Homeಮುಖಪುಟ'ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು': ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ...

‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

- Advertisement -
- Advertisement -

ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಸುಪ್ರೀಂ ನಿರ್ದೇಶನದ ಕೆಲವೇ ದಿನಗಳಲ್ಲಿ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಿಹಾರದಿಂದ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭರವಸೆ ನೀಡಿದ್ದರು, ಆ ಕಾರಣಕ್ಕೆ ನಾನು ರಾಜೀನಾಮೆ ನೀಡಿದ್ದೆ, ಆದರೆ ಆ ಬಳಿಕ ನನಗೆ ವಂಚಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಬಿಹಾರದ ಬಕ್ಸರ್ ಮೂಲದ ಆನಂದ್ ಮಿಶ್ರಾ ಮೇ 7ರಂದು ಸ್ವತಂತ್ರ ಅಭ್ಯರ್ಥಿಯಾಗಿ ಬಕ್ಸರ್‌ನಿಂದ ಸಂಸತ್ತಿಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ತಂಡದ ನೇತೃತ್ವವನ್ನು ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಆನಂದ್ ಮಿಶ್ರಾ ಅವರಿಗೆ ವಹಿಸಿಕೊಡಲಾಗಿತ್ತು.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಮಣಿಪುರದ ಹೊರಗಿನ ಅಧಿಕಾರಿಗಳೊಂದಿಗೆ ಎಸ್‌ಐಟಿ ತಂಡವನ್ನು ರಚಿಸುವಂತೆ ತಿಳಿಸಲಾಗಿತ್ತು ಮತ್ತು ತನಿಖೆ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ಮೇ 3, 2023 ರಿಂದ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆದಿತ್ತು. ಈ ವೇಳೆ 220ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸುಮಾರು 60,000 ಜನರು ಸ್ಥಳಾಂತರಗೊಂಡು ಈಗಲೂ ನಿರಾಶ್ರಿತರ ಶಿಬಿರಗಳಲ್ಲಿ ದಿನ ದೂಡುತ್ತಿದ್ದಾರೆ. ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಭುಗಿಲೆದ್ದ ಈ ಹಿಂಸಾಚಾರ ದೇಶದ ಕಣ್ತೆರೆಯುವಂತೆ ಮಾಡಿತ್ತು. ಜನಸಮೂಹವು ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಬಿಜೆಪಿ ಆಡಳಿತದ ಮಣಿಪುರದಲ್ಲಿನ ಕಲಹದ ಬಗ್ಗೆ ಮೌನ ಮುರಿಯಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲಾಗಿತ್ತು. ಹಿಂಸಾಚಾರ, ಕಾನೂನು ಮತ್ತು ಸುವ್ಯವಸ್ಥೆ ಕುಸಿತದ ನಡುವೆಯೂ ಮೋದಿ ಆಡಳಿತವು ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಸಮರ್ಥಿಸುತ್ತಲೇ ಬಂದಿತ್ತು.

ಅಸ್ಸಾಂ ಮುಖ್ಯಮಂತ್ರಿ ಶರ್ಮಾ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ಕಾರಣ ಮಣಿಪುರ ಹಿಂಸಾಚಾರದ ಎಸ್‌ಐಟಿಯ ನೇತೃತ್ವ ವಹಿಸಲು ಸೂಚಿಸಿದ ಕೆಲವೇ ದಿನಗಳಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೆ ಎಂದು ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ಹೇಳಿಕೊಂಡಿದ್ದಾರೆ. ಡಿ.28ರಂದು ಪ್ರಕಟವಾದ ವರದಿಗಳ ಪ್ರಕಾರ, ಮಿಶ್ರಾ ಅವರು ಡಿ.18ರಂದು ತಮ್ಮ ರಾಜೀನಾಮೆಯನ್ನು ಡಿಜಿಪಿ ಮೂಲಕ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಅವರನ್ನು ಮಣಿಪುರ ಹಿಂಸಾಚಾರ ಪ್ರಕರಣದ ಎಸ್‌ಐಟಿ ತನಿಖೆಯ ತಂಡದ ನೇತೃತ್ವವನ್ನು ನೀಡಿದ ಬೆನ್ನಲ್ಲಿ ನಡೆದಿತ್ತು.

ಏಪ್ರಿಲ್ 2ರಂದು ಫೇಸ್‌ಬುಕ್‌ನಲ್ಲಿ ವೀಡಿಯೊ ಹೇಳಿಕೆಯಲ್ಲಿ ಮಿಶ್ರಾ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು. ದೇಶದ ಹಿತಕ್ಕಾಗಿ ನನ್ನ ಅಭಿಪ್ರಾಯಗಳನ್ನು ಉತ್ತಮವಾಗಿ ಕಾರ್ಯಗತಗೊಳಿಸಲು ನಾನು ದೇಶದ ರಾಜಕೀಯ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದೆ. ನನಗೆ ಟಿಕೆಟ್ ಸಿಗದ ಕಾರಣ ಮತ್ತು ಆ ಮಾರ್ಗವು ಕಾರ್ಯರೂಪಕ್ಕೆ ಬರದ ಕಾರಣ, ನಾನು ಇದನ್ನು ಸ್ವತಂತ್ರವಾಗಿ ಮಾಡುತ್ತೇನೆ ಏಕೆಂದರೆ ದೇಶ ಮತ್ತು ಜನರಿಗಾಗಿ ಕೆಲಸ ಮಾಡುವ ಇಚ್ಛೆ ಇನ್ನೂ ಇದೆ ಎಂದು ಹೇಳಿಕೊಂಡಿದ್ದರು.

2001ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಮಿಶ್ರಾ ಮೇಘಾಲಯದಲ್ಲಿ ನಿಯೋಜಿತರಾಗಿದ್ದಾಗ ಈಶಾನ್ಯದಲ್ಲಿ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಗಮನ ಸೆಳೆದಿದ್ದರು ಮತ್ತು ಪೊಲೀಸ್‌ ಇಲಾಖೆಯಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದರು.

ಮೇ 18ರಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬಿಹಾರದಲ್ಲಿ ಬಿಜೆಪಿಯ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಆನಂದ್‌ ಮಿಶ್ರಾ ಬಿಜೆಪಿಯ ಮತಗಳನ್ನು ವಿಭಜಿಸಲು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಆರ್‌ಜೆಡಿ ಬೆಂಬಲದಿಂದ ಬಕ್ಸರ್‌ನಿಂದ ಕಣಕ್ಕಿಳಿದಿದ್ದಾರೆ ಎಂದು ಆರೋಪಿಸಿದ್ದರು. ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮಿಶ್ರಾ, ಹಿಮಂತ ಬಿಸ್ವಾ ಶರ್ಮಾ ಮತ್ತು ಬಿಜೆಪಿ ನನ್ನನ್ನು ಬಿಜೆಪಿಗೆ ಪರಿಚಯಿಸುವುದಾಗಿ ಮತ್ತು ಬಿಜೆಪಿ ಸೇರಿಸಿಕೊಂಡು ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡುವುದಾಗಿ ಭರವಸೆ ನೀಡಿ ನನ್ನನ್ನು ಐಪಿಎಸ್‌ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕೇಳಿದರು. ಆದರೆ ಅಂತಿಮವಾಗಿ ಅವರು ದ್ರೋಹ ಮಾಡಿದ್ದಾರೆ, ನನ್ನನ್ನು ಅವರು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿಲ್ಲ, ನನಗೆ ಬಿಜೆಪಿ ಟಿಕೆಟ್‌ ನೀಡಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...