Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು 'ಚೀನಾ ಸಂವಿಧಾನದ' ಪ್ರತಿಯಲ್ಲ

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

- Advertisement -
- Advertisement -

“ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು, ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ತೋರಿಸಿರುವ ಫೋಟೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಹಿಮಂತ್ ಬಿಸ್ವಾ ಶರ್ಮಾ ಅವರ ಎಕ್ಸ್‌ ಪೋಸ್ಟ್‌ಗೆ ಅಲ್ಲಿಯೇ ಪ್ರತಿಕ್ರಿಯೆ ಕೊಟ್ಟಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರು ರಾಹುಲ್ ಗಾಂಧಿ ಪ್ರದರ್ಶಿಸಿದ ಬಣ್ಣದ್ದೇ ಸಂವಿಧಾನದ ಪ್ರತಿಯನ್ನು ವ್ಯಕ್ತಿಯೊಬ್ಬರಿಗೆ ನೀಡಿದ ಫೋಟೋ ಹಂಚಿಕೊಂಡಿದ್ದು, “ಹಿಮಂತ್ ಬಿಸ್ವಾ ಶರ್ಮಾ ಅವರೇ ನಿಮ್ಮ ಬಾಸ್ ಅಮಿತ್ ಶಾ ಅವರಲ್ಲಿ ಈ ಬಗ್ಗೆ ಪರಿಶೀಲಿಸಲು ಹೇಳಿ” ಎಂದಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಪ್ರದರ್ಶಿಸಿದ್ದು ಚೀನಾದ ಸಂವಿಧಾನ ಪ್ರತಿಯಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ ಫೋಟೋದ ಬಗ್ಗೆ ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಮೇ 6, 2024ರಂದು ಅದೇ ಫೋಟೋ ಬಳಸಿ business-standard.com ಸುದ್ದಿ ಪ್ರಕಟಿಸಿರುವುದು ಲಭ್ಯವಾಗಿದೆ. ಆ ಸುದ್ದಿಯ ಪ್ರಕಾರ, ಮೇ 5ರಂದು ತೆಲಂಗಾಣದ ಗದ್ವಾಲ್‌ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ರಾಹುಲ್ ಗಾಂಧಿ ಸಂವಿಧಾನದ ಪ್ರತಿ ಪ್ರದರ್ಶಿಸಿದ್ದಾರೆ.

ರಾಹುಲ್ ಗಾಂಧಿ ಪ್ರದರ್ಶಿಸಿದ ಕೆಂಪು ಬಣ್ಣದ ಹೊದಿಕೆ (ಕವರ್) ಹೊಂದಿರುವ ಸಂವಿಧಾನದ ಪ್ರತಿಯ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಆ ರೀತಿಯ ಹಲವು ಫೋಟೋಗಳು ಕಾಣಿಸಿಕೊಂಡಿವೆ.

ಮಾರ್ಚ್ 3, 2024ರಂದು ಕರ್ನಾಟಕದ ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿ ತೋರಿಸಿದ್ದರು. ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ’ ವರದಿ ಮಾಡಿತ್ತು. ಆ ವರದಿಯಲ್ಲಿ ರಾಹುಲ್ ಗಾಂಧಿ ಪ್ರದರ್ಶಿಸಿದ್ದು, ‘THE CONSTITUTION OF INDIA’ ಎಂದು ಸ್ಪಷ್ಟವಾಗಿ ಬರೆದಿರುವುದನ್ನು ನಾವು ನೋಡಬಹುದು.

‘ಬ್ಯುಸಿನೆಸ್ ಸ್ಟ್ಯಾಂಡರ್ಡ್’ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಅದೇ ಫೋಟೊ ಪ್ರಕಟಿಸಿದ್ದು, ಎಲ್ಲದರಲ್ಲಿಯೂ ‘THE CONSTITUTION OF INDIA’ ಎಂದು ಬರೆದಿರುವುದನ್ನು ನಾವು ನೋಡಬಹುದು.

ರಾಹುಲ್ ಗಾಂಧಿಯವರು ಬಹುತೇಕ ಎಲ್ಲಾ ಸಾರ್ವಜನಿಕ ಸಭೆಗಳಿಗೆ ಕೋಟ್ ಪಾಕೆಟ್ ಎಡಿಷನ್‌ನ ಚಿಕ್ಕ ಗಾತ್ರದ ಭಾರತದ ಸಂವಿಧಾನದ ಪ್ರತಿಯನ್ನು ಕೊಂಡೊಯ್ಯುತ್ತಾರೆ. ‘ನಾವು ಸಂವಿಧಾನವನ್ನು ರಕ್ಷಿಸುತ್ತೇವೆ’ ಎಂದು ಪ್ರಮಾಣ ಮಾಡುತ್ತಾರೆ. ಈ ಕುರಿತು ಗೂಗಲ್‌ನಲ್ಲಿ ಹುಡುಕಿದಾಗ ಹಲವಾರು ಪ್ರಕಾಶನಗಳು ಕೆಂಪು ಮತ್ತು ಕಪ್ಪು ಬಣ್ಣದ ಭಾರತದ ಸಂವಿಧಾನದ ಚಿಕ್ಕಗಾತ್ರದ ಪ್ರತಿಯನ್ನು ಮುದ್ರಿಸಿರುವುದನ್ನು ನೋಡಬಹುದು. ಹಲವಾರು ಆನ್‌ಲೈನ್‌ ಫ್ಲಾಟ್‌ಫಾರಂಗಳಲ್ಲಿ ಅವುಗಳನ್ನು ನಾವು ಕೊಳ್ಳಬಹುದುದಾಗಿದೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿಯಾಗಿದ್ದ ರಾಮನಾಥ್ ಕೋವಿಂದ್ ಅವರಿಗೆ ಅದೇ ಕೆಂಪು ಬಣ್ಣದ ಹೊದಿಕೆ ಹೊಂದಿರುವ ಸಂವಿಧಾನದ ಪ್ರತಿಯನ್ನು ನೀಡಿದ್ದರು. ಈ ಕುರಿತ ಫೋಟೋಗಳನ್ನು ಮೊಹಮ್ಮದ್ ಝುಬೈರ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಹಾಗಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಚೀನಾದ ಸಂವಿಧಾನದ ಪ್ರತಿ ತೋರಿಸಿದ್ದಾರೆಯೇ? ಎಂಬ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಅವರ ಅನುಮಾನ ಅಥವಾ ಪ್ರತಿಪಾದನೆ ಸುಳ್ಳು. ಮೇಲೆ ನಾವು ಉಲ್ಲೇಖಿಸಿದ ಪುರಾವೆಗಳಿಂದ ರಾಹುಲ್ ಪ್ರದರ್ಶಿಸಿರುವುದು ಭಾರತದ ಸಂವಿಧಾನದ ಪ್ರತಿ ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...