಿಷೇಧದಿಂದ ಭಾರತದ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು’: ನೊಬೆಲ್ ಪುರಸ್ಕೃತೆ ಎಸ್ತಾರ್ ಡುಫ್ಲೋ

- Advertisement -
- Advertisement -

ಭಾರತದಲ್ಲಿ 2016ರಲ್ಲಿ ಬಿಜೆಪಿ ಸರ್ಕಾರ ಏಕಾಏಕಿ, ರಾತ್ರೋರಾತ್ರಿ ಪ್ರಕಟಿಸಿದ್ದ ನೋಟು ಅಮಾನ್ಯೀಕರಣ ಕೆಲವೇ ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಲಿದೆ ಎಂದು ಹಲವು ಅರ್ಥಶಾಸ್ತ್ರಜ್ಞರು, ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಗದಿತ ಕಾರ್ಯಸೂಚಿ ಹಾಗೂ ಪರಿಣಾಮಗಳ ಬಗ್ಗೆ ಅಂದಾಜಿಲ್ಲದೆ ಹೇರಲಾಗಿರುವ ನೋಟು ನಿಷೇಧ ಕ್ರಮ ಮುಂದೊಂದು ದಿನ ಆರ್ಥಿಕತೆಗೆ ಬಹುದೊಡ್ಡ ಪೆಟ್ಟು ನೀಡಲಿದೆ. ಇದರಿಂದ ಆಗಲಿರುವ ನೋವಿನ ಬಗ್ಗೆ ನಮಗ್ಯಾರಿಗೂ ಅಂದಾಜಿಲ್ಲ ಎಂದು ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಅಂದೇ ಹೇಳಿದ್ದರು.

ಹೌದು… 2016ರಲ್ಲಿ ಭಾರತದಲ್ಲಿ ನೋಟು ಅಮಾನ್ಯೀಕರಣವಾದಾಗಲೇ, ಈ ಕ್ರಮದಿಂದ ಭಾರತದ ಆರ್ಥಿಕತೆ ಅಪಾಯ ಎದುರಿಸಲಿದೆ ಎಂದು ಅರ್ಥಶಾಸ್ತ್ರಜ್ಞೆ ಎಸ್ತಾರ್ ಡುಫ್ಲೋ ಹೇಳಿದ್ದರು. ಫ್ರಾನ್ಸ್ ಮೂಲದ ಎಸ್ತಾರಾ ಡುಫ್ಲೋ, ಎಂಐಟಿಗೆ ತೆರಳುವ ಮುನ್ನ ಇತಿಹಾಸ ಮತ್ತು ಅರ್ಥಶಾಸ್ತ್ರವನ್ನು ಪ್ಯಾರಿಸ್ ಮೂಲದ ಎಕೋಲ್ ನಾರ್ಮಲ್ ಸುಪಿರೀಯರ್ ಕಾಲೇಜಿನಲ್ಲಿ ಓದಿದ್ದರು. 1999ರಲ್ಲಿ ಪಿ.ಎಚ್.ಡಿ ಪಡೆದಿದ್ದಾರೆ. ಡಾಕ್ಟರೇಟ್ ಪದವಿ ನಂತರದ ಐದು ವರ್ಷಗಳಲ್ಲಿ ಎಸ್ತಾರ್ ಅರ್ಥಶಾಸ್ತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದರು. 2010ರಲ್ಲಿ ಜಾನ್ ಬೇಟ್ಸ್ ಕ್ಲರ್ಕ್ ಪ್ರಶಸ್ತಿ ಪಡೆದರು. ನಂತರ 2012 ರಲ್ಲಿ ಡುಫ್ಲೋ ಮತ್ತು ಅಭಿಜಿತ್ ಬ್ಯಾನರ್ಜಿ ಬಡತನದ ಆರ್ಥಿಕತೆ ಎಂಬ ಪುಸ್ತಕ ಪ್ರಕಟಿಸಿದರು. ಬಡತನ ಹೋಗಲಾಡಿಸುವ ದಾರಿ ಯಾವುದು..? ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿದ್ದರು. ಎಂಐಟಿಯಲ್ಲಿ ಅಬ್ದುಲ್ ಲತೀಫ್ ಜಮೀಲ್ ಪಾವರ್ಟಿ ಆ್ಯಕ್ಷನ್ ಲ್ಯಾಬ್ ( ಜೆ-ಪಾಲ್) ತೆರೆದರು. ಆರ್ಥಿಕತೆಯ ಅಭಿವೃದ್ಧಿ ಮತ್ತು ಹೊಸ ನೀತಿಗಳನ್ನು ತಿಳಿಸಲು ಸಹಕಾರಿಯಾಗಿದೆ.

ಲೈವ್ ಮಿಂಟ್ ಸುದ್ದಿವಾಹಿನಿ ನಡೆಸಿದ್ದ ಸಂದರ್ಶನದಲ್ಲಿ ಎಸ್ತಾರ್ ಡುಫ್ಲೋ ಭಾರತದ ಆರ್ಥಿಕತೆಯ ಮೇಲೆ ನೋಟು ನಿಷೇಧ ಯಾವ ರೀತಿ ಪರಿಣಾಮ ಬೀರಲಿದೆ, ದೇಶದಲ್ಲಿನ ಆರೋಗ್ಯ ಸ್ಥಿತಿ, ಶೈಕ್ಷಣಿಕ ಪ್ರಗತಿ ಮತ್ತು ಮಟ್ಟಕ್ಕೆ ಕಡಿಮೆ ಪ್ರಾತಿನಿಧ್ಯ ನೀಡುತ್ತಿರುವ ಕುರಿತು ಸುದೀರ್ಘವಾಗಿ ಹೇಳಿದ್ದರು. ಸಂದರ್ಶನದ ಕೆಲ ಪ್ರಶ್ನೋತ್ತರಗಳು ಈ ಕೆಳಗಿನಂತಿದೆ.

  • ನಿಮ್ಮ ಬಡತನದ ಅರ್ಥಶಾಸ್ತ್ರಜ್ಞ ಪುಸ್ತಕದಲ್ಲಿ ನೋಟು ಅಮಾನ್ಯೀಕರಣ ಒಂದು ಪ್ರಕರಣವಾಗಿದೆ. ಆಲೋಚನೆಯಿಲ್ಲದೆ ಮಾಡಿರುವ ನೋಟು ನಿಷೇಧ ಕ್ರಮ ನಗದು ರಹಿತ ಆರ್ಥಿಕ ವ್ಯವಸ್ಥೆಗೆ ಒಂದು ಪ್ರಕರಣದಂತೆ ಎಂದು ನೀವು ಭಾವಿಸುತ್ತೀರಾ..?

ನನ್ನ ಪ್ರಕಾರ ನೋಟು ನಿಷೇಧ ಅನುಷ್ಠಾನಕ್ಕೂ ಮೊದಲು ಆಲೋಚನೆ ಮಾಡದೇ, ಇದಕ್ಕೆ ಕಡಿಮೆ ಪ್ರಾಮುಖ್ಯತೆ ನೀಡಲಾಗಿದೆ. ಹೀಗಾಗಿ ನೋಟು ಅಮಾನ್ಯೀಕರಣ ಜಾರಿ, ನಾಟಕೀಯ ಬೆಳವಣಿಗೆಗೆ ಒಂದು ಉದಾಹರಣೆಯಾಗಿದೆ. ನೂರಕ್ಕೂ ಹೆಚ್ಚು ನಿಯಮಗಳನ್ನು ಮಾಡಲಾಗಿದೆ. ಆದರೆ ಅದ್ಯಾವುದರ ಬಗ್ಗೆಯೂ ಸ್ಪಷ್ಟತೆಯಿಲ್ಲ. ಉದಾಹರಣೆಗೆ ಯುಪಿಐ ( ಯೂನಿಫೈಡ್ ಪೇಮೆಂಟ್ಸ್ ಇಂಟರ್ ಫೇಸ್ ) ವೇದಿಕೆ ನಗದು ರಹಿತ ಪೇಟಿಎಂ ಇದ್ದಂತೆ. ಬ್ಯಾಂಕುಗಳು ನೋಟು ನಿಷೇಧ ನಿಯಮಗಳ ಜಾರಿ ಮಾಡಲು ಸಿದ್ಧವಾಗಿಲ್ಲ, ಅವುಗಳ ಅನುಮೋದನೆಗೆ ಹಿಂಜರಿಯುತ್ತಿವೆ. ಯಾವುದೇ ಪ್ರಮುಖ ನಿಯಂತ್ರಣವಿಲ್ಲದೇ ನಗದು ರಹಿತ ಆರ್ಥಿಕತೆಯತ್ತ ಸಾಗಲು ತೆಗೆದುಕೊಂಡ ಕ್ರಮ ಇದಾಗಿದೆ.

  • ನೋಟು ಅಮಾನ್ಯೀಕರಣದ ಪರಿಣಾಮ ಹೆಚ್ಚು ಅನೌಪಚಾರಿಕ ವಲಯದ ಮೇಲೆ ಬೀರುತ್ತದೆ ಎಂದೇ ಹೇಳಲಾಗುತ್ತಿದೆ. ಇದು ಹೆಚ್ಚಾಗಿ ಬಡ ಜನರ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಬಡವರ ಆದಾಯದ ಮೇಲೆ ಬೀರುವ ಈ ಆಘಾತ ಭಾರತದಲ್ಲಿನ ಬಡತನದ ವಿರುದ್ಧ ಹೋರಾಟ ನಡೆಸಲು ಸೂಕ್ತವೇ, ಇದರ ಪರಿಣಾಮ ಏನಾಗಲಿದೆ..?

ಈ ಬಗ್ಗೆ ನಮಗೆ ಗೊತ್ತಿಲ್ಲ. ಈ ನಾವು ಏನನ್ನೂ ಈಗಲೇ ಹೇಳುವುದು ಸಾಧ್ಯವಿಲ್ಲ. ಆರ್ಥಿಕತೆಯ ಅನೌಪಚಾರಿಕ ಜಿಡಿಪಿ ಸೃಷ್ಟಿಯನ್ನು ಅಳೆಯಲು ಯಾವುದೇ ಕಾರ್ಯವಿಧಾನವಿಲ್ಲ. ಅನೌಪಚಾರಿಕ ಆರ್ಥಿಕತೆ, ಜಿಡಿಪಿಯನ್ನು ಔಪಚಾರಿಕ ಆರ್ಥಿಕ ಜಿಡಿಪಿಗೆ ಸೂಚಿಸುವ ಮೂಲಕ ಲೆಕ್ಕ ಹಾಕಲಾಗುತ್ತದೆ. ನಷ್ಟದ ನಿಖರತೆಯ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಅಷ್ಟೇ ಅಲ್ಲ ಯಾವುದೇ ಹಿನ್ನಡೆ ಇಲ್ಲ ಎಂಬುದಕ್ಕೆ ಸರ್ಕಾರ ಅಂಕಿ ಅಂಶಗಳನ್ನು ಬಳಸಬಹುದು. ಕಾರ್ಯಸ್ಥಳಗಳಿಂದ ಕಾರ್ಮಿಕರು ಗ್ರಾಮಗಳತ್ತ ತೆರಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ದತ್ತಾಂಶವಿಲ್ಲ. ಇದು ಅಲ್ಫಾವಧಿಯಲ್ಲಿ ಜನತೆ ಅನುಭವಿಸುವ ನೋವನ್ನು ಎತ್ತಿ ಹಿಡಿಯುತ್ತದೆ.

  • ಆರ್ಥಿಕತೆಯ ಚಿಂತನೆ ಹಾಗೂ ಬೆಳವಣಿಗೆ, ಕಲ್ಯಾಣ, ಆರ್ಥಿಕತೆಯ ಮೇಲೆ ಕೇಂದ್ರೀಕರಿಸುವುದರ ನಡುವಿನ ವಿಭಜನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು..?

ಕೇವಲ ಆರ್ಥಿಕತೆಯ ಬೆಳವಣಿಗೆ ಮೇಲೆ ದೃಷ್ಟಿ ಕೇಂದ್ರೀಕರಿಸುವುದರಿಂದ ಸಮಸ್ಯೆ ಹಾಗೂ ಯಾವ ಬೆಳವಣಿಗೆ ಆಗಲಿದೆ ಎಂಬುದನ್ನು ಹೇಳುವುದು ಕಷ್ಟ. ಇದು ಕೇವಲ ನನ್ನ ಅಭಿಪ್ರಾಯ ಮಾತ್ರವಲ್ಲ. ಆರ್ಥಿಕ ಬೆಳವಣಿಗೆಯ ಹಲವು ನಿರ್ಧಾರಕಗಳ ಬಗ್ಗೆ ಅಧ್ಯಯನ ಮಾಡಿರುವ ಸ್ಥೂಲ ಅರ್ಥಶಾಸ್ತ್ರಜ್ಞರು ಇದನ್ನೇ ಹೇಳಿದ್ದಾರೆ. ಕೇವಲ ಬೆಳವಣಿಗೆಯ ಮೇಲೆಯೇ ಕೇಂದ್ರೀಕೃತವಾಗಿರುವುದು ಅನುಪಯುಕ್ತ. ಭವಿಷ್ಯದ ಪೀಳಿಗೆಗೆ ಸಾಮಾಜಿಕ ಚಲನಶೀಲತೆಯನ್ನು ಖಚಿತಪಡಿಸುವಲ್ಲಿ ವಿಫಲವಾಗುವುದು ಬೆಳವಣಿಗೆಗೆ ಪ್ರಮುಖ ಮತ್ತೊಂದು ವಿಷಯ. ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಾಥಮಿಕ ಅಥವಾ ಚುನಾವಣೆ ವೇಳೆ ಬರ್ನಿ ಸ್ಯಾಂಡರ್ಸ್ ಗೆ ಬೆಂಬಲ ವ್ಯಕ್ತವಾಯಿತು. ಬೆಳವಣಿಗೆಗೆ ಏನು ಕಾರಣ ಎಂದು ಒಬ್ಬರು ತಿಳಿದಿದ್ದರೂ ಸಹ, ಬೆಳವಣಿಗೆಯೊಂದರ ಮೇಲೆಯೇ ದೃಷ್ಟಿ ಕೇಂದ್ರೀಕರಿಸಿ, ದೊಡ್ಡ ಲಾಭಗಳನ್ನು ನಿರ್ಲಕ್ಷಿಸುವಾಗ ಅದರ ಮೇಲೆ ಕೇಂದ್ರೀಕರಿಸುವುದು ಪ್ರತಿ ಉತ್ಪಾದಕವಾಗಿದೆ ಎಂದು ನಾನು ಭಾವಿಸುತ್ತೇನೆ.

ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ನಿಷೇಧ ಮಾಡಿರುವುದು, ಯಾವುದೇ ಗಂಭೀರ ಆಲೋಚನೆಯಿಲ್ಲದೆ ಮಾಡಿದ ನೀತಿ ಪ್ರಕಟಣೆಯಾಗಿದೆ. ಕರೆನ್ಸಿ-ಸ್ಕ್ರ್ಯಾಪಿಂಗ್ ಗ್ಯಾಂಬಿಟ್‌ನ ನೈಜ ಪರಿಣಾಮ ಎಂದಿಗೂ ಕೂಡಲೇ ತಿಳಿದು ಬರುವುದಿಲ್ಲ. ಯಾಕೆಂದರೆ ಭಾರತದ ಸಂಖ್ಯಾಶಾಸ್ತ್ರೀಯ ಅಂಕಿಅಂಶಗಳು ಅನೌಪಚಾರಿಕ ಆರ್ಥಿಕತೆಯ ದತ್ತಾಂಶವನ್ನು ನಿಯಮಿತವಾಗಿ ಸೆರೆ ಹಿಡಿಯುವುದಿಲ್ಲವೆಂಬ ಬಗ್ಗೆ ಎಸ್ತಾರ್ ಡುಫ್ಲೋ 2016ರಲ್ಲೇ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...