Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...