Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು 'ಚೀನಾ ಸಂವಿಧಾನದ' ಪ್ರತಿಯಲ್ಲ

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

- Advertisement -
- Advertisement -

“ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು, ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ತೋರಿಸಿರುವ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಹಿಮಂತ್ ಬಿಸ್ವಾ ಶರ್ಮಾ ಅವರ ಎಕ್ಸ್‌ ಪೋಸ್ಟ್‌ಗೆ ಅಲ್ಲಿಯೇ ಪ್ರತಿಕ್ರಿಯೆ ಕೊಟ್ಟಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಾಹುಲ್ ಗಾಂಧಿ ಪ್ರದರ್ಶಿಸಿದ ಬಣ್ಣದ್ದೇ ಸಂವಿಧಾನದ ಪ್ರತಿಯನ್ನು ವ್ಯಕ್ತಿಯೊಬ್ಬರಿಗೆ ನೀಡಿದ ಫೋಟೋ ಹಂಚಿಕೊಂಡಿದ್ದು, “ಹಿಮಂತ್ ಬಿಸ್ವಾ ಶರ್ಮಾ ಅವರೇ ನಿಮ್ಮ ಬಾಸ್ ಅಮಿತ್ ಶಾ ಅವರಲ್ಲಿ ಈ ಬಗ್ಗೆ ಪರಿಶೀಲಿಸಲು ಹೇಳಿ” ಎಂದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪ್ರದರ್ಶಿಸಿದ್ದು ಚೀನಾದ ಸಂವಿಧಾನ ಪ್ರತಿಯಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ ಫೋಟೋದ ಬಗ್ಗೆ ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಮೇ 6, 2024ರಂದು ಅದೇ ಫೋಟೋ ಬಳಸಿ business-standard.com ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ. ಆ ಸುದ್ದಿಯ ಪ್ರಕಾರ, ಮೇ 5ರಂದು ತೆಲಂಗಾಣದ ಗದ್ವಾಲ್‌ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಪ್ರದರ್ಶಿಸಿದ ಕೆಂಪು ಬಣ್ಣದ ಹೊದಿಕೆ (ಕವರ್) ಹೊಂದಿರುವ ಸಂವಿಧಾನದ ಪ್ರತಿಯ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಆ ರೀತಿಯ ಹಲವು ಫೋಟೋಗಳು ಕಾಣಿಸಿಕೊಂಡಿವೆ.

ಮಾರ್ಚ್ 3, 2024ರಂದು ಕರ್ನಾಟಕದ ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿ ತೋರಿಸಿದ್ದರು. ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ’ ವರದಿ ಮಾಡಿತ್ತು. ಆ ವರದಿಯಲ್ಲಿ ರಾಹುಲ್ ಗಾಂಧಿ ಪ್ರದರ್ಶಿಸಿದ್ದು, ‘THE CONSTITUTION OF INDIA’ ಎಂದು ಸ್ಪಷ್ಟವಾಗಿ ಬರೆದಿರುವುದನ್ನು ನಾವು ನೋಡಬಹುದು.

‘ಬ್ಯುಸಿನೆಸ್ ಸ್ಟ್ಯಾಂಡರ್ಡ್’ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅದೇ ಫೋಟೊ ಪ್ರಕಟಿಸಿದ್ದು, ಎಲ್ಲದರಲ್ಲಿಯೂ ‘THE CONSTITUTION OF INDIA’ ಎಂದು ಬರೆದಿರುವುದನ್ನು ನಾವು ನೋಡಬಹುದು.

ರಾಹುಲ್ ಗಾಂಧಿಯವರು ಬಹುತೇಕ ಎಲ್ಲಾ ಸಾರ್ವಜನಿಕ ಸಭೆಗಳಿಗೆ ಕೋಟ್ ಪಾಕೆಟ್ ಎಡಿಷನ್‌ನ ಚಿಕ್ಕ ಗಾತ್ರದ ಭಾರತದ ಸಂವಿಧಾನದ ಪ್ರತಿಯನ್ನು ಕೊಂಡೊಯ್ಯುತ್ತಾರೆ. ‘ನಾವು ಸಂವಿಧಾನವನ್ನು ರಕ್ಷಿಸುತ್ತೇವೆ’ ಎಂದು ಪ್ರಮಾಣ ಮಾಡುತ್ತಾರೆ. ಈ ಕುರಿತು ಗೂಗಲ್‌ನಲ್ಲಿ ಹುಡುಕಿದಾಗ ಹಲವಾರು ಪ್ರಕಾಶನಗಳು ಕೆಂಪು ಮತ್ತು ಕಪ್ಪು ಬಣ್ಣದ ಭಾರತದ ಸಂವಿಧಾನದ ಚಿಕ್ಕಗಾತ್ರದ ಪ್ರತಿಯನ್ನು ಮುದ್ರಿಸಿರುವುದನ್ನು ನೋಡಬಹುದು. ಹಲವಾರು ಆನ್‌ಲೈನ್‌ ಫ್ಲಾಟ್‌ಫಾರಂಗಳಲ್ಲಿ ಅವುಗಳನ್ನು ನಾವು ಕೊಳ್ಳಬಹುದುದಾಗಿದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಯಾಗಿದ್ದ ರಾಮನಾಥ್ ಕೋವಿಂದ್ ಅವರಿಗೆ ಅದೇ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿಯನ್ನು ನೀಡಿದ್ದರು. ಈ ಕುರಿತ ಫೋಟೋಗಳನ್ನು ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚೀನಾದ ಸಂವಿಧಾನದ ಪ್ರತಿ ತೋರಿಸಿದ್ದಾರೆಯೇ? ಎಂಬ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಅವರ ಅನುಮಾನ ಅಥವಾ ಪ್ರತಿಪಾದನೆ ಸುಳ್ಳು. ಮೇಲೆ ನಾವು ಉಲ್ಲೇಖಿಸಿದ ಪುರಾವೆಗಳಿಂದ ರಾಹುಲ್ ಪ್ರದರ್ಶಿಸಿರುವುದು ಭಾರತದ ಸಂವಿಧಾನದ ಪ್ರತಿ ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...